September 6, 2026
ಅಭಿನಂದನೆ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಬೆಳ್ತಂಗಡಿ ಘಟಕ ಇದರ ಹತ್ತನೇ ವಾರ್ಷಿಕೋತ್ಸವ

ಬೆಳ್ತಂಗಡಿ :ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಬೆಳ್ತಂಗಡಿ ಘಟಕ ಇದರ ಹತ್ತನೇ ವಾರ್ಷಿಕೋತ್ಸವವು ಗೌರವಾಧ್ಯಕ್ಷರಾದ ಶಶಿಧರ ಶೆಟ್ಟಿ ಬರೋಡಾ ಇವರ ಅಧ್ಯಕ್ಷತೆಯಲ್ಲಿ ನಡೆಯಿತು

. ಮುಖ್ಯ ಅಭ್ಯಾಗತರಾಗಿ ಶಾಸಕರಾದ ಹರೀಶ್ ಪೂಂಜಾ, ಉಜಿರೆ ಜನಾರ್ದನ ದೇವಸ್ಥಾನದ ಆನುವಂಶಿಕ ಮೊಕ್ತೇಸರರಾದ ಶರತ್ ಕೃಷ್ಣ ಪಡ್ವೆಟ್ನಾಯ, ನಾಣ್ಯಪ್ಪ ಪೂಜಾರಿ, ದಿನಕರ ಶೆಟ್ಟಿ ಬರೋಡಾ, ಬಿ ಭುಜಬಲಿ ಧರ್ಮಸ್ಥಳ, ಸಂಚಾಲಕರು ಕಿರಣ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಶಿತಿಕಂಠ ಭಟ್ ಉಜಿರೆ ಮತ್ತಿತರ ಗಣ್ಯರು ಹಾಗೂ ಘಟಕದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು. ಪಾವಂಜೆ ಮೇಳದ ಹಿರಿಯ ಕಲಾವಿದ ರಾಧಾಕೃಷ್ಣ ನಾವಡ ಮಧೂರು ಇವರನ್ನು ಸಂಮಾನಿಸಲಾಯಿತು. ಪಟ್ಲ ಫೌಂಡೇಶನ್ ಟ್ರಸ್ಟಿಗೆ 20 ದೇಣಿಗೆ ನೀಡಿದ ಮಹಾದಾನಿಗಳನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು. ಶ್ರೀಮತಿ ಪೃಥ್ವಿ ಮತ್ತು ಮುರಳೀಕೃಷ್ಣ ನಿರೂಪಿಸಿದರು. ಘಟಕದ ಅಧ್ಯಕ್ಷರಾದ ಸುರೇಶ್ ಶೆಟ್ಟಿ ವಂದಿಸಿದರು. ಪಾವಂಜೆ ಮೇಳದವರಿಂದ ಬಪ್ಪನಾಡು ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟ ಜರುಗಿತು.

Related posts

ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ವರ್ಗಾವಣೆ

Suddi Udaya

ಸುಲ್ಕೆರಿ ಲಯನ್ಸ್ ಕ್ಲಬ್ ನ ನೂತನ ಪದಗ್ರಹಣ ಸಮಾರಂಭ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಶಿಕ್ಷಣ ಕ್ಷೇತ್ರದ ಅಪೂರ್ವ ಸಾಧಕ: ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಅತ್ಯುತ್ತಮ ಯುವ ಸಾಧಕ ಪ್ರಶಸ್ತಿ ಪ್ರದಾನ

Suddi Udaya

ಸುದ್ದಿ ಉದಯ ಪತ್ರಿಕೆಯನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಮೈಸೂರು ಸಂಸ್ಥಾನದ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್

Suddi Udaya

ಜೆಸಿಐ ಕೊಕ್ಕಡ ಕಪಿಲಾ 2026ನೇ ಸಾಲಿನ ನೂತನ ಅಧ್ಯಕ್ಷರಾಗಿ ರಿತೇಶ್ ಎಂ. ಸ್ಟ್ರೆಲ್ಲಾ, ಕಾರ್ಯದರ್ಶಿಯಾಗಿಜೋಯೆಲ್ ಪಿರೇರಾ ಆಯ್ಕೆ

Suddi Udaya

ಎಸೆಸೆಲ್ಸಿ ಪರೀಕ್ಷೆ -2: ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಸಹನಾ ರಾವ್ ರಾಜ್ಯಕ್ಕೆ ದ್ವಿತೀಯ

Suddi Udaya
error: Content is protected !!