23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ : ರಾತ್ರಿ ಮೂಡಪ್ಪ ಸೇವೆ: ವಿಶೇಷ ಹೂವುಗಳಿಂದ ಅಲಂಕೃತಗೊಂಡ ಸೌತಡ್ಕ ಕ್ಷೇತ್ರ

ಕೊಕ್ಕಡ: ಬಯಲು ಆಲಯದ ಗಣಪನೆಂದೇ ಪ್ರಸಿದ್ದಿ ಪಡೆದ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ ಹಾಗೂ ಮೂಡಪ್ಪ ಸೇವೆಗೆ ಭರದ ಸಿದ್ದತೆ ನಡೆಯುತ್ತಿದೆ.

ಇಂದು (ಜ.22)ಬೆಳಗ್ಗೆ ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ 108 ಕಾಯಿ ಗಣಹೋಮ ನಡೆಯಿತು.

ಈ ವೇಳೆ ಕ್ಷೇತ್ರದಲ್ಲಿ ವಿಶೇಷ ಹೂವುಗಳಿಂದ ಸರ್ವಾಲಂಕೃತಗೊಂಡು ಕಂಗೊಳಿಸುತ್ತಿದೆ.

ಊರ ಪರವೂರ ಭಕ್ತ ಗಣ ದೇಗುಲಕ್ಕೆ ಹರಿದು ಬರುತ್ತಿದ್ದು, ಗಂಟೆ ಗಣಪನ ಬಯಲು ಆಲಯ ಸರ್ವಾಲಂಕೃತಗೊಂಡು ನಳನಳಿಸುತ್ತಿದೆ

ರಾತ್ರಿ ಗಂಟೆ 7.30ರಿಂದ ಮೂಡಪ್ಪಸೇವೆ, ಮಹಾಮಂಗಳಾರತಿ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದ್ದು ಊರ ಪರವೂರ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕ್ಷೇತ್ರಕ್ಕೆ ಆಗಮಿಸುತ್ತಿದ್ದಾರೆ.

Related posts

26 ನೇ ವರ್ಷದ ಭಜನಾ ತರಭೇತಿ ಕಮ್ಮಟದ ಸಮಾರೋಪ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿ ಭಾವದ ಭಜನೆಯ ಝೇಂಕಾರ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ

Suddi Udaya

ಕೆಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ ಬೆಳ್ತಂಗಡಿ ಘಟಕ ವತಿಯಿಂದ ಪರಿಸರ ಸ್ವಚ್ಚತಾ ಆಂದೋಲನ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಹಳದಿ ದಿನ ಆಚರಣೆ

Suddi Udaya

ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿಯಾಗಿ ಶ್ರೀಮತಿ ಝೀನತ್ ಉಜಿರೆ ನೇಮಕ

Suddi Udaya

ವಾಣಿ ಕಾಲೇಜು : ಸಾಹಿತ್ಯ ಸಂಘದಿಂದ ಬರಹ ಕೌಶಲ್ಯ ಕಾರ್ಯಕ್ರಮ

Suddi Udaya
error: Content is protected !!