September 6, 2026
ಗ್ರಾಮಾಂತರ ಸುದ್ದಿ

ನಡ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂವತ್ಸರಗಳ ಸಂಭ್ರಮಾಚರಣೆ

ನಡ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡ ಇದರ ಶತ ಸಂವತ್ಸರಗಳ ಸಂಭ್ರಮಾಚರಣೆ ಅಂಗವಾಗಿ
ರಂಗ ಮಂದಿರ ಲೋಕಾರ್ಪಣೆ, ಸ್ವಾಗತ ದ್ವಾರ ಉದ್ಘಾಟನೆ, ಚಿಣ್ಣರ ಕಲರವ, ಹಳೇ ವಿದ್ಯಾರ್ಥಿಗಳ ಸಮಾಗಮ, ಇಂಟರ್ ಲಾಕ್ ಅಳವಡಿಕೆ ಹಸ್ತಾಂತರ ಕಾರ್ಯಕ್ರಮ ಜ.25 ರಂದು ವೈಭವ ಪೂರ್ಣವಾಗಿ ಜರುಗಿತು.
ರಂಗ ಮಂದಿರವನ್ನು ತುಳು ಕೂಟ ಬರೋಡ ಅಧ್ಯಕ್ಷ ಶಶಿಧರ ಶೆಟ್ಟಿ ಬರೋಡಾ ಲೋಕಾರ್ಪಣೆ ಮಾಡಿದರು, ಸ್ವಾಗತ ದ್ವಾರದ ಉದ್ಘಾಟನೆಯನ್ನು ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ಆರಿಗ ನೆರವೇರಿಸಿದರು.


ಶತಮಾನೋತ್ಸವ ಸಭಾ ಕಾರ್ಯಕ್ರಮವನ್ನು ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ದೀಪ ಬೆಳಗಿಸಿ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಶಾಸಕ ಹರೀಶ್ ಪೂಂಜಾ ವಹಿಸಿದ್ದರು.


ಮುಖ್ಯ ಅತಿಥಿಗಳಾಗಿವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ನಡ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಮಂಜುಳಾ, ಶಾಲಾ ಸಂಸ್ಥಾಪಕ ಮನೆತನದ ಧನಂಜಯ ಅಜ್ರಿ, ನಾವೂರು ಆರೋಗ್ಯ ಕ್ಲಿನಿಕ್ ನ ಡಾ. ಪ್ರದೀಪ್, ಜಮಾಲಾಬಾದ್ ಮಸೀದಿ ಧಮ೯ಗುರು ಮೌಲಾನಾ ಸೈಯದ್ ಹಕೀಲ್ ಶಾ, ಮಂಜೊಟ್ಟಿ ಚರ್ಚ್ ಧರ್ಮಗುರು ಫಾ|ಪಾವ್ಲ್ ಸೆಬಾಸ್ಟಿಯನ್ ಡಿ.ಸೋಜ, ಜಿ.ಪಂ. ಮಾಜಿ ಸದಸ್ಯ ರಾಜಶೇಖರ ಅಜ್ರಿ, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ತಾರಾಕೇಸರಿ, ಬೆಳ್ತಂಗಡಿ ವಕೀಲರ ಸಂಘ ಅಧ್ಯಕ್ಷ ಅಲೋಶಿಯಸ್ ಲೋಬೋ,


ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯಶೋಧರ ಭಾಗವಹಿಸಿದ್ದರು.
ವೇದಿಕೆಯಲ್ಲಿ ಶತಮಾನೋತ್ಸವ ಸಮಿತಿ ಅಧ್ಯಕ್ಷ ಮುನಿರಾಜ ಅಜ್ರಿ, ಶಾಲಾ ಮುಖ್ಯೋಪಾಧ್ಯಾಯ ಶ್ರೀಮತಿ ಪುಷ್ಪಾ, ಕೋಶಾಧಿಕಾರಿ ಸಯ್ಯಾದ್ ಹಬೀಬ್ ಸಾಹೇಬ್, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಧರಣೇಂದ್ರ ಕುಮಾರ್, ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಜನಾರ್ದನ ನಾಯ್ಕ, ವಿದ್ಯಾರ್ಥಿ ನಾಯಕ ಚಿರಾಗ್ ಉಪಸ್ಥಿತರಿದ್ದರು.
ಬೆಳಿಗ್ಗೆ ಆಕಷ೯ಕ ಮೆರವಣಿಗೆಗೆ ಸುಯ೯ ಶ್ರೀ ಸದಾಶಿವ ರುದ್ರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಡಾ. ಸತೀಶ್ಚಂದ್ರ ಎಸ್. ಚಾಲನೆ ನೀಡಿದರು. ಗುರುವಂದನೆ ಕಾರ್ಯಕ್ರಮದಲ್ಲಿ
ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದ ಶಿಕ್ಷಕರನ್ನು ಗೌರವಿಸಲಾಯಿತು.

ಶತಮಾನೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ವಸಂತ ಶೆಟ್ಟಿ ಶ್ರದ್ಧಾ ಸ್ವಾಗತಿಸಿದರು. ಯತೀಶ್ ಕಾರ್ಯಕ್ರಮ ನಿರೂಪಿಸಿದರು. ಶತಮಾನೋತ್ಸವ ಸಮಿತಿ ಕಾರ್ಯಾಧ್ಯಕ್ಷ ಶಶಿಕಿರಣ್ ಜೈನ್ ಪ್ರಾಸ್ತಾವಿಕವಾಗಿ ಮಾತನಾಡಿದರು.

Related posts

ಎಕ್ಸೆಲ್ ಟೆಕ್ನೊ ಸ್ಕೂಲ್ ನ ಪೂರ್ವ ಪ್ರಾಥಮಿಕ ವಿಭಾಗದಲ್ಲಿ 80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿ ಛದ್ಮವೇಷ ಸ್ಪರ್ಧೆ

Suddi Udaya

ಮೊಗ್ರು: ಕೋರಿಯಾರು ಎಂಬಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಆಟಿದ ಕಷಾಯ ಮತ್ತು ಮೆತ್ತೆಗಂಜಿ ವಿತರಣೆ

Suddi Udaya

ಮರೋಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಮುಂಡಾಜೆ: ರಬ್ಬರ್ ತೋಟದಲ್ಲಿ ನಾಲ್ಕು ಚಿರತೆಗಳು ಪ್ರತ್ಯಕ್ಷ: ಅಪಾಯದಿಂದ ಪಾರಾದ ಕಾರ್ಮಿಕರು

Suddi Udaya

ಗೋವಾದಲ್ಲಿ ಯಕ್ಷ ಕಲರವ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ

Suddi Udaya
error: Content is protected !!