September 6, 2026
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿಪ್ಸಿ ಮತ್ತು ಬೈಕ್ ನಡುವೆ ಅಪಘಾತ: ಬೈಕ್ ಸವಾರ ಬಳಂಜ ಶಾಲಾ ಮುಖ್ಯೋಪಾಧ್ಯಾಯರಿಗೆ ಗಂಭೀರ ಗಾಯ

ಬೆಳ್ತಂಗಡಿ ಸಂತೆಕಟ್ಟೆ ಬಳಿ ಜಿಪ್ಸಿ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಜ.21ರಂದು ಸಂಜೆ ನಡೆದಿದೆ.

ಬೈಕ್ ಸವಾರ ಬಳಂಜ ಶಾಲೆಯ ಮುಖ್ಯೋಪಾಧ್ಯಾಯ ರಂಗಸ್ವಾಮಿ ಎಂದು ತಿಳಿದು ಬಂದಿದೆ. ಚರ್ಚ್‌ರೋಡ್‌ನಿಂದ ರಂಗಸ್ವಾಮಿಯವರು ತನ್ನ ಬೈಕಿನಲ್ಲಿ ಬೆಳ್ತಂಗಡಿ ಕಡೆಗೆ ಬರುತ್ತಿರುವಾಗ ಜಿಪ್ಸಿ ಮತ್ತು ಬೈಕ್ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಬೈಕ್ ಸವಾರ ರಂಗಸ್ವಾಮಿ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಪ್ರಮಾಣದ ಗಾಯವಾಗಿದ್ದು ಅವರನ್ನು ಕೂಡಲೇ ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪೋಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ಜೀವಜಲಕ್ಕಾಗಿ ಕೆರೆಗಳ ಪುನಶ್ಚೇತನ : ಧರ್ಮಸ್ಥಳ ಯೋಜನೆಯಿಂದ ಒಂದೇ ವರ್ಷದಲ್ಲಿ ರಾಜ್ಯದ 160 ಕೆರೆಗಳಿಗೆ ಕಾಯಕಲ್ಪ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಇಂಜಿನೀಯರಿಂಗ್ ವಿದ್ಯಾರ್ಥಿ ಅಭಿಷೇಕ್ ರಿಗೆ ಡಿಪ್ಲೋಮ ಸಿಇಟಿ ಯಲ್ಲಿ ರಾಜ್ಯಕ್ಕೆ 20ನೇ ರ್‍ಯಾಂಕ್

Suddi Udaya

ಜು.3: ನಾರಾವಿಯಲ್ಲಿ ಗಾಯತ್ರಿ ಮೆಡಿಕಲ್ಸ್ ಶುಭಾರಂಭ ; ಎಲ್ಲ ರೀತಿಯ ಔಷಧಿಗಳು ಒಂದೇ ಸೂರಿನಡಿ ಲಭ್ಯ

Suddi Udaya

ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಗಳಲ್ಲಿ ಗಣರಾಜ್ಯೋತ್ಸವ ಸಂಭ್ರಮ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ಗುರುವಾಯನಕೆರೆ: ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!