September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾಲಾಡಿ ನವುಂಡ ಪರಿಸರದಲ್ಲಿ ಎರಡು ಚಿರತೆಗಳು ಪತ್ತೆ: ನಾಯಿಯ ಮೇಲೆ ದಾಳಿ: ನಾಗರಿಕರಲ್ಲಿ ಸೃಷ್ಟಿಯಾದ ಆತಂಕ

ಮಡಂತ್ಯಾರು: ಇಲ್ಲಿಯ ಮಾಲಾಡಿ ಗ್ರಾಮದ ಅಂತರ, ನವುಂಡ ದೇವಸ್ಥಾನದ ಸಮೀಪ ಜ.20 ರಂದು ರಾತ್ರಿ ಎರಡು ಚಿರತೆಗಳು ರಸ್ತೆ ಬದಿ ಕಂಡುಬಂದಿದ್ದು, ನಾಯಿಯೊಂದರ ಮೇಲೆ ದಾಳಿ ನಡೆಸಿ ಕೊಂದು ಹಾಕಿದ್ದು, ನಾಗರಿಕರಲ್ಲಿ ಆತಂಕ ಎದುರಾಗಿದೆ.

ಸ್ಥಳೀಯರೋರ್ವರು ಬೈಕ್‌ನಲ್ಲಿ ರಾತ್ರಿ ಹೋಗುತ್ತಿರುವಾಗ ರಸ್ತೆ ಬದಿ ಎರಡು ಚಿರತೆಗಳು ಇರುವುದು ಕಂಡು ಬಂದಿದೆ. ದೊಡ್ಡ ಚಿರತೆ ಮತ್ತೊಂದು ಮರಿ ಚಿರತೆಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಚಿರತೆಗಳು ನಾಯಿಯೊಂದರ ಮೇಲೆ ದಾಳಿ ನಡೆಸಿದ್ದು, ನಾಯಿ ರಸ್ತೆಯಲ್ಲೇ ಸತ್ತು ಬಿದ್ದಿದೆ. ಕೂಡಲೇ ಸ್ಥಳೀಯರು ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದ್ದು, ಇಲಾಖಾಧಿಕಾರಿಗಳು ರಾತ್ರಿಯೇ ಸ್ಥಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಚಿರತೆ ಸೆರೆ ಹಿಡಿಯಲು ಬೋನ್ ಇಡುವುದಾಗಿ ಭರವಸೆ ನೀಡಿದ್ದಾರೆ.

ಮಾಲಾಡಿ ಪರಿಸರದಲ್ಲಿ ಚಿರತೆ ಇರುವ ಸುದ್ದಿ ತಿಳಿದು ನಾಗರಕರಿಗೆ ಭಯ ಭೀತರಾಗಿದ್ದಾರೆ. ಮಾಲಾಡಿ ಗ್ರಾಮದ ನವುಂಡ, ಅಂತರ ಪರಿಸರದ ನಾಗರಿಕರು, ಶಾಲಾ, ಕಾಲೇಜುಗಳಿಗೆ ಹೋಗುವ ಮಕ್ಕಳು ಜಾಗೃತಿ ವಹಿಸುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

Related posts

ಆಮಂತ್ರಣ ಮುದ್ದು ಕೃಷ್ಣ ಸ್ಪರ್ಧೆ ಬಹುಮಾನ ವಿತರಣಾ ಸಮಾರಂಭ

Suddi Udaya

ಕೆರೆಯಲ್ಲಿ ಸ್ನಾನಕ್ಕಿಳಿದ ಯುವಕ ಸಾವು

Suddi Udaya

ಪಿಲಿಚಂಡಿಕಲ್ಲು ನಿವಾಸಿ ಶೇಕ್ ಇಮಾಮ್ ಸಾಹೇಬ್ ಮನೆಗೆ ಬಡಿದ ಸಿಡಿಲು: ಸುಟ್ಟು ಹೋದ ಮನೆಯ ವಿದ್ಯುತ್ ಸಂಪರ್ಕ, ಮನೆಯ ಗೋಡೆಗಳಿಗೆ ಹಾನಿ

Suddi Udaya

ನಕಲಿ ಸಹಿ ಮಾಡಿ ಅಕ್ಷರ ದಾಸೋಹ ಮತ್ತು ಎಸ್.ಎಸ್.ಎ. ಖಾತೆಯ ಹಣ ಡ್ರಾ; ಮುಖ್ಯ ಶಿಕ್ಷಕಿಯ ವಿರುದ್ಧ ಎಸ್.ಡಿ.ಎಂ.ಸಿ ಅಧ್ಯಕ್ಷೆ ದೂರು: ಪೋಜ೯ರಿ ಸಹಿ ಮಾಡಿ ಶಾಲೆಯ ಖಾತೆಯಿಂದ ಯಾವತ್ತೂ ಹಣವನ್ನು ಡ್ರಾ ಮಾಡಿರುವುದಿಲ್ಲ : ಮುಖ್ಯ ಶಿಕ್ಷಕಿ ಸ್ಪಷ್ಟನೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಬೆಳ್ತಂಗಡಿ ತಾ| ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya

ನಿಡ್ಲೆ , ಬೂಡುಜಾಲು ಗ್ರಾಮಸ್ಥರಿಂದ ರಸ್ತೆ ದುರಸ್ತಿ

Suddi Udaya
error: Content is protected !!