22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಭಿನಂದನೆಕೃಷಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ: ಉಮ್ಮಂತಿಮಾರು ಕಿಂಡಿ ಅಣೆಕಟ್ಟು ಹಾಗೂ ಕಾಲುವೆ ಅಭಿವೃದ್ಧಿ ಕಾಮಗಾರಿಗೆ ರೂ.2.50 ಕೋಟಿ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಿಶಿಲ ಗ್ರಾಮದ ಉಮ್ಮಂತಿ ಮಾರ ಪ್ರದೇಶದಲ್ಲಿ ಬಹು ವರ್ಷಗಳಿಂದ ರೈತಾಪಿ ವರ್ಗದಿಂದ ಕೇಳಿ ಬರುತ್ತಿದ್ದ ಕಿಂಡಿ ಅಣೆಕಟ್ಟು (ಚೆಕ್ ಡ್ಯಾಂ) ನಿರ್ಮಾಣ ಹಾಗೂ ಕಾಲುವೆ ಅಭಿವೃದ್ಧಿ ಕಾಮಗಾರಿಗೆ ರಾಜ್ಯ ಸರ್ಕಾರವು ರೂ.2.50 ಕೋಟಿ ಅನುದಾನವನ್ನು ಮಂಜೂರು ಮಾಡಿದೆ ಎಂದು ಶಾಸಕ ಹರೀಶ್ ಪೂಂಜ ಅವರು ತಿಳಿಸಿದ್ದಾರೆ.

ಶಿಶಿಲ ಹಾಗೂ ಸುತ್ತಮುತ್ತಲಿನ ಗ್ರಾಮಗಳ ರೈತರಿಗೆ ಸಮರ್ಪಕ ನೀರಾವರಿ ಸೌಲಭ್ಯ ಒದಗಿಸುವ ಉದ್ದೇಶದಿಂದ ಈ ಪ್ರದೇಶದಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣದ ಅಗತ್ಯತೆ ಕುರಿತು ಈಗಾಗಲೇ ಸಣ್ಣ ನೀರಾವರಿ ಹಾಗೂ ಅಂತರ್ಜಲ ಇಲಾಖೆಯಿಂದ ಸರ್ವೆ ಕಾರ್ಯ ನಡೆಸಲಾಗಿತ್ತು. ಉಮ್ಮಂತಿ ಮಾರ ಪ್ರದೇಶದಲ್ಲಿ ಚೆಕ್ ಡ್ಯಾಂ ಹಾಗೂ ಕಾಲುವೆ ಅಭಿವೃದ್ಧಿ ಕಾಮಗಾರಿ ಜಾರಿಯಾದಲ್ಲಿ ನೂರಾರು ಎಕರೆ ಕೃಷಿ ಭೂಮಿಗಳಿಗೆ ನೀರಾವರಿ ಸೌಲಭ್ಯ ಲಭಿಸಿ ಕೃಷಿ ಉತ್ಪಾದನೆ ಹೆಚ್ಚಾಗಲಿದೆ. ಈ ಯೋಜನೆಯ ಮಹತ್ವವನ್ನು ಮಾನ್ಯ ಸಣ್ಣ ನೀರಾವರಿ ಸಚಿವರು ಹಾಗೂ ಇಲಾಖಾ ಕಾರ್ಯದರ್ಶಿಗಳ ಗಮನಕ್ಕೆ ತಂದು ಅಗತ್ಯ ಮನವರಿಕೆ ಮಾಡಿದ ಫಲವಾಗಿ ರಾಜ್ಯ ಸರ್ಕಾರವು ಈ ಮಹತ್ವದ ಕಾಮಗಾರಿಗೆ ರೂ.2.50 ಕೋಟಿ ಅನುದಾನವನ್ನು ಬಿಡುಗಡೆಗೊಳಿಸಿದೆ.

ಈ ಯೋಜನೆಗೆ ಸಹಕಾರ ನೀಡಿದ ರಾಜ್ಯ ಸರ್ಕಾರಕ್ಕೆ, ಮಾನ್ಯ ಸಣ್ಣ ನೀರಾವರಿ ಸಚಿವರಿಗೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಶಾಸಕ ಹರೀಶ್ ಪೂಂಜ ಅವರು ಧನ್ಯವಾದಗಳನ್ನು ಸಲ್ಲಿಸಿದ್ದಾರೆ. ರೈತರ ಬಹುಕಾಲದ ಬೇಡಿಕೆ ಈಡೇರಿರುವುದರಿಂದ ಶಿಶಿಲ ಹಾಗೂ ಸುತ್ತಮುತ್ತಲಿನ ಗ್ರಾಮಗಳ ರೈತ ಸಮುದಾಯದಲ್ಲಿ ಸಂತಸ ವ್ಯಕ್ತವಾಗಿದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಕುತ್ಯಾರು ಫ್ರೆಂಡ್ಸ್ ಬೆಳ್ತಂಗಡಿ ವತಿಯಿಂದ ಭಾರತೀಯ ಸೇನೆಗೆ ಶಕ್ತಿ ತುಂಬಲು ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ 108 ಸೀಯಾಳಭಿಷೇಕ

Suddi Udaya

ಸವಣಾಲು: ಸಾಂತಪ್ಪ ಮಲೆಕುಡಿಯ ನಿಧನ

Suddi Udaya

ತಾ.ಪಂ.  ಸಹಾಯಕ ಲೆಕ್ಕಾಧಿಕಾರಿ ಗಣೇಶ್ ಪೂಜಾರಿ ಸೇವಾ ನಿವೃತ್ತಿ – ಬೀಳ್ಕೊಡುಗೆ ಸಮಾರಂಭ

Suddi Udaya

ಬೆಳ್ತಂಗಡಿ: 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ರಕ್ಷಿಸಿ ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್ ಲಾಯಿಲ

Suddi Udaya

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 100%ಫಲಿತಾಂಶದೊಂದಿಗೆ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ನಿಡ್ಲೆ ಸ.ಪ್ರೌ. ಶಾಲೆಯ ವಿದ್ಯಾರ್ಥಿಗಳಿಗೆ ಆಹಾರ ನಿರ್ವಹಣೆ ಮತ್ತು ಸಾಮಾಜಿಕ ಜವಾಬ್ದಾರಿ ಕುರಿತು ಮಾಹಿತಿ ಕಾರ್ಯಾಗಾರ

Suddi Udaya
error: Content is protected !!