24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಜೂರು ಉರೂಸ್; ಪ್ರತಿದಿನ‌‌ ವಿಭಿನ್ನ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನ

ಬೆಳ್ತಂಗಡಿ: ಸುಮಾರು 8 ಶತಮಾನಗಳಿಗೂ ಅಧಿಕ ವರ್ಷಗಳ ಇತಿಹಾಸವಿರುವ ದಕ್ಷಿಣ ಭಾರತದ ಅಜ್ಮೀರ್ ಎಂದೇ ಖ್ಯಾತಿವೆತ್ತಿರುವ ಸರ್ವಧರ್ಮೀಯರ ಸಮನ್ವಯ ಕೇಂದ್ರ ಕಾಜೂರು ದರ್ಗಾ ಶರೀಫ್‌ನಲ್ಲಿ ಜ.16 ರಿಂದ ಆರಂಭಗೊಂಡ ಉರೂಸ್ ಸಂಭ್ರಮದ ಭಾಗವಾಗಿ ಪ್ರತಿದಿನ ವಿಭಿನ್ನ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನಗೊಳ್ಳುತ್ತಿದೆ.‌
ಉಪನ್ಯಾಸ ಮಾಲಿಕೆಯನ್ನು ಜ.16 ರಂದು ಸಯ್ಯಿದ್ ಕಾಜೂರು‌ ತಂಙಳ್‌ ಶುಭಾರಂಭಗೊಳಿಸಿದರೆ,
ಜ.17 ರಂದು ಸಯ್ಯಿದ್‌‌ ಕಿಲ್ಲೂರು ತಂಙಳ್ ಉಪನ್ಯಾಸ ನೀಡಿದರು. ಜ.18 ರಂದು ಲೆತೀಫ್ ಸಖಾಫಿ ಕಾಂತಪುರಂ ನೇತೃತ್ವದಲ್ಲಿ ಮದನಿಯಂ ಮಜ್ಲಿಸ್ ನಡೆಯಿತು. ಜ.19. ರಂದು ದಾರುಸ್ಸಲಾಂ ಬೆಳ್ತಂಗಡಿಯ ಚೇರ್ಮೆನ್ ಸಯ್ಯಿದ್ ಜಿಫ್ರಿ ತಂಙಳ್ ದುಆ ನೇತೃತ್ವ ವಹಿಸಿ, ವಾಗ್ಮಿ ಅಬ್ದುಲ್ ಅಝೀಝ್ ಅಶ್ರಫಿ ಪಾಣತ್ತೂರು ಉಪನ್ಯಾಸ ನೀಡಿದರು. ಜ.20 ರಂದು ಜಲಾಲಿ ಉಸ್ತಾದ್ ಉಪನ್ಯಾಸ ನೆರವೇರಿಸಿದರು. ಜ.21 ರಂದು ಪೆರ್ಮುಗಂ ಅಶ್ರಫ್ ಉಸ್ತಾದ್ ನೇತೃತ್ವದಲ್ಲಿ ಇಸ್ಲಾಮಿಕ್ ಕಥಾಪ್ರಸಂಗ ನಡೆಸಿಕೊಡಲಿದ್ದಾರೆ.

