September 6, 2026
ಗ್ರಾಮಾಂತರ ಸುದ್ದಿ

ನಡ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂವತ್ಸರಗಳ ಸಂಭ್ರಮಾಚರಣೆ

ನಡ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡ ಇದರ ಶತ ಸಂವತ್ಸರಗಳ ಸಂಭ್ರಮಾಚರಣೆ ಅಂಗವಾಗಿ
ರಂಗ ಮಂದಿರ ಲೋಕಾರ್ಪಣೆ, ಸ್ವಾಗತ ದ್ವಾರ ಉದ್ಘಾಟನೆ, ಚಿಣ್ಣರ ಕಲರವ, ಹಳೇ ವಿದ್ಯಾರ್ಥಿಗಳ ಸಮಾಗಮ, ಇಂಟರ್ ಲಾಕ್ ಅಳವಡಿಕೆ ಹಸ್ತಾಂತರ ಕಾರ್ಯಕ್ರಮ ಜ.25 ರಂದು ವೈಭವ ಪೂರ್ಣವಾಗಿ ಜರುಗಿತು.
ರಂಗ ಮಂದಿರವನ್ನು ತುಳು ಕೂಟ ಬರೋಡ ಅಧ್ಯಕ್ಷ ಶಶಿಧರ ಶೆಟ್ಟಿ ಬರೋಡಾ ಲೋಕಾರ್ಪಣೆ ಮಾಡಿದರು, ಸ್ವಾಗತ ದ್ವಾರದ ಉದ್ಘಾಟನೆಯನ್ನು ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ಆರಿಗ ನೆರವೇರಿಸಿದರು.


ಶತಮಾನೋತ್ಸವ ಸಭಾ ಕಾರ್ಯಕ್ರಮವನ್ನು ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ದೀಪ ಬೆಳಗಿಸಿ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಶಾಸಕ ಹರೀಶ್ ಪೂಂಜಾ ವಹಿಸಿದ್ದರು.


ಮುಖ್ಯ ಅತಿಥಿಗಳಾಗಿವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ನಡ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಮಂಜುಳಾ, ಶಾಲಾ ಸಂಸ್ಥಾಪಕ ಮನೆತನದ ಧನಂಜಯ ಅಜ್ರಿ, ನಾವೂರು ಆರೋಗ್ಯ ಕ್ಲಿನಿಕ್ ನ ಡಾ. ಪ್ರದೀಪ್, ಜಮಾಲಾಬಾದ್ ಮಸೀದಿ ಧಮ೯ಗುರು ಮೌಲಾನಾ ಸೈಯದ್ ಹಕೀಲ್ ಶಾ, ಮಂಜೊಟ್ಟಿ ಚರ್ಚ್ ಧರ್ಮಗುರು ಫಾ|ಪಾವ್ಲ್ ಸೆಬಾಸ್ಟಿಯನ್ ಡಿ.ಸೋಜ, ಜಿ.ಪಂ. ಮಾಜಿ ಸದಸ್ಯ ರಾಜಶೇಖರ ಅಜ್ರಿ, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ತಾರಾಕೇಸರಿ, ಬೆಳ್ತಂಗಡಿ ವಕೀಲರ ಸಂಘ ಅಧ್ಯಕ್ಷ ಅಲೋಶಿಯಸ್ ಲೋಬೋ,


ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯಶೋಧರ ಭಾಗವಹಿಸಿದ್ದರು.
ವೇದಿಕೆಯಲ್ಲಿ ಶತಮಾನೋತ್ಸವ ಸಮಿತಿ ಅಧ್ಯಕ್ಷ ಮುನಿರಾಜ ಅಜ್ರಿ, ಶಾಲಾ ಮುಖ್ಯೋಪಾಧ್ಯಾಯ ಶ್ರೀಮತಿ ಪುಷ್ಪಾ, ಕೋಶಾಧಿಕಾರಿ ಸಯ್ಯಾದ್ ಹಬೀಬ್ ಸಾಹೇಬ್, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಧರಣೇಂದ್ರ ಕುಮಾರ್, ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಜನಾರ್ದನ ನಾಯ್ಕ, ವಿದ್ಯಾರ್ಥಿ ನಾಯಕ ಚಿರಾಗ್ ಉಪಸ್ಥಿತರಿದ್ದರು.
ಬೆಳಿಗ್ಗೆ ಆಕಷ೯ಕ ಮೆರವಣಿಗೆಗೆ ಸುಯ೯ ಶ್ರೀ ಸದಾಶಿವ ರುದ್ರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಡಾ. ಸತೀಶ್ಚಂದ್ರ ಎಸ್. ಚಾಲನೆ ನೀಡಿದರು. ಗುರುವಂದನೆ ಕಾರ್ಯಕ್ರಮದಲ್ಲಿ
ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದ ಶಿಕ್ಷಕರನ್ನು ಗೌರವಿಸಲಾಯಿತು.

ಶತಮಾನೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ವಸಂತ ಶೆಟ್ಟಿ ಶ್ರದ್ಧಾ ಸ್ವಾಗತಿಸಿದರು. ಯತೀಶ್ ಕಾರ್ಯಕ್ರಮ ನಿರೂಪಿಸಿದರು. ಶತಮಾನೋತ್ಸವ ಸಮಿತಿ ಕಾರ್ಯಾಧ್ಯಕ್ಷ ಶಶಿಕಿರಣ್ ಜೈನ್ ಪ್ರಾಸ್ತಾವಿಕವಾಗಿ ಮಾತನಾಡಿದರು.

Related posts

ಅಭಯ ಹಾಸ್ಪಿಟಲ್ ನಲ್ಲಿ ನೇತ್ರ ಚಿಕಿತ್ಸಾ ಸೇವೆ ಪ್ರಾರಂಭ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾಸಂಸ್ಥೆಯಲ್ಲಿ ಶಾಲಾ ವಾರ್ಷಿಕೋತ್ಸವ

Suddi Udaya

ಮಡಂತ್ಯಾರು ರಚನಾ ಸಿಲ್ಕ್ ನಲ್ಲಿ ಶೇ. 10-50 ಆಷಾಢ ಡಿಸ್ಕೌಂಟ್ ಸೇಲ್

Suddi Udaya

ಕಾನರ್ಪ ಕೋಡಿಯಾಲ್ ಬೈಲ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಕಾನರ್ಪ ಪ್ರೀಮಿಯರ್ ಲೀಗ್ – 2024 ಕ್ರಿಕೇಟ್ ಪಂದ್ಯಾಟ

Suddi Udaya

ಮಚ್ಚಿನ ಗ್ರಾಮದ ಕಾಂಗ್ರೆಸ್ ನ ಸಕ್ರಿಯ ನಾಯಕ ಸಂದೀಪ್ ಮಡಿವಾಳ್ ಬಿಜೆಪಿಗೆ ಸೇರ್ಪಡೆ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದಲ್ಲಿ 78 ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!