July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾಲಾಡಿ ನವುಂಡ ಪರಿಸರದಲ್ಲಿ ಎರಡು ಚಿರತೆಗಳು ಪತ್ತೆ: ನಾಯಿಯ ಮೇಲೆ ದಾಳಿ: ನಾಗರಿಕರಲ್ಲಿ ಸೃಷ್ಟಿಯಾದ ಆತಂಕ

ಮಡಂತ್ಯಾರು: ಇಲ್ಲಿಯ ಮಾಲಾಡಿ ಗ್ರಾಮದ ಅಂತರ, ನವುಂಡ ದೇವಸ್ಥಾನದ ಸಮೀಪ ಜ.20 ರಂದು ರಾತ್ರಿ ಎರಡು ಚಿರತೆಗಳು ರಸ್ತೆ ಬದಿ ಕಂಡುಬಂದಿದ್ದು, ನಾಯಿಯೊಂದರ ಮೇಲೆ ದಾಳಿ ನಡೆಸಿ ಕೊಂದು ಹಾಕಿದ್ದು, ನಾಗರಿಕರಲ್ಲಿ ಆತಂಕ ಎದುರಾಗಿದೆ.

ಸ್ಥಳೀಯರೋರ್ವರು ಬೈಕ್‌ನಲ್ಲಿ ರಾತ್ರಿ ಹೋಗುತ್ತಿರುವಾಗ ರಸ್ತೆ ಬದಿ ಎರಡು ಚಿರತೆಗಳು ಇರುವುದು ಕಂಡು ಬಂದಿದೆ. ದೊಡ್ಡ ಚಿರತೆ ಮತ್ತೊಂದು ಮರಿ ಚಿರತೆಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಚಿರತೆಗಳು ನಾಯಿಯೊಂದರ ಮೇಲೆ ದಾಳಿ ನಡೆಸಿದ್ದು, ನಾಯಿ ರಸ್ತೆಯಲ್ಲೇ ಸತ್ತು ಬಿದ್ದಿದೆ. ಕೂಡಲೇ ಸ್ಥಳೀಯರು ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದ್ದು, ಇಲಾಖಾಧಿಕಾರಿಗಳು ರಾತ್ರಿಯೇ ಸ್ಥಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಚಿರತೆ ಸೆರೆ ಹಿಡಿಯಲು ಬೋನ್ ಇಡುವುದಾಗಿ ಭರವಸೆ ನೀಡಿದ್ದಾರೆ.

ಮಾಲಾಡಿ ಪರಿಸರದಲ್ಲಿ ಚಿರತೆ ಇರುವ ಸುದ್ದಿ ತಿಳಿದು ನಾಗರಕರಿಗೆ ಭಯ ಭೀತರಾಗಿದ್ದಾರೆ. ಮಾಲಾಡಿ ಗ್ರಾಮದ ನವುಂಡ, ಅಂತರ ಪರಿಸರದ ನಾಗರಿಕರು, ಶಾಲಾ, ಕಾಲೇಜುಗಳಿಗೆ ಹೋಗುವ ಮಕ್ಕಳು ಜಾಗೃತಿ ವಹಿಸುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

Related posts

ಖ್ಯಾತ ಪತ್ರಕರ್ತ, ಉತ್ತಮ ಕತೆಗಾರ ಮನೋಹರ್ ಪ್ರಸಾದ್ ನಿಧನ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಕುಶಾಲಪ್ಪ ಗೌಡ ಹಾಗೂ ಜಯಾನಂದ ಗೌಡ ರವರಿಗೆ ಸನ್ಮಾನ

Suddi Udaya

ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅತ್ಯಾಚಾರ ಪ್ರಕರಣ: ತನಿಖೆ ಆರಂಭಿಸಿದ ಸಿಐಡಿ ತಂಡ

Suddi Udaya

ಸೌತಡ್ಕ ಬಯಲು ಗಣಪನಿಗೆ ವಾರ್ಷಿಕ ಮೂಡಪ್ಪ ಸೇವೆಯ ಸಂಭ್ರಮ   

Suddi Udaya

ರೆಖ್ಯ: ಅಕ್ರಮವಾಗಿ ಲಾರಿಯಲ್ಲಿ ಅಕೇಷಿಯ ಮತ್ತು ಮ್ಯಾಜಿಯಂ ಮಿಶ್ರಿತ ಬಿಲ್ಲೆಟ್ಸ್ ಸಾಗಾಟ:

Suddi Udaya

ನಾವೂರು: ರಸ್ತೆ ಅವಘಡದಲ್ಲಿ ಮೃತಪಟ್ಟ ಚಂದ್ರಹಾಸ್ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya
error: Content is protected !!