37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಜೂರು ಉರೂಸ್; ಪ್ರತಿದಿನ‌‌ ವಿಭಿನ್ನ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನ

ಬೆಳ್ತಂಗಡಿ: ಸುಮಾರು 8 ಶತಮಾನಗಳಿಗೂ ಅಧಿಕ ವರ್ಷಗಳ ಇತಿಹಾಸವಿರುವ ದಕ್ಷಿಣ ಭಾರತದ ಅಜ್ಮೀರ್ ಎಂದೇ ಖ್ಯಾತಿವೆತ್ತಿರುವ ಸರ್ವಧರ್ಮೀಯರ ಸಮನ್ವಯ ಕೇಂದ್ರ ಕಾಜೂರು ದರ್ಗಾ ಶರೀಫ್‌ನಲ್ಲಿ ಜ.16 ರಿಂದ ಆರಂಭಗೊಂಡ ಉರೂಸ್ ಸಂಭ್ರಮದ ಭಾಗವಾಗಿ ಪ್ರತಿದಿನ ವಿಭಿನ್ನ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನಗೊಳ್ಳುತ್ತಿದೆ.‌
ಉಪನ್ಯಾಸ ಮಾಲಿಕೆಯನ್ನು ಜ.16 ರಂದು ಸಯ್ಯಿದ್ ಕಾಜೂರು‌ ತಂಙಳ್‌ ಶುಭಾರಂಭಗೊಳಿಸಿದರೆ,
ಜ.17 ರಂದು ಸಯ್ಯಿದ್‌‌ ಕಿಲ್ಲೂರು ತಂಙಳ್ ಉಪನ್ಯಾಸ ನೀಡಿದರು. ಜ.18 ರಂದು ಲೆತೀಫ್ ಸಖಾಫಿ ಕಾಂತಪುರಂ ನೇತೃತ್ವದಲ್ಲಿ ಮದನಿಯಂ ಮಜ್ಲಿಸ್ ನಡೆಯಿತು. ಜ.19. ರಂದು ದಾರುಸ್ಸಲಾಂ ಬೆಳ್ತಂಗಡಿಯ ಚೇರ್ಮೆನ್ ಸಯ್ಯಿದ್ ಜಿಫ್ರಿ ತಂಙಳ್ ದುಆ ನೇತೃತ್ವ ವಹಿಸಿ, ವಾಗ್ಮಿ ಅಬ್ದುಲ್ ಅಝೀಝ್ ಅಶ್ರಫಿ ಪಾಣತ್ತೂರು ಉಪನ್ಯಾಸ ನೀಡಿದರು. ಜ.20 ರಂದು ಜಲಾಲಿ ಉಸ್ತಾದ್ ಉಪನ್ಯಾಸ ನೆರವೇರಿಸಿದರು. ಜ.21 ರಂದು ಪೆರ್ಮುಗಂ ಅಶ್ರಫ್ ಉಸ್ತಾದ್ ನೇತೃತ್ವದಲ್ಲಿ ಇಸ್ಲಾಮಿಕ್ ಕಥಾಪ್ರಸಂಗ ನಡೆಸಿಕೊಡಲಿದ್ದಾರೆ.

ದಿಕ್ರ್ ಮಜ್ಲಿಸ್, ಪದವಿ ಪ್ರದಾನ, ಉರೂಸ್ ಸಮಾರೋಪ; ಉರೂಸಿನ ಅಂಗವಾಗಿ ನಡೆಯುವ ಕಾರ್ಯಕ್ರಮಗಳ ಪೈಕಿ‌ ಇನ್ನು 4 ದಿನಗಳು ಮಾತ್ರ ಬಾಕಿಯಿದ್ದು, ಜ.22 ರಂದು ಆಧ್ಯಾತ್ಮಿಕ ಕಾರ್ಯಕ್ರಮವಾದ “ಬೃಹತ್ ದ್ಸಿಕ್ರ್ ಮಜ್ಲಿಸ್” ಬಾಯಾರ್ ತಂಙಳ್ ನೇತೃತ್ವದಲ್ಲಿ ನಡೆಯಲಿದೆ. ಡಾ. ಕಾವಳಕಟ್ಟೆ ಹಝ್ರತ್ ಸಹಿತ ಉಲೆಮಾ ಪ್ರಮುಖರು ಭಾಗವಹಿಸಲಿದ್ದಾರೆ.
ಜ. 23 ರಂದು ಕಾಜೂರು ಮಹಿಳಾ ಶರೀಅತ್ ಕಾಲೇಜು ವಿದ್ಯಾರ್ಥಿಗಳ ಪದವಿ ಪ್ರಧಾನ ಸಮಾರಂಭ ನಡೆಯಲಿದೆ.
ಜ. 25 ರಂದು ಬೆಳಿಗ್ಗೆ ಉರೂಸ್ ಸಮಾರಂಭ ನಡೆಯಲಿದ್ದು, ಸಯ್ಯಿದ್ ಕುಂಬೋಳ್ ತಂಙಳ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಜೆ ಸಮಾರೋಪ ಸಮಾರಂಭಕ್ಕೆ ಸುಲ್ತಾನುಲ್ ಉಲಮಾ, ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎ.ಪಿ ಉಸ್ತಾದ್ ನೇತೃತ್ವ ನೀಡಲಿದ್ದಾರೆ. ಸಮಾರಂಭದಲ್ಲಿ ವಿಧಾನ ಸಭಾ ಸ್ಪೀಕರ್ ಯು.ಟಿ ಖಾದರ್, ವಕ್ಫ್ ಸಚಿವ ಬಿ.ಝೆಡ್ ಝಮೀರ್ ಅಹಮ್ಮದ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್,ಮೌಲಾನಾ ಶಾಫಿ ಸ‌ಅದಿ, ಅಝೀಝ್ ದಾರಿಮಿ ಚೊಕ್ಕಬೆಟ್ಟು, ದ.ಕ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ, ಮೆಸ್ಕಾಂ ನಿಗಮಾಧ್ಯಕ್ಷ ಕೆ ಹರೀಶ್ ಕುಮಾರ್ ಸಹಿತ ಗಣ್ಯರು ಭಾಗವಹಿಸಲಿದ್ದಾರೆ. ಕೊನೆಯ‌ ದಿನ ಅನ್ನದಾನ ಕೂಡ‌ ನಡೆಯಲಿದೆ.

Related posts

ಜಿಲ್ಲಾ ಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ಕ್ರೀಡೋತ್ಸವ: ನಡ ಸರಕಾರಿ ಪದವಿ ಪೂರ್ವ ಕಾಲೇಜು ರೇಂಜರ್ಸ್ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಜು.26: ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ “ಕಾರ್ಗಿಲ್ ವಿಜಯ ದಿವಸ್” ಪಂಜಿನ ಮೆರವಣಿಗೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಪೋಕ್ಸೋ ಕಾಯಿದೆಯ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಮಲವಂತಿಗೆ ಗ್ರಾ.ಪಂ. ಮತ್ತು ಕೆನರಾ ಬ್ಯಾಂಕ್ ವತಿಯಿಂದ ಜನ ಸುರಕ್ಷಾ ಸಂಪೂರ್ಣತಾ ಅಭಿಯಾನ

Suddi Udaya

ಧರ್ಮಸ್ಥಳ ಪೋಸೋಲಿಕೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅ.ಹಿ.ಪ್ರಾ. ಶಾಲಾ ಪೋಷಕರ ಸಭೆ

Suddi Udaya
error: Content is protected !!