22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸಿ ಎಸ್ ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅದ್ವಿತೀಯ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ: ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

ಬೆಳ್ತಂಗಡಿ: ರಾಷ್ಟ್ರಮಟ್ಟದಲ್ಲಿ ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯಾ ನಡೆಸುವ ,ಕಂಪನಿ ಸೆಕ್ರೆಟರಿ ಪರೀಕ್ಷೆಯ ಎರಡನೇ ಆವೃತ್ತಿಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆ ಮಾಡಿದ್ದಾರೆ.

200 ಅಂಕಗಳ ಪರೀಕ್ಷೆಯಲ್ಲಿ 183 ಅಂಕಗಳನ್ನು ಪಡೆದ ಭವೇಶ್ ಸೀರ್ವಿ ರಾಜ್ಯದಲ್ಲೇ ಅದ್ವಿತೀಯ ಸಾಧಕನಾಗಿ ಗುರುತಿಸಿಕೊಂಡಿದ್ದಾನೆ. ಸಂಜನಾ ಎಸ್ ಜಿ 175, ತನಯ್ ವಿ ಎ 173, ಮಹಮ್ಮದ್ ಸಾಹಿಲ್ 173 , ಜೀವನ್ 155,ಶೀತಲ್ ಕೆ ಆರ್ 144, ಮುರಳಿ ಆರ್ 143,ಅರವಿಂದ್ 128, ಭಾನುಪ್ರಕಾಶ್ 115,ವಿದ್ಯಾ ಗೌರಿ ಗೌಡ 115 ಅಂಕಗಳನ್ನು ಪಡೆದು ಕೊಂಡು ಮುಂದಿನ ಹಂತಕ್ಕೆ ಆಯ್ಕೆಯಾಗಿದ್ದಾರೆ.

ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ನೀಟ್, ಜೆಇಇ, ಸಿಇಟಿ ಮೊದಲಾದ ಕೋಚಿಂಗ್ ಅತ್ಯುತ್ತಮ ಮಟ್ಟದಲ್ಲಿ ಇದ್ದರೆ,

ವಾಣಿಜ್ಯ ವಿಭಾಗದಲ್ಲಿ ಸಿಎ, ಸಿಎಸ್, ಕ್ಲಾಟ್ ಕೋಚಿಂಗ್ ಉನ್ನತ ಮಟ್ಟದಲ್ಲಿದೆ. ಹೀಗಾಗಿಯೇ ವಾಣಿಜ್ಯ ವಿಭಾಗದ ಸಿ ಎಸ್ ಫಲಿತಾಂಶದಲ್ಲೂ ಎಕ್ಸೆಲ್ ನ ವಿದ್ಯಾರ್ಥಿಗಳು ನೂತನ ದಾಖಲೆ ಸ್ಥಾಪಿಸಿದ್ದಾರೆ.

ಸಾಧಕರನ್ನು ಎಕ್ಸೆಲ್ ಪದವಿ ಪೂರ್ವ ಕಾಲೇಜು ಗುರುವಾಯನಕೆರೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರು,ಡೀನ್, ವಿಭಾಗ ಮುಖ್ಯಸ್ಥರು, ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.

Related posts

ಲಯನ್ಸ್ ಕ್ಲಬ್ ವತಿಯಿಂದ ವನಮಹೋತ್ಸವ

Suddi Udaya

ಧರ್ಮಸ್ಥಳದ ಕು. ಸೌಖ್ಯ ಎಸ್. ಜೈನ್ ಮಂಡಿಸಿದ ಸಂಶೋಧನಾ ಪ್ರಬಂಧಗಳು ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲೆ

Suddi Udaya

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಚಂಡಿಕಾ ಹೋಮ

Suddi Udaya

ರಾಜ್ಯ ಮಟ್ಟದ ಮುಕ್ತ ಕರಾಟೆ ಪಂದ್ಯಾಟ: ಉಜಿರೆಯ ಮೋಹನ್ ರವರಿಗೆ ಕುಮಿತೆಯಲ್ಲಿ ಚಿನ್ನದ ಪದಕ

Suddi Udaya

ವರ್ಷ ಕಳೆದರೂ ಇನ್ನೂ ಜನರಿಗೆ ಉಪಯೋಗಕಿಲ್ಲದ ಮಚ್ಚಿನ ಶುದ್ಧ ಕುಡಿಯುವ ನೀರಿನ ಘಟಕ: ತುಕ್ಕು ಹಿಡಿಯುತ್ತಿರುವ ಮಿಷನರಿಗಳು

Suddi Udaya

ಸುಲ್ಕೇರಿ ಬ್ರಹ್ಮ ಶ್ರೀ ಗುರುನಾರಾಯಣ ಸೇವಾ ಸಮಿತಿಯ ಮಾಸಿಕ ಸಭೆ

Suddi Udaya
error: Content is protected !!