32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾಲಾಡಿ ನವುಂಡ ಪರಿಸರದಲ್ಲಿ ಎರಡು ಚಿರತೆಗಳು ಪತ್ತೆ: ನಾಯಿಯ ಮೇಲೆ ದಾಳಿ: ನಾಗರಿಕರಲ್ಲಿ ಸೃಷ್ಟಿಯಾದ ಆತಂಕ

ಮಡಂತ್ಯಾರು: ಇಲ್ಲಿಯ ಮಾಲಾಡಿ ಗ್ರಾಮದ ಅಂತರ, ನವುಂಡ ದೇವಸ್ಥಾನದ ಸಮೀಪ ಜ.20 ರಂದು ರಾತ್ರಿ ಎರಡು ಚಿರತೆಗಳು ರಸ್ತೆ ಬದಿ ಕಂಡುಬಂದಿದ್ದು, ನಾಯಿಯೊಂದರ ಮೇಲೆ ದಾಳಿ ನಡೆಸಿ ಕೊಂದು ಹಾಕಿದ್ದು, ನಾಗರಿಕರಲ್ಲಿ ಆತಂಕ ಎದುರಾಗಿದೆ.

ಸ್ಥಳೀಯರೋರ್ವರು ಬೈಕ್‌ನಲ್ಲಿ ರಾತ್ರಿ ಹೋಗುತ್ತಿರುವಾಗ ರಸ್ತೆ ಬದಿ ಎರಡು ಚಿರತೆಗಳು ಇರುವುದು ಕಂಡು ಬಂದಿದೆ. ದೊಡ್ಡ ಚಿರತೆ ಮತ್ತೊಂದು ಮರಿ ಚಿರತೆಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಚಿರತೆಗಳು ನಾಯಿಯೊಂದರ ಮೇಲೆ ದಾಳಿ ನಡೆಸಿದ್ದು, ನಾಯಿ ರಸ್ತೆಯಲ್ಲೇ ಸತ್ತು ಬಿದ್ದಿದೆ. ಕೂಡಲೇ ಸ್ಥಳೀಯರು ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದ್ದು, ಇಲಾಖಾಧಿಕಾರಿಗಳು ರಾತ್ರಿಯೇ ಸ್ಥಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಚಿರತೆ ಸೆರೆ ಹಿಡಿಯಲು ಬೋನ್ ಇಡುವುದಾಗಿ ಭರವಸೆ ನೀಡಿದ್ದಾರೆ.

ಮಾಲಾಡಿ ಪರಿಸರದಲ್ಲಿ ಚಿರತೆ ಇರುವ ಸುದ್ದಿ ತಿಳಿದು ನಾಗರಕರಿಗೆ ಭಯ ಭೀತರಾಗಿದ್ದಾರೆ. ಮಾಲಾಡಿ ಗ್ರಾಮದ ನವುಂಡ, ಅಂತರ ಪರಿಸರದ ನಾಗರಿಕರು, ಶಾಲಾ, ಕಾಲೇಜುಗಳಿಗೆ ಹೋಗುವ ಮಕ್ಕಳು ಜಾಗೃತಿ ವಹಿಸುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

Related posts

ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಖರೀದಿಯ ಮೇಲೆ ಶೇ.20 ಸ್ಪೆಷಲ್ ಡಿಸ್ಕೌಂಟ್ ಆಫರ್

Suddi Udaya

ಮರೋಡಿ:ಹರಂಬೆಟ್ಟು ಗುತ್ತು ಮನೆಯಲ್ಲಿ “ಧರ್ಮ ನೇಮೋತ್ಸವ”

Suddi Udaya

ಜ.4: ಸುಲ್ಕೇರಿ ನೂತನ ಶ್ರೀ ನೇಮಿನಾಥ ಸಭಾಭವನ ಉದ್ಘಾಟನೆ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ನೇತ್ರ ತಜ್ಞರಾಗಿ ಡಾ| ರಮೇಶ್ ನೇಮಕ

Suddi Udaya

ಮಚ್ಚಿನ: ಕೃಷಿಕ ಕೃಷ್ಣಪ್ಪ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ತಾಲೂಕು ಮರಾಟಿ ಸಮಾಜ ಸೇವಾ ಸಂಘದ ಮಾಸಿಕ ಸಭೆ

Suddi Udaya
error: Content is protected !!