July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂಗಾಡಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ತ್ರಿಶಲ ಜೈನ್ ಅವರಿಗೆ ಭಾರತ್ ಸ್ಕೌಟ್ ಗೈಡ್ ಎ.ಎಲ್.ಟಿ ಅರ್ಹತೆ

ಬೆಳ್ತಂಗಡಿ: ಸ. ಉ. ಪ್ರಾ. ಶಾಲೆ ಬಂಗಾಡಿ ಇಲ್ಲಿನ ದೈಹಿಕ ಶಿಕ್ಷಣ ಶಿಕ್ಷಕಿಯಾದ ತ್ರಿಶಲ ಜೈನ್ ರವರು ಭಾರತ್‌ ಸ್ಕೌಟ್ & ಗೈಡ್ ಇದರ ಗೈಡ್ ಕ್ಯಾಪ್ಟನ್ ರಾಗಿ ಸೇವೆ ಸಲ್ಲಿಸುತ್ತಿದ್ದು, ಇವರು ರಾಷ್ಟ್ರೀಯ ತರಬೇತಿ ಕೇಂದ್ರ ಪಚಿಮರಿ ಮಧ್ಯಪ್ರದೇಶದಲ್ಲಿ ಏಪ್ರಿಲ್ ತಿಂಗಳಲ್ಲಿ ನಡೆದ 65ನೇ ಸಹಾಯಕ ಲೀಡರ್ (ALT) ತರಬೇತಿದಾರರ ತರಬೇತಿಯಲ್ಲಿ ಭಾಗವಹಿಸಿ 2025-26 ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕ್ಯಾಂಪೋರಿಯಲ್ಲಿ ಇವರಿಗೆ ALT ಪದವಿಯ ಪ್ರಮಾಣ ಪತ್ರ ಹಾಗೂ ಪ್ಯಾಚ್ಮೆಂಟ್ ನೀಡಿ ಗೌರವಿಸಲಾಗಿದೆ.

ಇವರು ಸುಮಾರು 25 ವರ್ಷಗಳಿಂದ ಭಾರತ್ ಸ್ಕೌಟ್ಸ್ ಅಂಡ್ ಗೈಡ್ ಸಂಸ್ಥೆಯಲ್ಲಿ ಸಕ್ರಿಯವಾಗಿ ತಮ್ಮನ್ನು ತಾವು ತೊಡಗಿಸಿಕೊಂಡು ಕಾರ್ಯನಿರ್ವಹಿಸುತ್ತಿದ್ದಾರೆ. ಮುಂದಿನ ಜ. 30 ರಿಂದ ಫೆ 1 ವರೆಗೆ ಒರಿಸ್ಸಾದ ಭುವನೇಶ್ವರದಲ್ಲಿ ನಡೆಯುವ ರಾಜ್ಯಮಟ್ಟದ LT/ALT ತರಬೇತಿದಾರರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

ಇವರು ಭಾರತ್ ಸ್ಕೌಟ್ಸ್& ಗೈಡ್ಸ್ ನ ತರಬೇತಿಯಾದ ಬೇಸಿಕ್ 2001ರಲ್ಲಿ ಪಿಲಿಕುಳ ಮಂಗಳೂರು, ಎಡ್ವಾನ್ಸ್ 2005 ರಲ್ಲಿ ಸಿ.ಎಸ್.ಐ ಬಾಲಿಕಾಶ್ರಮ ಮುಲ್ಕಿ, ಹೆಚ್ ಡಬ್ಲ್ಯು ಬಿ 2005ರಲ್ಲಿ ಕೊಂಡಜ್ಜಿ ದಾವಣಗೆರೆ, ಪ್ರಿ ಎ.ಎಲ್.ಟಿ 2018 ರಲ್ಲಿ ದೊಡ್ಡಬಳ್ಳಾಪುರ, 2025ರಲ್ಲಿ ALT ರಾಷ್ಟ್ರೀಯ ತರಬೇತಿ ಕೇಂದ್ರ ಪಚಿಮರಿ ಮಧ್ಯಪ್ರದೇಶದಲ್ಲಿ ಪಡೆದುಕೊಂಡಿರುತ್ತಾರೆ.
ಇವರ ಪತಿ ಜಯರಾಜ್ ಜೈನ್ ಅವರು ಸ.ಉ.ಹಿ.ಪ್ರಾ. ಶಾಲೆ ಓಡಿಲ್ನಾಳದಲ್ಲಿ ಹಿರಿಯ ದೈಹಿಕ ಶಿಕ್ಷಣ ಶಿಕ್ಷಕರಾಗಿದ್ದು, ತಾ. ಸರಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Related posts

ನಿಡ್ಲೆ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಮತ್ತು ಮಹಿಳಾ ಗ್ರಾಮಸಭೆ

Suddi Udaya

ಪುತ್ತಿಲ ಸರ್ಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ದೇಶದ ಪ್ರತಿಷ್ಠಿತ “ಎಮಿನೆಂಟ್ ಎಂಜಿನಿಯರ್ ಅವಾರ್ಡ್”ಗೆ ಭಾಜನರಾದ ಇಂಜಿನಿಯರ್ ಜಗದೀಶ್ ಪ್ರಸಾದ್ ಎನ್.

Suddi Udaya

ಕೊಯ್ಯೂರು: ಬರಮೇಲು ನಿವಾಸಿ ವಿನೋದ್ ಅಸೌಖ್ಯದಿಂದ ನಿಧನ

Suddi Udaya

ಓಡಿಲ್ನಾಳ: ಶಕ್ತಿ ಯುವಕ ಮಂಡಲ ರೇಷ್ಮೆ ರೋಡ್ ಇದರ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ವಾರ್ಷಿಕ ಸಾಮಾನ್ಯ ಸಭೆ

Suddi Udaya
error: Content is protected !!