July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಹತ್ಯಡ್ಕ ವಿಠೋಬಾ ರುಕುಮಾಯಿ ದೇಗುಲಕ್ಕೆ ದೇಣಿಗೆ

ಹತ್ಯಡ್ಕ ಗ್ರಾಮದ ದರ್ಭೆತಡ್ಕದಲ್ಲಿ ಜೀರ್ಣೋದ್ದಾರ ಕಾರ್ಯ ಪ್ರಗತಿಯಲ್ಲಿರುವ ವಿಠೋಬಾ ರುಕುಮಾಯಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳಿಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.2 ಲಕ್ಷ ದೇಣಿಗೆ ಚೆಕ್ ಅನ್ನು ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಯಶೋಧರ ಇವರು ದೇವಸ್ಥಾನದ ಆಡಳಿತ ಮಂಡಳಿಗೆ ಜ.21 ರಂದು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ದೇವಳದ ಆಡಳಿತ ಮಂಡಳಿಯ ಪ್ರಮುಖ ರಾದ ರಮೇಶ ಹೆಬ್ಬಾರ್, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಅನಂತ ಗೋಖಲೆ, ಕಾರ್ಯದರ್ಶಿ ಜಿತೇಂದ್ರ ಗೋಖಲೆ, ಸದಸ್ಯರಾದ ಕಾರ್ತಿಕ್ ಹೆಬ್ಬಾರ್, ನರಸಿಂಹ ಪಾಳಂದೆ, ಶ್ರೇಯಸ್ ಪಾಳಂದೆ ಉಪಸ್ಥಿತರಿದ್ದರು.
ಶ್ರೀ ಕ್ಷೇತ್ರ ಧರ್ಮಸ್ಥಳದ ಪರವಾಗಿ ವಲಯ ಮೇಲ್ವಿಚಾರಕಿ ಶಶಿಕಲಾ, ಸೇವಾ ಪ್ರತಿ ನಿಧಿಗಳಾದ ಯಮುನಾ ಎಮ್ ಮತ್ತು ರೂಪಾ,
ಜನಜಾಗೃತಿಯ ವಲಯ ಅಧ್ಯಕ್ಷರಾದ ಸತೀಶ್ ಶೆಟ್ಟಿ ಗುತ್ತು, ಹತ್ಯಡ್ಕ ಎ ಒಕ್ಕೂಟದ ಉಪಾಧ್ಯಕ್ಷರಾದ ಸರೋಜಿನಿ ನಾಯ್ಕ, ಹತ್ಯಡ್ಕ ಬಿ ಒಕ್ಕೂಟದ ಅಧ್ಯಕ್ಷ ಸುನಂದ ಟಿ., ಶೌರ್ಯ ವಿಪತ್ತು ನಿರ್ವಹಣಾ ಸಮಿತಿ ಅರಸಿನಮಕ್ಕಿ ಶಿಶಿಲ ಘಟಕದ ಘಟಕ ಪ್ರತಿನಿಧಿ ಅವಿನಾಶ್ ಭಿಡೆ ಉಪಸ್ಥಿತಿಯಲ್ಲಿ ಚೆಕ್ ಅನ್ನು ಹಸ್ತಾಂತರಿಸಲಾಯಿತು.

Related posts

ಕುಣಿತ ಭಜನಾ ತರಬೇತುದಾರರಾದ ವಿ ಹರೀಶ್ ನೆರಿಯ ರವರಿಗೆ ಗೌರವದ ಸನ್ಮಾನ

Suddi Udaya

ಅವಾಚ್ಯ ಶಬ್ದಗಳಿಂದ ನಿಂದನೆ ಆರೋಪ: ತಿಮರೋಡಿ ವಿರುದ್ಧ ಎರಡನೇ ಪ್ರಕರಣ ದಾಖಲು

Suddi Udaya

ಎ.10-14: ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya

ಬ೦ಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಮಹಾಸಭೆ: ರೂ. 1020.75 ಕೋಟಿ ವ್ಯವಹಾರ, ರೂ. 4.30 ಕೋಟಿ ಲಾಭ, ಶೇ. 17 ಡಿವಿಡೆಂಡ್

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ನಿರ್ದೇಶಕರಾಗಿ ಸಹಕಾರ ಭಾರತಿ ಅಭ್ಯರ್ಥಿ ಉಮೇಶ್.ಎಂ.ಕೆ ಅವಿರೋಧವಾಗಿ ಆಯ್ಕೆ

Suddi Udaya

ಮಾ.15: ಅಳದಂಗಡಿ ನೊಚ್ಚ ಮನೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ

Suddi Udaya
error: Content is protected !!