September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ: ಸಿಸಿ ಕ್ಯಾಮರದಲ್ಲಿ ದೃಶ್ಯ ಸೆರೆ

ಬೆಳ್ತಂಗಡಿ : ಕಾಡಿನಿಂದ ನಾಡಿಗೆ ಬಂದು ನಡ ಪರಿಸರದ ಸಾರ್ವಜನಿಕರಿಗೆ ಭಯ ಪಡಿಸುತ್ತಿದ್ದ ಚಿರತೆಯನ್ನು ಬೆಳ್ತಂಗಡಿ ಅರಣ್ಯ ಇಲಾಖೆ ಬೋನಿಗೆ ಬೀಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಳ್ತಂಗಡಿ ತಾಲೂಕಿನ ಕನ್ಯಾಡಿ -1 ಗ್ರಾಮದಲ್ಲಿ ಹಲವು ದಿನಗಳಿಂದ ಸಾರ್ವಜನಿಕರಿಗೆ ಭೀತಿ ಹುಟ್ಟಿಸುತ್ತಿದ್ದ ಚಿರತೆಗಳಲ್ಲಿ ಒಂದು ಚಿರತೆಯನ್ನು ಜ.26 ರಂದು ಬೆಳಗ್ಗಿನ ಜಾವ 1:20 ರ ಸುಮಾರಿಗೆ ಬೋನು ಇಟ್ಟು ಸೆರೆ ಹಿಡಿಯುವಲ್ಲಿ ಬೆಳ್ತಂಗಡಿ ವಲಯ ಅರಣ್ಯ ಇಲಾಖೆ ಯಶಸ್ವಿಯಾಗಿದೆ.

ಕನ್ಯಾಡಿಯ ಮಂಜಪ್ಪ ನಾಯ್ಕ ಎಂಬವರಿಗೆ ಜ.16 ರಂದು ಬೆಳಗ್ಗೆ ಚಿರತೆ ದಾಳಿ ಮಾಡಿ ಕಾಲಿಗೆ ಗಾಯಗೊಳಿಸಿತ್ತು. ಬಳಿಕ ಚಿರತೆ ಬೇಟೆಗಾಗಿ ಅರಣ್ಯ ಇಲಾಖೆ ಬೇರೆ ಬೇರೆ ಸಾರ್ವಜನಿಕರ ಮನವಿಯ ಮೇರೆಗೆ ಇಡಲಾಗಿತ್ತು. ಜ‌.25 ರಂದು ಕನ್ಯಾಡಿಯ ಮಂಜಪ್ಪ ನಾಯ್ಕ ಎಂಬವರ ಮನೆಯ ಪಕ್ಕದಲ್ಲಿ ಬೋನು ಇಟ್ಟು ಅದರೊಳಗೆ ಕೋಳಿಯನ್ನು ಕಟ್ಟಿ ಹಾಕಲಾಗಿತ್ತು. ಈ ಚಿರತೆ ಬೋನಿನ ಒಳಗಡೆ ಹೋಗಿ ವಾಪಸ್ ತಿರುಗುವ ವೇಳೆ ಲಾಕ್ ಅಗಿದೆ. ಚಿರತೆ ಬೋನಿನ ಒಳಗಡೆ ಕೋಳಿಯನ್ನು ಹಿಡಿಯಲು ಹೋಗಿ ಸಿಕ್ಕಿಬಿದ್ದು ಹೊರ ಬರಲು ಒದ್ದಾಡುವ ದೃಶ್ಯ ಅರಣ್ಯ ಇಲಾಖೆ ಇಟ್ಟ ಸಿಸಿಕ್ಯಾಮರದಲ್ಲಿ ಸೆರೆಯಾಗಿದೆ.

ಬೋನಿಗೆ ಬಿದ್ದ ಚಿರತೆಯನ್ನು ಬೆಳ್ತಂಗಡಿ ಅರಣ್ಯಾಧಿಕಾರಿ ತ್ಯಾಗರಾಜ್ ನೇತೃತ್ವದ ತಂಡದ ಸಿಬ್ಬಂದಿ ಸುರಕ್ಷಿತವಾಗಿ ಯಾವುದೇ ತೊಂದರೆಯಾಗದಂತೆ ಕಾಡಿಗೆ ತೆಗೆದುಕೊಂಡು ಹೋಗಿ ಬಿಡಲಾಗುತ್ತದೆ ಎಂದು ಅರಣ್ಯ ಇಲಾಖೆಯವರು ತಿಳಿಸಿದ್ದಾರೆ‌.

Related posts

ಲಾಯಿಲ ಶ್ರೀ ಮಹಮ್ಮಾಯಿ ಅಮ್ಮನವರ ದೇವಸ್ಥಾನದಲ್ಲಿ ಮಾರಿ ಪೂಜೆೋತ್ಸವ

Suddi Udaya

ಮದ್ದಡ್ಕ ಕಿನ್ನಿಗೋಳಿ ವರಕಬೆಯ ಬಳಿ ಹೂತು ಹೋದ ರಾಜ್ಯ ಹೆದ್ದಾರಿ ರಸ್ತೆ

Suddi Udaya

ಎಸ್ಐಟಿ ಕಚೇರಿಗೆ ಮಟ್ಟಣ್ಣವರ್ ,ಜಯಂತ್ ಟಿ ತಂಡ ಆಗಮನ

Suddi Udaya

ಚಾರ್ಮಾಡಿ: ಚಲಿಸುತ್ತಿದ್ದ ಕೆಎಸ್​ಆರ್​ಟಿಸಿ ಬಸ್ಸಿನ ಸ್ಟೇರಿಂಗ್ ಜಾಯಿಂಟ್ ಕಟ್

Suddi Udaya

31 ವರ್ಷಗಳ ಯಶಸ್ವಿ ಪಯಣ: ಗ್ರಾಹಕರ ವಿಶ್ವಾಸದ ಪ್ರತೀಕವಾಗಿ ಬೆಳೆದ ಸೋಜಾ ಎಲೆಕ್ಟ್ರಾನಿಕ್ಸ್: ಇಂದಿನಿಂದ ಮಾನ್ಸೂನ್ ಆಫರ್ ಪ್ರಾರಂಭ; ಶೇ.10-50ರವರೆಗೆ ವಿಶೇಷ ರಿಯಾಯಿತಿ

Suddi Udaya

ಬೆದ್ರಬೆಟ್ಟು ನಿವಾಸಿ ಗೋಪಾಲ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!