22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಯರ್ತ್ತಡ್ಕ ಸ.ಹಿ.ಪ್ರಾ. ಶಾಲೆ ಇದರ ಶತಮಾನೋತ್ಸವದ ಅಂಗವಾಗಿ ಉಚಿತ ಆರೋಗ್ಯ ಶಿಬಿರ ಮತ್ತು ರಕ್ತದಾನ ಶಿಬಿರ

ಕಳೆಂಜ : ಕಾಯರ್ತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದರ ಶತಮಾನೋತ್ಸವದ ಅಂಗವಾಗಿ ಬೆನಕ ಹೆಲ್ತ್ ಸೆಂಟರ್ ಉಜಿರೆ, ಬೆನಕ ಚಾರಿಟೇಬಲ್ ಟ್ರಸ್ಟ್ ಉಜಿರೆ ಮತ್ತು ಎ ಜೆ ರಕ್ತ ಕೇಂದ್ರ ಎಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಮಂಗಳೂರು ಇವುಗಳ ಸಹಭಾಗಿತ್ವದಲ್ಲಿ ಉಚಿತ ಆರೋಗ್ಯ ಶಿಬಿರ ಮತ್ತು ರಕ್ತದಾನ ಶಿಬಿರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಳೆಂಜ ಕಾಯರ್ತ್ತಡ್ಕ ಇಲ್ಲಿ ಜರುಗಿತು.

ಶಿಬಿರದ ಉದ್ಘಾಟನೆಯನ್ನು ಅವಿನಾಶ್ ಮಾಲಿಕರು ಅಗ್ರಿಲೀಫ್ ಬರೆಂಗಾಯ ನೆರವೇರಿಸಿದರು.
ಮುಖ್ಯ ಅತಿಥಿಗಳಾಗಿ , ಎಂಜಿ ಭಟ್ ವ್ಯವಸ್ಥಾಪಕರು ಬೆನಕ ಆಸ್ಪತ್ರೆ ಉಜಿರೆ, ಗೋಪಾಲಕೃಷ್ಣ ರಕ್ತನಿಧಿ ಕೇಂದ್ರದ ವ್ಯವಸ್ಥಾಪಕರು ಎಜೆ ಆಸ್ಪತ್ರೆ ಮಂಗಳೂರು, ಶತಮಾನೋತ್ಸವ ಸಮಿತಿ ಅಧ್ಯಕ್ಷ ಹೆಚ್ ವಿಜಯ್ ಕುಮಾರ್ ಜೈನ್, ಕಳೆಂಜ ಗ್ರಾಮ ಪಂಚಾಯತ್ ಉಪಾಧ್ಯಕ್ಷ ವಿಶ್ವನಾಥ ಹೆಚ್, ಎಸ್.ಡಿ.ಎಮ್.ಸಿ ಉಪಾಧ್ಯಕ್ಷೆ ಶ್ರೀಮತಿ ಬೇಬಿ, ಹಿರಿಯ ವಿಧ್ಯಾರ್ಥಿ ಮತ್ತು ಪ್ರಗತಿಪರ ಕೃಷಿಕರಾದ ಕೊರಗಪ್ಪ ಮಣ್ಣಗುಂಡಿ ಇವರುಗಳು ಭಾಗವಹಿಸಿದ್ದರು.

65 ಜನ ರಕ್ತದಾನಿಗಳು ಸೇರಿದಂತೆ ಸುಮಾರು 200 ಜನರು ಶಿಬಿರದ ಪ್ರಯೋಜನ ಪಡೆದುಕೊಂಡರು.
ಬೆನಕ ಆಸ್ಪತ್ರೆ ಉಜಿರೆ ಇಲ್ಲಿನ ಡಾ. ಆದಿತ್ಯ ರಾವ್, ಡಾ. ಅಂಕಿತ ಭಟ್, ಡಾ. ರೋಹಿತ್ ಜಿ ಭಟ್, ಡಾ. ಸೂರಜ್ ಶೆಟ್ಟಿ ಸೇರಿದಂತೆ ವೈದ್ಯರು ಮತ್ತು ಸಿಬ್ಬಂದಿ ತಂಡ ಶಿಬಿರದಲ್ಲಿ ಸಹಕರಿಸಿದರು.


ಶಿಬಿರಕ್ಕೆ ನಿಸರ್ಗ ಯುವಜನೇತರ ಸಂಘ ನಿಡ್ಲೆ, ಶಿವಶಕ್ತಿ ಕಳೆಂಜ, ವನಶ್ರೀ ವಾಟ್ಸಪ್ ಗ್ರೂಪ್ ಮಿಯ್ಯಾರು, ನೇತಾಜಿ ಅಟೋ ಚಾಲಕರ ಸಂಘ ಕಾಯರ್ತ್ತಡ್ಕ, ಉಮಾಮಹೇಶ್ವರ ದೇವಸ್ಥಾನ ಕಾಯರ್ತ್ತಡ್ಕ, ಮಂಜುನಾಥೇಶ್ವರ ಭಜನಾ ಮಂಡಳಿ ಕುದ್ದ ಮೂಡಾರು, ಕುಂಭಶ್ರಿ ಕಾಯರ್ತ್ತಡ್ಕ, ಒಕ್ಕಲಿಗರ ಯುವ ವೇದಿಕೆ ಕಾಯರ್ತ್ತಡ್ಕ, ಕ್ರಿಶ್ಚಿಯನ್ ಬ್ರದರ್ಸ್ ಕಾಯರ್ತ್ತಡ್ಕ
ಶತಮಾನೋತ್ಸವ ಸಮಿತಿ ಮುಖ್ಯೋಪಾಧ್ಯಾಯ, ಅಧ್ಯಾಪಕ ವೃಂದ ಮತ್ತು ಮಕ್ಕಳು ಎಸ್.ಡಿ.ಎಮ್.ಸಿ ಸಮಿತಿ ಚಿಗುರು ಹಿರಿಯ ವಿಧ್ಯಾರ್ಥಿಗಳ ಸಂಘ ಮುಂತಾದ ಸಂಘ ಸಂಸ್ಥೆಗಳ ಸದಸ್ಯರುಗಳು ಸಹಕಾರ ನೀಡಿದರು.

Related posts

ಎಸ್.ಎಸ್.ಎಲ್.ಸಿ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ರಕ್ಮಿತಾ ಎಂ. ತಾಲೂಕಿಗೆ ತೃತೀಯ ಸ್ಥಾನ

Suddi Udaya

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯಿಂದ ದ್ವಿತೀಯ ಸೋಪಾನ, ಗರಿ, ಚರಣ ಪರೀಕ್ಷೆ

Suddi Udaya

ಮೇ 20,21: ಸಿಇಟಿ ಪರೀಕ್ಷೆ

Suddi Udaya

ಡಿ.12: ಹಳೆ ಕಟ್ಟಡ ಕಲ್ಲೇರಿಯಲ್ಲಿ “ಕಲ್ಲೇರಿ ವೆಲ್‌ನೆಸ್ ಸೆಂಟರ್‌”ನ ಶುಭಾರಂಭ

Suddi Udaya

ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ ದಯಾ ವಿಶೇಷ ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

Suddi Udaya

ಅಳದಂಗಡಿ ಅರಮನೆಗೆ ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ಭೇಟಿ

Suddi Udaya
error: Content is protected !!