ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂಗಾಡಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ತ್ರಿಶಲ ಜೈನ್ ಅವರಿಗೆ ಭಾರತ್ ಸ್ಕೌಟ್ ಗೈಡ್ ಎ.ಎಲ್.ಟಿ ಅರ್ಹತೆ

ಬೆಳ್ತಂಗಡಿ: ಸ. ಉ. ಪ್ರಾ. ಶಾಲೆ ಬಂಗಾಡಿ ಇಲ್ಲಿನ ದೈಹಿಕ ಶಿಕ್ಷಣ ಶಿಕ್ಷಕಿಯಾದ ತ್ರಿಶಲ ಜೈನ್ ರವರು ಭಾರತ್‌ ಸ್ಕೌಟ್ & ಗೈಡ್ ಇದರ ಗೈಡ್ ಕ್ಯಾಪ್ಟನ್ ರಾಗಿ ಸೇವೆ ಸಲ್ಲಿಸುತ್ತಿದ್ದು, ಇವರು ರಾಷ್ಟ್ರೀಯ ತರಬೇತಿ ಕೇಂದ್ರ ಪಚಿಮರಿ ಮಧ್ಯಪ್ರದೇಶದಲ್ಲಿ ಏಪ್ರಿಲ್ ತಿಂಗಳಲ್ಲಿ ನಡೆದ 65ನೇ ಸಹಾಯಕ ಲೀಡರ್ (ALT) ತರಬೇತಿದಾರರ ತರಬೇತಿಯಲ್ಲಿ ಭಾಗವಹಿಸಿ 2025-26 ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕ್ಯಾಂಪೋರಿಯಲ್ಲಿ ಇವರಿಗೆ ALT ಪದವಿಯ ಪ್ರಮಾಣ ಪತ್ರ ಹಾಗೂ ಪ್ಯಾಚ್ಮೆಂಟ್ ನೀಡಿ ಗೌರವಿಸಲಾಗಿದೆ.

ಇವರು ಸುಮಾರು 25 ವರ್ಷಗಳಿಂದ ಭಾರತ್ ಸ್ಕೌಟ್ಸ್ ಅಂಡ್ ಗೈಡ್ ಸಂಸ್ಥೆಯಲ್ಲಿ ಸಕ್ರಿಯವಾಗಿ ತಮ್ಮನ್ನು ತಾವು ತೊಡಗಿಸಿಕೊಂಡು ಕಾರ್ಯನಿರ್ವಹಿಸುತ್ತಿದ್ದಾರೆ. ಮುಂದಿನ ಜ. 30 ರಿಂದ ಫೆ 1 ವರೆಗೆ ಒರಿಸ್ಸಾದ ಭುವನೇಶ್ವರದಲ್ಲಿ ನಡೆಯುವ ರಾಜ್ಯಮಟ್ಟದ LT/ALT ತರಬೇತಿದಾರರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

ಇವರು ಭಾರತ್ ಸ್ಕೌಟ್ಸ್& ಗೈಡ್ಸ್ ನ ತರಬೇತಿಯಾದ ಬೇಸಿಕ್ 2001ರಲ್ಲಿ ಪಿಲಿಕುಳ ಮಂಗಳೂರು, ಎಡ್ವಾನ್ಸ್ 2005 ರಲ್ಲಿ ಸಿ.ಎಸ್.ಐ ಬಾಲಿಕಾಶ್ರಮ ಮುಲ್ಕಿ, ಹೆಚ್ ಡಬ್ಲ್ಯು ಬಿ 2005ರಲ್ಲಿ ಕೊಂಡಜ್ಜಿ ದಾವಣಗೆರೆ, ಪ್ರಿ ಎ.ಎಲ್.ಟಿ 2018 ರಲ್ಲಿ ದೊಡ್ಡಬಳ್ಳಾಪುರ, 2025ರಲ್ಲಿ ALT ರಾಷ್ಟ್ರೀಯ ತರಬೇತಿ ಕೇಂದ್ರ ಪಚಿಮರಿ ಮಧ್ಯಪ್ರದೇಶದಲ್ಲಿ ಪಡೆದುಕೊಂಡಿರುತ್ತಾರೆ.
ಇವರ ಪತಿ ಜಯರಾಜ್ ಜೈನ್ ಅವರು ಸ.ಉ.ಹಿ.ಪ್ರಾ. ಶಾಲೆ ಓಡಿಲ್ನಾಳದಲ್ಲಿ ಹಿರಿಯ ದೈಹಿಕ ಶಿಕ್ಷಣ ಶಿಕ್ಷಕರಾಗಿದ್ದು, ತಾ. ಸರಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Related posts

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ : ಬೆಳ್ತಂಗಡಿಯ ಎಸ್.ಡಿ.ಎಂ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಮಾ.13-17: ಕೇಳ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಮರುಮೌಲ್ಯ ಮಾಪನದಲ್ಲಿ ಶ್ರೀ ಧ.ಮಂ.ಪ.ಪೂ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ಕು. ಅನನ್ಯ ರಾಜ್ಯಕ್ಕೆ 9ನೇ ರ‍್ಯಾಂಕ್

Suddi Udaya

ಪುದುವೆಟ್ಟು ಶ್ರೀಧ.ಮಂ.ಅನುದಾನಿತ ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

ಪಾಲೇದು: ತಮ್ಮಯ್ಯ ಪೂಜಾರಿ ನಿಧನ

Suddi Udaya

ಕೊಕ್ಕಡ ಶ್ರೀ ಕ್ಷೇತ್ರ ವೈದ್ಯನಾಥೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya
error: Content is protected !!