25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಹತ್ಯಡ್ಕ ವಿಠೋಬಾ ರುಕುಮಾಯಿ ದೇಗುಲಕ್ಕೆ ದೇಣಿಗೆ

ಹತ್ಯಡ್ಕ ಗ್ರಾಮದ ದರ್ಭೆತಡ್ಕದಲ್ಲಿ ಜೀರ್ಣೋದ್ದಾರ ಕಾರ್ಯ ಪ್ರಗತಿಯಲ್ಲಿರುವ ವಿಠೋಬಾ ರುಕುಮಾಯಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳಿಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.2 ಲಕ್ಷ ದೇಣಿಗೆ ಚೆಕ್ ಅನ್ನು ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಯಶೋಧರ ಇವರು ದೇವಸ್ಥಾನದ ಆಡಳಿತ ಮಂಡಳಿಗೆ ಜ.21 ರಂದು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ದೇವಳದ ಆಡಳಿತ ಮಂಡಳಿಯ ಪ್ರಮುಖ ರಾದ ರಮೇಶ ಹೆಬ್ಬಾರ್, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಅನಂತ ಗೋಖಲೆ, ಕಾರ್ಯದರ್ಶಿ ಜಿತೇಂದ್ರ ಗೋಖಲೆ, ಸದಸ್ಯರಾದ ಕಾರ್ತಿಕ್ ಹೆಬ್ಬಾರ್, ನರಸಿಂಹ ಪಾಳಂದೆ, ಶ್ರೇಯಸ್ ಪಾಳಂದೆ ಉಪಸ್ಥಿತರಿದ್ದರು.
ಶ್ರೀ ಕ್ಷೇತ್ರ ಧರ್ಮಸ್ಥಳದ ಪರವಾಗಿ ವಲಯ ಮೇಲ್ವಿಚಾರಕಿ ಶಶಿಕಲಾ, ಸೇವಾ ಪ್ರತಿ ನಿಧಿಗಳಾದ ಯಮುನಾ ಎಮ್ ಮತ್ತು ರೂಪಾ,
ಜನಜಾಗೃತಿಯ ವಲಯ ಅಧ್ಯಕ್ಷರಾದ ಸತೀಶ್ ಶೆಟ್ಟಿ ಗುತ್ತು, ಹತ್ಯಡ್ಕ ಎ ಒಕ್ಕೂಟದ ಉಪಾಧ್ಯಕ್ಷರಾದ ಸರೋಜಿನಿ ನಾಯ್ಕ, ಹತ್ಯಡ್ಕ ಬಿ ಒಕ್ಕೂಟದ ಅಧ್ಯಕ್ಷ ಸುನಂದ ಟಿ., ಶೌರ್ಯ ವಿಪತ್ತು ನಿರ್ವಹಣಾ ಸಮಿತಿ ಅರಸಿನಮಕ್ಕಿ ಶಿಶಿಲ ಘಟಕದ ಘಟಕ ಪ್ರತಿನಿಧಿ ಅವಿನಾಶ್ ಭಿಡೆ ಉಪಸ್ಥಿತಿಯಲ್ಲಿ ಚೆಕ್ ಅನ್ನು ಹಸ್ತಾಂತರಿಸಲಾಯಿತು.

Related posts

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್‌ ಕಾಲೇಜಿಗೆ ಶೇ. 100 ಫಲಿತಾಂಶ

Suddi Udaya

ಉಜಿರೆ ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ

Suddi Udaya

ಮಾ.3: ಬೆಳ್ತಂಗಡಿ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ

Suddi Udaya

ಕುವೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನೆ

Suddi Udaya

ಜು.3: ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ

Suddi Udaya

ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪೂರೈಸಿದ ವಿದ್ಯಾರ್ಥಿನಿಯರಿಗೆ ಪತ್ರಿಕಾಲಯಗಳಲ್ಲಿ ತರಬೇತಿಗೆಅರ್ಜಿ ಆಹ್ವಾನ: 20 ಸಾವಿರ ಶಿಷ್ಯವೇತನ

Suddi Udaya
error: Content is protected !!