September 6, 2026
ಅಭಿನಂದನೆಕೃಷಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ: ಉಮ್ಮಂತಿಮಾರು ಕಿಂಡಿ ಅಣೆಕಟ್ಟು ಹಾಗೂ ಕಾಲುವೆ ಅಭಿವೃದ್ಧಿ ಕಾಮಗಾರಿಗೆ ರೂ.2.50 ಕೋಟಿ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಿಶಿಲ ಗ್ರಾಮದ ಉಮ್ಮಂತಿ ಮಾರ ಪ್ರದೇಶದಲ್ಲಿ ಬಹು ವರ್ಷಗಳಿಂದ ರೈತಾಪಿ ವರ್ಗದಿಂದ ಕೇಳಿ ಬರುತ್ತಿದ್ದ ಕಿಂಡಿ ಅಣೆಕಟ್ಟು (ಚೆಕ್ ಡ್ಯಾಂ) ನಿರ್ಮಾಣ ಹಾಗೂ ಕಾಲುವೆ ಅಭಿವೃದ್ಧಿ ಕಾಮಗಾರಿಗೆ ರಾಜ್ಯ ಸರ್ಕಾರವು ರೂ.2.50 ಕೋಟಿ ಅನುದಾನವನ್ನು ಮಂಜೂರು ಮಾಡಿದೆ ಎಂದು ಶಾಸಕ ಹರೀಶ್ ಪೂಂಜ ಅವರು ತಿಳಿಸಿದ್ದಾರೆ.

ಶಿಶಿಲ ಹಾಗೂ ಸುತ್ತಮುತ್ತಲಿನ ಗ್ರಾಮಗಳ ರೈತರಿಗೆ ಸಮರ್ಪಕ ನೀರಾವರಿ ಸೌಲಭ್ಯ ಒದಗಿಸುವ ಉದ್ದೇಶದಿಂದ ಈ ಪ್ರದೇಶದಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣದ ಅಗತ್ಯತೆ ಕುರಿತು ಈಗಾಗಲೇ ಸಣ್ಣ ನೀರಾವರಿ ಹಾಗೂ ಅಂತರ್ಜಲ ಇಲಾಖೆಯಿಂದ ಸರ್ವೆ ಕಾರ್ಯ ನಡೆಸಲಾಗಿತ್ತು. ಉಮ್ಮಂತಿ ಮಾರ ಪ್ರದೇಶದಲ್ಲಿ ಚೆಕ್ ಡ್ಯಾಂ ಹಾಗೂ ಕಾಲುವೆ ಅಭಿವೃದ್ಧಿ ಕಾಮಗಾರಿ ಜಾರಿಯಾದಲ್ಲಿ ನೂರಾರು ಎಕರೆ ಕೃಷಿ ಭೂಮಿಗಳಿಗೆ ನೀರಾವರಿ ಸೌಲಭ್ಯ ಲಭಿಸಿ ಕೃಷಿ ಉತ್ಪಾದನೆ ಹೆಚ್ಚಾಗಲಿದೆ. ಈ ಯೋಜನೆಯ ಮಹತ್ವವನ್ನು ಮಾನ್ಯ ಸಣ್ಣ ನೀರಾವರಿ ಸಚಿವರು ಹಾಗೂ ಇಲಾಖಾ ಕಾರ್ಯದರ್ಶಿಗಳ ಗಮನಕ್ಕೆ ತಂದು ಅಗತ್ಯ ಮನವರಿಕೆ ಮಾಡಿದ ಫಲವಾಗಿ ರಾಜ್ಯ ಸರ್ಕಾರವು ಈ ಮಹತ್ವದ ಕಾಮಗಾರಿಗೆ ರೂ.2.50 ಕೋಟಿ ಅನುದಾನವನ್ನು ಬಿಡುಗಡೆಗೊಳಿಸಿದೆ.

ಈ ಯೋಜನೆಗೆ ಸಹಕಾರ ನೀಡಿದ ರಾಜ್ಯ ಸರ್ಕಾರಕ್ಕೆ, ಮಾನ್ಯ ಸಣ್ಣ ನೀರಾವರಿ ಸಚಿವರಿಗೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಶಾಸಕ ಹರೀಶ್ ಪೂಂಜ ಅವರು ಧನ್ಯವಾದಗಳನ್ನು ಸಲ್ಲಿಸಿದ್ದಾರೆ. ರೈತರ ಬಹುಕಾಲದ ಬೇಡಿಕೆ ಈಡೇರಿರುವುದರಿಂದ ಶಿಶಿಲ ಹಾಗೂ ಸುತ್ತಮುತ್ತಲಿನ ಗ್ರಾಮಗಳ ರೈತ ಸಮುದಾಯದಲ್ಲಿ ಸಂತಸ ವ್ಯಕ್ತವಾಗಿದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಶಾಸಕ ಪೂಂಜರ ಕಚೇರಿ ಶ್ರಮಿಕಕ್ಕೆ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಭೇಟಿ

Suddi Udaya

ಶಿರ್ಡಿ,ಶನಿ ಶಿಂಗಣಾಪುರ, ಭೀಮಾಶಂಕರ ಕ್ಷೇತ್ರ ದರ್ಶನ: ಶ್ರೀ ಕಾಳಿದಾಸ ಬಾಬಾ ಮಹಾಸ್ವಾಮೀಜಿಯವರಿಂದ ಬೆಳ್ತಂಗಡಿ ಯಾತ್ರಾರ್ಥಿಗಳಿಗೆ ಆಶೀರ್ವಾದ

Suddi Udaya

ಸೆ.25 ರಿಂದ ಬೆಳ್ತಂಗಡಿ ಜೈನ್ ಮೊಬೈಲ್ ಹಾಗೂ ನ್ಯೂ ಜೈನ್ ಮೊಬೈಲ್ ನಲ್ಲಿ ಹಬ್ಬದ ಆಫರ್ : ಆಯ್ದ ಬ್ರಾಂಡೆಡ್ ಮೊಬೈಲ್ ಗಳ ಮೇಲೆ ಭರ್ಜರಿ ದರ ಕಡಿತ ಮಾರಾಟ

Suddi Udaya

ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಅಧ್ಯಕ್ಷರಾಗಿ ಪಿ.ಕುಶಾಲಪ್ಪ ಗೌಡ , ಗೌರವ ಅಧ್ಯಕ್ಷರಾಗಿ ಹೆಚ್. ಪದ್ಮಗೌಡ, ಕಾರ್ಯದರ್ಶಿಯಾಗಿ ಗಣೇಶ್ ಗೌಡ

Suddi Udaya

ಬಂದಾರು: ಬಟ್ಟೆಯಂಗಡಿ ನಡೆಸುತ್ತಿದ್ದ ನಿರ್ಮಲ ಹೃದಯಾಘಾತದಿಂದ ನಿಧನ

Suddi Udaya
error: Content is protected !!