22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ನಬಾರ್ಡ್ ಅಧಿಕಾರಿಗಳಿಂದ ಅಧ್ಯಯನ ಪ್ರವಾಸ

ಇಂದಬೆಟ್ಟು: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಯನಕ್ಕಾಗಿ 45 ಜನ ಸದಸ್ಯರ ದೇಶದ ವಿವಿಧ ರಾಜ್ಯಗಳ ಅಧಿಕಾರಿಗಳ ತಂಡವು ಜ.20 ರಂದು ಬೇಟಿ ನೀಡಿತು. PACS AS MSC ಯೋಜನೆಡಿ ನಿರ್ಮಾಣವಾಗಿ ಯಶಸ್ವಿಯಾಗಿ ಕಾರ್ಯನಿರ್ವಹಣೆ ಮಾಡುತ್ತಿರುವ ಕಡಿರುದ್ಯಾವರ ಶಾಖೆಗೆ ಬೇಟಿ ನೀಡಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಹರೀಶ್ ಸಾಲಿಯಾನ್ ಇವರು ಸಂಘದ ಮುಖಾಂತರ ವಿತರಣೆಯಾಗುತ್ತಿರುವ ಸಾಲ ಯೋಜನೆಗಳು ಮತ್ತು ಸಂಘದ ಮುಖಾಂತರ ನಡೆಸುತ್ತಿರುವ ಮಾರಾಟ ವ್ಯವಹಾರಗಳ ಸಮಗ್ರವಾದ ಮಾಹಿತಿಯನ್ನು ನೀಡಿದರು.

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘವು 1200 ಕೋಟಿ ವ್ಯವಹಾರವನ್ನು ನಡೆಸಿ,6720 ಸದಸ್ಯರನ್ನು ಹೊಂದಿ, ರೂ 203 ಕೋಟಿಗೂ ಮಿಕ್ಕಿ ಸಾಲ ನೀಡಲಾಗಿದ್ದು, ಇದರಲ್ಲಿ 75.28 ಕೋಟಿಗೂ ಮಿಕ್ಕಿ ಕೃಷಿ ಸಾಲಗಳನ್ನು ವಿತರಿಸಲಾಗಿದೆ. ಹಾಗೂ 127.72 ಕೃಷಿಯೇತರ ಸಾಲಗಳನ್ನು ವಿತರಿಸಲಾಗಿದೆ. 2024-25 ನೇ ಸಾಲಿನಲ್ಲಿ 4.81 ಕೋಟಿ ಲಾಭಗಳಿಸಿದೆ.ಮತ್ತು 10 ಕೋಟಿ ಮಾರಾಟ ವ್ಯವಹಾರವನ್ನು ನಡೆಸಲಾಗಿದೆ. ಸಂಘವು ಪೂರ್ಣ ಪ್ರಮಾಣದ ಮುಖ್ಯ ಕಚೇರಿ ಸೇರಿ ಎಂಟು ಶಾಖೆಗಳನ್ನು ಹೊಂದಿದ್ದು, ಪತ್ತು ಮತ್ತು ಪತ್ತೇತರ ವ್ಯವಹಾರಗಳನ್ನು ನಡೆಸುತ್ತಿದೆ. ಈ ಎಲ್ಲಾ ವ್ಯವಹಾರಗಳ ಯಶಸ್ವಿ ಅನುಷ್ಟಾನದಿಂದ ನಬಾರ್ಡಿನ ಗಮನ ಸೆಳೆದಿದ್ದು, ಸಂಘದ ಯಶಸ್ವೀ ವ್ಯವಹಾರಕ್ಕೆ ಅಪೆಕ್ಸ್ ಬ್ಯಾಂಕಿನ ರಾಜ್ಯದ ಅತ್ಯುತ್ತಮ ಸಹಕಾರ ಸಂಘ ಮತ್ತು ದ.ಕ.ಜಿ.ಕೇಂದ್ರ ಸಹಕಾರ ಬ್ಯಾಂಕಿನಿಂದ ಜಿಲ್ಲಾ ಮಟ್ಟದ ಉತ್ತಮ ಸಹಕಾರ ಸಂಘವೆಂಬ ಪ್ರಶಸ್ತಿಯನ್ನು ಕೂಡ ಪಡೆದುಕೊಂಡಿದೆ.

ಈ ಸಂದರ್ಭದಲ್ಲಿ ನಬಾರ್ಡ್ ಸಂಸ್ಥೆಯ ಡಿ.ಡಿ.ಎಮ್ ಯೋಗಿಶ್ ಹಾಗೂ ಸಂಘದ ಉಪಾಧ್ಯಕ್ಷ ಆನಂದ ಗೌಡ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಯಾನಂದ ಶೆಟ್ಟಿಗಾರ ಮತ್ತು ಸಹಾಯಕ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಗೌಡ ಹಾಗೂ ಸಂಘದ ಸಿಬ್ಬ೦ದಿಗಳು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ಬಸ್‌ ಕಿಟಕಿಯಿಂದ ಇಳಿಯಲು ಯತ್ನಿಸಿದ ವ್ಯಕ್ತಿ ಆಯತಪ್ಪಿ ರಸ್ತೆಗೆ ಬಿದ್ದು ಸಾವು

Suddi Udaya

ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದ ಪ್ರಕರಣ: ಚಿಕಿತ್ಸೆ ಫಲಿಸದೆ ಕಾಲೇಜು ವಿದ್ಯಾರ್ಥಿ ಸಾವು

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿರುವ ಫಲಾನುಭವಿಗಳಿಗೆ ಜಾಗತಿಕ ವನ್ಯಜೀವಿ ಸಂರಕ್ಷಣಾ ಸಂಘದಿಂದ ಚಾಲಾನ ಪರವಾನಿಗೆ ಹಾಗೂ ತೋಟಗಾರಿಕಾ ಬೆಳೆಗಳ ಸಸಿ ವಿತರಣೆ

Suddi Udaya

ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯಿಂದ ನಿವೃತ್ತ ಶಿಕ್ಷಕ ದಿ| ದೇವಪ್ಪ ಗೌಡರಿಗೆ ಸಂತಾಪ

Suddi Udaya

ಜೂ.21: ಕಳಿಯ ಪ್ರಾ.ಕೃ.ಪ.ಸ. ಸಂಘದ ನೂತನ ಗೋದಾಮು ಕಟ್ಟಡ ಉದ್ಘಾಟನೆ, ರೈತಾಪಿ ಸದಸ್ಯರಿಗೆ ಉಚಿತ ಮೈಲುತುತ್ತು ವಿತರಣೆ ಹಾಗೂ ಎರಡನೇ ಬಾರಿಗೆ ನೂತನ ಶಾಸಕರಾಗಿ ಆಯ್ಕೆಯಾದ ಹರೀಶ್ ಪೂಂಜ ಮತ್ತು ಮದರ್ ತೆರೇಸಾ ಮೆಮೋರಿಯಲ್ ನ್ಯಾಷನಲ್ ಅವಾರ್ಡ್ ಪುರಸ್ಕೃತ ಡಾ. ಎಂ.ಎಸ್ ರಾಜೇಂದ್ರ ಕುಮಾರ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ರಾಜ್ಯಮಟ್ಟದ ಬಾಲಕರ ವಾಲಿಬಾಲ್ ಪಂದ್ಯಾಟ :ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ಚಾಂಪಿಯನ್

Suddi Udaya
error: Content is protected !!