22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿ

ನಡ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂವತ್ಸರಗಳ ಸಂಭ್ರಮಾಚರಣೆ

ನಡ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡ ಇದರ ಶತ ಸಂವತ್ಸರಗಳ ಸಂಭ್ರಮಾಚರಣೆ ಅಂಗವಾಗಿ
ರಂಗ ಮಂದಿರ ಲೋಕಾರ್ಪಣೆ, ಸ್ವಾಗತ ದ್ವಾರ ಉದ್ಘಾಟನೆ, ಚಿಣ್ಣರ ಕಲರವ, ಹಳೇ ವಿದ್ಯಾರ್ಥಿಗಳ ಸಮಾಗಮ, ಇಂಟರ್ ಲಾಕ್ ಅಳವಡಿಕೆ ಹಸ್ತಾಂತರ ಕಾರ್ಯಕ್ರಮ ಜ.25 ರಂದು ವೈಭವ ಪೂರ್ಣವಾಗಿ ಜರುಗಿತು.
ರಂಗ ಮಂದಿರವನ್ನು ತುಳು ಕೂಟ ಬರೋಡ ಅಧ್ಯಕ್ಷ ಶಶಿಧರ ಶೆಟ್ಟಿ ಬರೋಡಾ ಲೋಕಾರ್ಪಣೆ ಮಾಡಿದರು, ಸ್ವಾಗತ ದ್ವಾರದ ಉದ್ಘಾಟನೆಯನ್ನು ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ಆರಿಗ ನೆರವೇರಿಸಿದರು.


ಶತಮಾನೋತ್ಸವ ಸಭಾ ಕಾರ್ಯಕ್ರಮವನ್ನು ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ದೀಪ ಬೆಳಗಿಸಿ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಶಾಸಕ ಹರೀಶ್ ಪೂಂಜಾ ವಹಿಸಿದ್ದರು.


ಮುಖ್ಯ ಅತಿಥಿಗಳಾಗಿವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ನಡ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಮಂಜುಳಾ, ಶಾಲಾ ಸಂಸ್ಥಾಪಕ ಮನೆತನದ ಧನಂಜಯ ಅಜ್ರಿ, ನಾವೂರು ಆರೋಗ್ಯ ಕ್ಲಿನಿಕ್ ನ ಡಾ. ಪ್ರದೀಪ್, ಜಮಾಲಾಬಾದ್ ಮಸೀದಿ ಧಮ೯ಗುರು ಮೌಲಾನಾ ಸೈಯದ್ ಹಕೀಲ್ ಶಾ, ಮಂಜೊಟ್ಟಿ ಚರ್ಚ್ ಧರ್ಮಗುರು ಫಾ|ಪಾವ್ಲ್ ಸೆಬಾಸ್ಟಿಯನ್ ಡಿ.ಸೋಜ, ಜಿ.ಪಂ. ಮಾಜಿ ಸದಸ್ಯ ರಾಜಶೇಖರ ಅಜ್ರಿ, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ತಾರಾಕೇಸರಿ, ಬೆಳ್ತಂಗಡಿ ವಕೀಲರ ಸಂಘ ಅಧ್ಯಕ್ಷ ಅಲೋಶಿಯಸ್ ಲೋಬೋ,


ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯಶೋಧರ ಭಾಗವಹಿಸಿದ್ದರು.
ವೇದಿಕೆಯಲ್ಲಿ ಶತಮಾನೋತ್ಸವ ಸಮಿತಿ ಅಧ್ಯಕ್ಷ ಮುನಿರಾಜ ಅಜ್ರಿ, ಶಾಲಾ ಮುಖ್ಯೋಪಾಧ್ಯಾಯ ಶ್ರೀಮತಿ ಪುಷ್ಪಾ, ಕೋಶಾಧಿಕಾರಿ ಸಯ್ಯಾದ್ ಹಬೀಬ್ ಸಾಹೇಬ್, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಧರಣೇಂದ್ರ ಕುಮಾರ್, ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಜನಾರ್ದನ ನಾಯ್ಕ, ವಿದ್ಯಾರ್ಥಿ ನಾಯಕ ಚಿರಾಗ್ ಉಪಸ್ಥಿತರಿದ್ದರು.
ಬೆಳಿಗ್ಗೆ ಆಕಷ೯ಕ ಮೆರವಣಿಗೆಗೆ ಸುಯ೯ ಶ್ರೀ ಸದಾಶಿವ ರುದ್ರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಡಾ. ಸತೀಶ್ಚಂದ್ರ ಎಸ್. ಚಾಲನೆ ನೀಡಿದರು. ಗುರುವಂದನೆ ಕಾರ್ಯಕ್ರಮದಲ್ಲಿ
ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದ ಶಿಕ್ಷಕರನ್ನು ಗೌರವಿಸಲಾಯಿತು.

ಶತಮಾನೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ವಸಂತ ಶೆಟ್ಟಿ ಶ್ರದ್ಧಾ ಸ್ವಾಗತಿಸಿದರು. ಯತೀಶ್ ಕಾರ್ಯಕ್ರಮ ನಿರೂಪಿಸಿದರು. ಶತಮಾನೋತ್ಸವ ಸಮಿತಿ ಕಾರ್ಯಾಧ್ಯಕ್ಷ ಶಶಿಕಿರಣ್ ಜೈನ್ ಪ್ರಾಸ್ತಾವಿಕವಾಗಿ ಮಾತನಾಡಿದರು.

Related posts

ಪಬ್ಲಿಕ್ ಪರೀಕ್ಷೆ : ಉಣ್ಣಾಲು , ಕೊಯ್ಯೂರು ಸಿರಾಜುಲ್ ಹುದಾ ಅರೇಬಿಕ್ ಸ್ಕೂಲ್ ವಿದ್ಯಾರ್ಥಿ ನೂರುನ್ನಿಸಾ ರಾಷ್ಟ್ರ ಮಟ್ಟದಲ್ಲಿ ಪ್ರಥಮ ರ್‍ಯಾಂಕ್: ಉಣ್ಣಾಲು ಕೊಯ್ಯೂರು ಮದರಸಕ್ಕೆ ಶೇಕಡಾ 100 ಫಲಿತಾಂಶ

Suddi Udaya

ಬೆಳಾಲು ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಶ್ರೀ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ

Suddi Udaya

ಸೌಜನ್ಯ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪರಿಶೀಲನೆ ನಡೆಸಿದ ಹೈಕೋರ್ಟ್: ಸರಕಾರ, ಮೂಲದೂರುದಾರರು ಅಥವಾ ಸಂತ್ರಸ್ತ ಕುಟುಂಬ ಮೇಲ್ಮನವಿ ಸಲ್ಲಿಸಲು ಅವಕಾಶ ಇದೆ ಎಂದ ನ್ಯಾಯಪೀಠ

Suddi Udaya

ಜೂ. 21: ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಸ್ತ್ರೀರೋಗ ತಪಾಸಣಾ ಶಿಬಿರ

Suddi Udaya

ಸೆ.10: ನಾಲ್ಕೂರು ಯುವಶಕ್ತಿ ಫ್ರೆಂಡ್ಸ್ ನಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಧಾರ್ಮಿಕ ಕಾರ್ಯಕ್ರಮ, ಮುದ್ದು ಕೃಷ್ಣ ಸ್ಪರ್ಧೆ, ವಿವಿಧ ಆಟೋಟ ಸ್ಪರ್ದೆಗಳು

Suddi Udaya

ಬಾರ್ಯ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ಪದಗ್ರಹಣ

Suddi Udaya
error: Content is protected !!