ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂಗಾಡಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ತ್ರಿಶಲ ಜೈನ್ ಅವರಿಗೆ ಭಾರತ್ ಸ್ಕೌಟ್ ಗೈಡ್ ಎ.ಎಲ್.ಟಿ ಅರ್ಹತೆ

ಬೆಳ್ತಂಗಡಿ: ಸ. ಉ. ಪ್ರಾ. ಶಾಲೆ ಬಂಗಾಡಿ ಇಲ್ಲಿನ ದೈಹಿಕ ಶಿಕ್ಷಣ ಶಿಕ್ಷಕಿಯಾದ ತ್ರಿಶಲ ಜೈನ್ ರವರು ಭಾರತ್‌ ಸ್ಕೌಟ್ & ಗೈಡ್ ಇದರ ಗೈಡ್ ಕ್ಯಾಪ್ಟನ್ ರಾಗಿ ಸೇವೆ ಸಲ್ಲಿಸುತ್ತಿದ್ದು, ಇವರು ರಾಷ್ಟ್ರೀಯ ತರಬೇತಿ ಕೇಂದ್ರ ಪಚಿಮರಿ ಮಧ್ಯಪ್ರದೇಶದಲ್ಲಿ ಏಪ್ರಿಲ್ ತಿಂಗಳಲ್ಲಿ ನಡೆದ 65ನೇ ಸಹಾಯಕ ಲೀಡರ್ (ALT) ತರಬೇತಿದಾರರ ತರಬೇತಿಯಲ್ಲಿ ಭಾಗವಹಿಸಿ 2025-26 ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕ್ಯಾಂಪೋರಿಯಲ್ಲಿ ಇವರಿಗೆ ALT ಪದವಿಯ ಪ್ರಮಾಣ ಪತ್ರ ಹಾಗೂ ಪ್ಯಾಚ್ಮೆಂಟ್ ನೀಡಿ ಗೌರವಿಸಲಾಗಿದೆ.

ಇವರು ಸುಮಾರು 25 ವರ್ಷಗಳಿಂದ ಭಾರತ್ ಸ್ಕೌಟ್ಸ್ ಅಂಡ್ ಗೈಡ್ ಸಂಸ್ಥೆಯಲ್ಲಿ ಸಕ್ರಿಯವಾಗಿ ತಮ್ಮನ್ನು ತಾವು ತೊಡಗಿಸಿಕೊಂಡು ಕಾರ್ಯನಿರ್ವಹಿಸುತ್ತಿದ್ದಾರೆ. ಮುಂದಿನ ಜ. 30 ರಿಂದ ಫೆ 1 ವರೆಗೆ ಒರಿಸ್ಸಾದ ಭುವನೇಶ್ವರದಲ್ಲಿ ನಡೆಯುವ ರಾಜ್ಯಮಟ್ಟದ LT/ALT ತರಬೇತಿದಾರರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

ಇವರು ಭಾರತ್ ಸ್ಕೌಟ್ಸ್& ಗೈಡ್ಸ್ ನ ತರಬೇತಿಯಾದ ಬೇಸಿಕ್ 2001ರಲ್ಲಿ ಪಿಲಿಕುಳ ಮಂಗಳೂರು, ಎಡ್ವಾನ್ಸ್ 2005 ರಲ್ಲಿ ಸಿ.ಎಸ್.ಐ ಬಾಲಿಕಾಶ್ರಮ ಮುಲ್ಕಿ, ಹೆಚ್ ಡಬ್ಲ್ಯು ಬಿ 2005ರಲ್ಲಿ ಕೊಂಡಜ್ಜಿ ದಾವಣಗೆರೆ, ಪ್ರಿ ಎ.ಎಲ್.ಟಿ 2018 ರಲ್ಲಿ ದೊಡ್ಡಬಳ್ಳಾಪುರ, 2025ರಲ್ಲಿ ALT ರಾಷ್ಟ್ರೀಯ ತರಬೇತಿ ಕೇಂದ್ರ ಪಚಿಮರಿ ಮಧ್ಯಪ್ರದೇಶದಲ್ಲಿ ಪಡೆದುಕೊಂಡಿರುತ್ತಾರೆ.
ಇವರ ಪತಿ ಜಯರಾಜ್ ಜೈನ್ ಅವರು ಸ.ಉ.ಹಿ.ಪ್ರಾ. ಶಾಲೆ ಓಡಿಲ್ನಾಳದಲ್ಲಿ ಹಿರಿಯ ದೈಹಿಕ ಶಿಕ್ಷಣ ಶಿಕ್ಷಕರಾಗಿದ್ದು, ತಾ. ಸರಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Related posts

ಮಾ.10: ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವ: ಹುಣ್ಸೆಕಟ್ಟೆಯಲ್ಲಿ ಪೂರ್ವಭಾವಿ ಸಭೆ

Suddi Udaya

ಕಲ್ಮಂಜ : ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಡಳಿತಾಧಿಕಾರಿಯಾಗಿ ನಾಗಶಯನ ರಾವ್ ಅಧಿಕಾರ ಸ್ವೀಕಾರ

Suddi Udaya

ನಿಟ್ಟಡೆ ಕುಂಭಶ್ರೀ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಕೊಕ್ಕಡದಲ್ಲಿ ವಿಧಾನಪರಿಷತ್ ಉಪಚುನಾವಣೆ ನಿಮಿತ್ತ ಪೂರ್ವಭಾವಿ ಸಭೆ

Suddi Udaya

ಪಟ್ರಮೆಯ ಹಿಂದೂ ಯುವಕನ ಜೊತೆ ನೆಲ್ಲಿಕಾರಿನ ಮುಸ್ಲಿಂ ಯುವತಿ ವಿವಾಹ

Suddi Udaya

ಮದ್ದಡ್ಕ ನೆಲ್ಲಿಫಲ್ಕೆ ನಿವಾಸಿ ಬಾಬು ಮೊಗೇರ ನಿಧನ

Suddi Udaya
error: Content is protected !!