July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾಲಾಡಿ ನವುಂಡ ಪರಿಸರದಲ್ಲಿ ಎರಡು ಚಿರತೆಗಳು ಪತ್ತೆ: ನಾಯಿಯ ಮೇಲೆ ದಾಳಿ: ನಾಗರಿಕರಲ್ಲಿ ಸೃಷ್ಟಿಯಾದ ಆತಂಕ

ಮಡಂತ್ಯಾರು: ಇಲ್ಲಿಯ ಮಾಲಾಡಿ ಗ್ರಾಮದ ಅಂತರ, ನವುಂಡ ದೇವಸ್ಥಾನದ ಸಮೀಪ ಜ.20 ರಂದು ರಾತ್ರಿ ಎರಡು ಚಿರತೆಗಳು ರಸ್ತೆ ಬದಿ ಕಂಡುಬಂದಿದ್ದು, ನಾಯಿಯೊಂದರ ಮೇಲೆ ದಾಳಿ ನಡೆಸಿ ಕೊಂದು ಹಾಕಿದ್ದು, ನಾಗರಿಕರಲ್ಲಿ ಆತಂಕ ಎದುರಾಗಿದೆ.

ಸ್ಥಳೀಯರೋರ್ವರು ಬೈಕ್‌ನಲ್ಲಿ ರಾತ್ರಿ ಹೋಗುತ್ತಿರುವಾಗ ರಸ್ತೆ ಬದಿ ಎರಡು ಚಿರತೆಗಳು ಇರುವುದು ಕಂಡು ಬಂದಿದೆ. ದೊಡ್ಡ ಚಿರತೆ ಮತ್ತೊಂದು ಮರಿ ಚಿರತೆಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಚಿರತೆಗಳು ನಾಯಿಯೊಂದರ ಮೇಲೆ ದಾಳಿ ನಡೆಸಿದ್ದು, ನಾಯಿ ರಸ್ತೆಯಲ್ಲೇ ಸತ್ತು ಬಿದ್ದಿದೆ. ಕೂಡಲೇ ಸ್ಥಳೀಯರು ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದ್ದು, ಇಲಾಖಾಧಿಕಾರಿಗಳು ರಾತ್ರಿಯೇ ಸ್ಥಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಚಿರತೆ ಸೆರೆ ಹಿಡಿಯಲು ಬೋನ್ ಇಡುವುದಾಗಿ ಭರವಸೆ ನೀಡಿದ್ದಾರೆ.

ಮಾಲಾಡಿ ಪರಿಸರದಲ್ಲಿ ಚಿರತೆ ಇರುವ ಸುದ್ದಿ ತಿಳಿದು ನಾಗರಕರಿಗೆ ಭಯ ಭೀತರಾಗಿದ್ದಾರೆ. ಮಾಲಾಡಿ ಗ್ರಾಮದ ನವುಂಡ, ಅಂತರ ಪರಿಸರದ ನಾಗರಿಕರು, ಶಾಲಾ, ಕಾಲೇಜುಗಳಿಗೆ ಹೋಗುವ ಮಕ್ಕಳು ಜಾಗೃತಿ ವಹಿಸುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

Related posts

ವಿ. ಹರೀಶ್ ನೆರಿಯ ರವರಿಗೆ ಕನ್ನಡ ಭವನದ “ಕನ್ನಡ ಪಯಸ್ವಿನಿ ಪ್ರಶಸ್ತಿ”ಗೆ ಆಯ್ಕೆ

Suddi Udaya

ಕಳೆಂಜ : ಬಿಜೆಪಿ ಕಾರ್ಯಕರ್ತರಿಂದ ಬೈಕ್ ಜಾಥಾ

Suddi Udaya

ಬೆಳ್ತಂಗಡಿ: ಪಿ.ಎಂ.ಶ್ರೀ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ ಹಾಗೂ ಬೆಂಕಿ ಇಲ್ಲದ ಅಡುಗೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿಂದಿ ದಿವಸ ಆಚರಣೆ

Suddi Udaya

ಅಪಘಾತದಲ್ಲಿ ಗಂಭೀರ ಗಾಯಗೊಂಡ ಮಂಚ ಗುರಿಪಳ್ಳ ಇವರಿಗೆ ವಾಟರ್ ಬೆಡ್ ಹಸ್ತಾಂತರ

Suddi Udaya

ಉಜಿರೆ ಶ್ರೀ ಧ. ಮಂ. ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾ ಪ.ಪೂ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಕಾರ್ಯಾಗಾರದ ಸಮಾರೋಪ

Suddi Udaya
error: Content is protected !!