September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಜ.22: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ ಹಾಗೂ ಮೂಡಪ್ಪ ಸೇವೆ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ನಾಗೇಶ ತಂತ್ರಿಗಳವರ ನೇತೃತ್ವದಲ್ಲಿ 108 ಕಾಯಿ ಗಣಹೋಮ ಹಾಗೂ ಮೂಡಪ್ಪ ಸೇವೆ ಜ.22 ರಂದು ನಡೆಯಲಿದೆ ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ ತಿಳಿಸಿದ್ದಾರೆ.

ಬೆಳಿಗ್ಗೆ 8.00ರಿಂದ 108 ಕಾಯಿ ಗಣಹೋಮ ಮತ್ತು ಅಥರ್ವಶೀರ್ಷಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಪಲ್ಲಪೂಜೆ, ರಾತ್ರಿ ಗಂಟೆ 7.30ರಿಂದ ಮೂಡಪ್ಪಸೇವೆ, ಮಹಾಮಂಗಳಾರತಿ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.


ಸಾಂಸ್ಕೃತಿಕ ಕಾರ್ಯಕ್ರಮ: ಬೆಳಗ್ಗೆ ಶ್ರೀ ವಾಮನ್ ನಾಯಕ್ ಉಪ್ಪಿನಂಗಡಿ ಇವರ ಸಂಯೋಜನೆಯಲ್ಲಿ ಆಸಕ್ತ ವಿವಿಧ ಭಜನಾ ತಂಡಗಳಿಂದ “ಭಜನಾ ಸೇವೆ”, ಸಂಜೆ ಶ್ರೀ ಕ್ಷೇತ್ರ ಸೌತಡ್ಕದ ಶಿಶುಮಂದಿರದ ಪುಟಾಣಿ ವಿದ್ಯಾರ್ಥಿಗಳಿಂದ “ಚಿಣ್ಣರ ಚಿಲಿಪಿಲಿ” ಸಾಯಂಕಾಲ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗಾಯಕ ಪುತ್ತೂರು ಚಂದ್ರಶೇಖರ ಹೆಗ್ಡೆ ನಿರ್ದೇಶನದ ಪುನೀತ್ ಆರ್ಕೆಸ್ಟ್ರಾ -ಪುತ್ತೂರು ಇವರಿಂದ “ಭಕ್ತಿ ಸಿಂಚನ”, ರಾತ್ರಿ ನರೇಶ್ ಕುಮಾರ್ ಸಸಿಹಿತ್ಲು ನಿರ್ದೇಶನದ ತುಳು ನಾಟಕ “ಬ್ರಹ್ಮ ರಕ್ಕಸ” ನಡೆಯಲಿದೆ.

Related posts

ರೆಖ್ಯ: ಶ್ರೀಮತಿ ಬಿರ್ಕು ನಿಧನ

Suddi Udaya

ಮೇ. 16 : ತುರ್ತು ಕಾಮಗಾರಿ ಪ್ರಯುಕ್ತ ನಾನಾ ಕಡೆಗಳಲ್ಲಿ ವಿದ್ಯುತ್ ಕಡಿತ

Suddi Udaya

ಬೆಳಾಲು: ಪೆರಿಯಡ್ಕ ಶಾಲಾ ರಜತ ಮಹೋತ್ಸವ: ಪ್ರವೇಶ ದ್ವಾರ ಲೋಕಾರ್ಪಣೆ- ಸಭಾ ಕಾರ್ಯಕ್ರಮ

Suddi Udaya

ಎಸ್ ಎಸ್ ಎಲ್ ಸಿ ಮರು ಮೌಲ್ಯಮಾಪನ: ನಡ ಸರಕಾರಿ ಪ್ರೌಢಶಾಲೆಗೆ ಶೇ. 100 ಫಲಿತಾಂಶ

Suddi Udaya

ಬಳಂಜ–ನಾಲ್ಕೂರಿನ ಯುವಕರಿಂದ ಅಮರನಾಥ ಯಾತ್ರೆ ಪವಿತ್ರ ಹಿಮಲಿಂಗ ದರ್ಶನದೊಂದಿಗೆ ವೈಷ್ಣೋದೇವಿ, ಶಿವಖೋರಿ ಸೇರಿದಂತೆ ಹಲವು ಪುಣ್ಯಕ್ಷೇತ್ರಗಳಿಗೆ ಭೇಟಿ

Suddi Udaya

ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಹರೀಶ್ ಪೂಂಜ ನೇತೃತ್ವದಲ್ಲಿ ವರ್ತಕರ ಸಂಘದ ಬೇಡಿಕೆಯ ಮೇರೆಗೆ ಹೆದ್ದಾರಿಯ ಅಧಿಕಾರಿಗಳ, ಜನಸಂಪರ್ಕ ಕಾರ್ಯಕ್ರಮ

Suddi Udaya
error: Content is protected !!