ದಿಕ್ರ್ ಮಜ್ಲಿಸ್, ಪದವಿ ಪ್ರದಾನ, ಉರೂಸ್ ಸಮಾರೋಪ; ಉರೂಸಿನ ಅಂಗವಾಗಿ ನಡೆಯುವ ಕಾರ್ಯಕ್ರಮಗಳ ಪೈಕಿ‌ ಇನ್ನು 4 ದಿನಗಳು ಮಾತ್ರ ಬಾಕಿಯಿದ್ದು, ಜ.22 ರಂದು ಆಧ್ಯಾತ್ಮಿಕ ಕಾರ್ಯಕ್ರಮವಾದ “ಬೃಹತ್ ದ್ಸಿಕ್ರ್ ಮಜ್ಲಿಸ್” ಬಾಯಾರ್ ತಂಙಳ್ ನೇತೃತ್ವದಲ್ಲಿ ನಡೆಯಲಿದೆ. ಡಾ. ಕಾವಳಕಟ್ಟೆ ಹಝ್ರತ್ ಸಹಿತ ಉಲೆಮಾ ಪ್ರಮುಖರು ಭಾಗವಹಿಸಲಿದ್ದಾರೆ.
ಜ. 23 ರಂದು ಕಾಜೂರು ಮಹಿಳಾ ಶರೀಅತ್ ಕಾಲೇಜು ವಿದ್ಯಾರ್ಥಿಗಳ ಪದವಿ ಪ್ರಧಾನ ಸಮಾರಂಭ ನಡೆಯಲಿದೆ.
ಜ. 25 ರಂದು ಬೆಳಿಗ್ಗೆ ಉರೂಸ್ ಸಮಾರಂಭ ನಡೆಯಲಿದ್ದು, ಸಯ್ಯಿದ್ ಕುಂಬೋಳ್ ತಂಙಳ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಜೆ ಸಮಾರೋಪ ಸಮಾರಂಭಕ್ಕೆ ಸುಲ್ತಾನುಲ್ ಉಲಮಾ, ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎ.ಪಿ ಉಸ್ತಾದ್ ನೇತೃತ್ವ ನೀಡಲಿದ್ದಾರೆ. ಸಮಾರಂಭದಲ್ಲಿ ವಿಧಾನ ಸಭಾ ಸ್ಪೀಕರ್ ಯು.ಟಿ ಖಾದರ್, ವಕ್ಫ್ ಸಚಿವ ಬಿ.ಝೆಡ್ ಝಮೀರ್ ಅಹಮ್ಮದ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್,ಮೌಲಾನಾ ಶಾಫಿ ಸ‌ಅದಿ, ಅಝೀಝ್ ದಾರಿಮಿ ಚೊಕ್ಕಬೆಟ್ಟು, ದ.ಕ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ, ಮೆಸ್ಕಾಂ ನಿಗಮಾಧ್ಯಕ್ಷ ಕೆ ಹರೀಶ್ ಕುಮಾರ್ ಸಹಿತ ಗಣ್ಯರು ಭಾಗವಹಿಸಲಿದ್ದಾರೆ. ಕೊನೆಯ‌ ದಿನ ಅನ್ನದಾನ ಕೂಡ‌ ನಡೆಯಲಿದೆ.

Related posts

ನಾಲ್ಕೂರು: ಕುದ್ರೋಟ್ಟು ಬೊಕ್ಕಸ ಪರಿಸರದಲ್ಲಿ ಕಾಡುಕೋಣ ಚಿರತೆ ಹಾವಳಿ: ಕರುಣಾಕರ ಹೆಗ್ಡೆಯವರ ಬೇಡಿಕೆಗೆ ಸ್ಪಂದಿಸಿ ದಾರಿದೀಪ ಅಳವಡಿಸಿದ ಬಳಂಜ ಗ್ರಾ.ಪಂ.

Suddi Udaya

ಬಂದಾರು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಕಳೆoಜ ಶಕ್ತಿಕೇಂದ್ರದಲ್ಲಿ ನಮೋ ಯುವಚೌಪಲ್

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ಕಳೆಂಜ ಗ್ರಾ. ಪಂ. ನಲ್ಲಿ ಪ್ರತಿಭಟನೆ

Suddi Udaya

ಕರ್ನೋಡಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ ಪ್ರಕರಣ: ವಾರೀಸುದಾರರ ಪತ್ತೆಗೆ ಮನವಿ

Suddi Udaya

ರಾತ್ರಿ 3 ಗಂಟೆಗೆ ಚಾರ್ಮಾಡಿ ಮೂಲಕ ಬೆಳ್ತಂಗಡಿ ತಲುಪುವ ಬಂಗೇರರ ಪ್ರಾರ್ಥಿವ ಶರೀರ: ಬೆಳ್ತಂಗಡಿ ತಾಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ಅವಕಾಶ ಬೆಳ್ತಂಗಡಿ ನಗರದಲ್ಲಿ ಅಂತಿಮ ಯಾತ್ರೆ

Suddi Udaya
error: Content is protected !!