23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಹತ್ಯಡ್ಕ ವಿಠೋಬಾ ರುಕುಮಾಯಿ ದೇಗುಲಕ್ಕೆ ದೇಣಿಗೆ

ಹತ್ಯಡ್ಕ ಗ್ರಾಮದ ದರ್ಭೆತಡ್ಕದಲ್ಲಿ ಜೀರ್ಣೋದ್ದಾರ ಕಾರ್ಯ ಪ್ರಗತಿಯಲ್ಲಿರುವ ವಿಠೋಬಾ ರುಕುಮಾಯಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳಿಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.2 ಲಕ್ಷ ದೇಣಿಗೆ ಚೆಕ್ ಅನ್ನು ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಯಶೋಧರ ಇವರು ದೇವಸ್ಥಾನದ ಆಡಳಿತ ಮಂಡಳಿಗೆ ಜ.21 ರಂದು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ದೇವಳದ ಆಡಳಿತ ಮಂಡಳಿಯ ಪ್ರಮುಖ ರಾದ ರಮೇಶ ಹೆಬ್ಬಾರ್, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಅನಂತ ಗೋಖಲೆ, ಕಾರ್ಯದರ್ಶಿ ಜಿತೇಂದ್ರ ಗೋಖಲೆ, ಸದಸ್ಯರಾದ ಕಾರ್ತಿಕ್ ಹೆಬ್ಬಾರ್, ನರಸಿಂಹ ಪಾಳಂದೆ, ಶ್ರೇಯಸ್ ಪಾಳಂದೆ ಉಪಸ್ಥಿತರಿದ್ದರು.
ಶ್ರೀ ಕ್ಷೇತ್ರ ಧರ್ಮಸ್ಥಳದ ಪರವಾಗಿ ವಲಯ ಮೇಲ್ವಿಚಾರಕಿ ಶಶಿಕಲಾ, ಸೇವಾ ಪ್ರತಿ ನಿಧಿಗಳಾದ ಯಮುನಾ ಎಮ್ ಮತ್ತು ರೂಪಾ,
ಜನಜಾಗೃತಿಯ ವಲಯ ಅಧ್ಯಕ್ಷರಾದ ಸತೀಶ್ ಶೆಟ್ಟಿ ಗುತ್ತು, ಹತ್ಯಡ್ಕ ಎ ಒಕ್ಕೂಟದ ಉಪಾಧ್ಯಕ್ಷರಾದ ಸರೋಜಿನಿ ನಾಯ್ಕ, ಹತ್ಯಡ್ಕ ಬಿ ಒಕ್ಕೂಟದ ಅಧ್ಯಕ್ಷ ಸುನಂದ ಟಿ., ಶೌರ್ಯ ವಿಪತ್ತು ನಿರ್ವಹಣಾ ಸಮಿತಿ ಅರಸಿನಮಕ್ಕಿ ಶಿಶಿಲ ಘಟಕದ ಘಟಕ ಪ್ರತಿನಿಧಿ ಅವಿನಾಶ್ ಭಿಡೆ ಉಪಸ್ಥಿತಿಯಲ್ಲಿ ಚೆಕ್ ಅನ್ನು ಹಸ್ತಾಂತರಿಸಲಾಯಿತು.

Related posts

ಕಡಿರುದ್ಯಾವರ ಬಸವದಡ್ಡು ಬಳಿ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ

Suddi Udaya

ಬೆಳ್ತಂಗಡಿ: ಜೀವನ್ ಜ್ಯೋತಿ ಸುರಕ್ಷಾದಿಂದ ಸಹಾಯಧನ ಹಸ್ತಾಂತರ

Suddi Udaya

ಎ.22: ನಾರಾವಿ ಮಹಾಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರ ಚುನಾವಣಾ ಪ್ರಚಾರ

Suddi Udaya

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್ ಸಭೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ, ಉಜಿರೆ ಸಾನಿದ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ಜಾತ್ರೋತ್ಸವದ ಅಂಗವಾಗಿ ದೇವರ ದಶ೯ನ ಬಲಿ ಉತ್ಸವ

Suddi Udaya
error: Content is protected !!