July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ: ಸಿಸಿ ಕ್ಯಾಮರದಲ್ಲಿ ದೃಶ್ಯ ಸೆರೆ

ಬೆಳ್ತಂಗಡಿ : ಕಾಡಿನಿಂದ ನಾಡಿಗೆ ಬಂದು ನಡ ಪರಿಸರದ ಸಾರ್ವಜನಿಕರಿಗೆ ಭಯ ಪಡಿಸುತ್ತಿದ್ದ ಚಿರತೆಯನ್ನು ಬೆಳ್ತಂಗಡಿ ಅರಣ್ಯ ಇಲಾಖೆ ಬೋನಿಗೆ ಬೀಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಳ್ತಂಗಡಿ ತಾಲೂಕಿನ ಕನ್ಯಾಡಿ -1 ಗ್ರಾಮದಲ್ಲಿ ಹಲವು ದಿನಗಳಿಂದ ಸಾರ್ವಜನಿಕರಿಗೆ ಭೀತಿ ಹುಟ್ಟಿಸುತ್ತಿದ್ದ ಚಿರತೆಗಳಲ್ಲಿ ಒಂದು ಚಿರತೆಯನ್ನು ಜ.26 ರಂದು ಬೆಳಗ್ಗಿನ ಜಾವ 1:20 ರ ಸುಮಾರಿಗೆ ಬೋನು ಇಟ್ಟು ಸೆರೆ ಹಿಡಿಯುವಲ್ಲಿ ಬೆಳ್ತಂಗಡಿ ವಲಯ ಅರಣ್ಯ ಇಲಾಖೆ ಯಶಸ್ವಿಯಾಗಿದೆ.

ಕನ್ಯಾಡಿಯ ಮಂಜಪ್ಪ ನಾಯ್ಕ ಎಂಬವರಿಗೆ ಜ.16 ರಂದು ಬೆಳಗ್ಗೆ ಚಿರತೆ ದಾಳಿ ಮಾಡಿ ಕಾಲಿಗೆ ಗಾಯಗೊಳಿಸಿತ್ತು. ಬಳಿಕ ಚಿರತೆ ಬೇಟೆಗಾಗಿ ಅರಣ್ಯ ಇಲಾಖೆ ಬೇರೆ ಬೇರೆ ಸಾರ್ವಜನಿಕರ ಮನವಿಯ ಮೇರೆಗೆ ಇಡಲಾಗಿತ್ತು. ಜ‌.25 ರಂದು ಕನ್ಯಾಡಿಯ ಮಂಜಪ್ಪ ನಾಯ್ಕ ಎಂಬವರ ಮನೆಯ ಪಕ್ಕದಲ್ಲಿ ಬೋನು ಇಟ್ಟು ಅದರೊಳಗೆ ಕೋಳಿಯನ್ನು ಕಟ್ಟಿ ಹಾಕಲಾಗಿತ್ತು. ಈ ಚಿರತೆ ಬೋನಿನ ಒಳಗಡೆ ಹೋಗಿ ವಾಪಸ್ ತಿರುಗುವ ವೇಳೆ ಲಾಕ್ ಅಗಿದೆ. ಚಿರತೆ ಬೋನಿನ ಒಳಗಡೆ ಕೋಳಿಯನ್ನು ಹಿಡಿಯಲು ಹೋಗಿ ಸಿಕ್ಕಿಬಿದ್ದು ಹೊರ ಬರಲು ಒದ್ದಾಡುವ ದೃಶ್ಯ ಅರಣ್ಯ ಇಲಾಖೆ ಇಟ್ಟ ಸಿಸಿಕ್ಯಾಮರದಲ್ಲಿ ಸೆರೆಯಾಗಿದೆ.

ಬೋನಿಗೆ ಬಿದ್ದ ಚಿರತೆಯನ್ನು ಬೆಳ್ತಂಗಡಿ ಅರಣ್ಯಾಧಿಕಾರಿ ತ್ಯಾಗರಾಜ್ ನೇತೃತ್ವದ ತಂಡದ ಸಿಬ್ಬಂದಿ ಸುರಕ್ಷಿತವಾಗಿ ಯಾವುದೇ ತೊಂದರೆಯಾಗದಂತೆ ಕಾಡಿಗೆ ತೆಗೆದುಕೊಂಡು ಹೋಗಿ ಬಿಡಲಾಗುತ್ತದೆ ಎಂದು ಅರಣ್ಯ ಇಲಾಖೆಯವರು ತಿಳಿಸಿದ್ದಾರೆ‌.

Related posts

ಕಳೆಂಜ ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ: ಸರಕಾರಕ್ಕೆ ಮನವಿ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನಿರ್ದೇಶಕ ಸ್ಥಾನದ ಉಪಚುನಾವಣೆಗೆ ಮಾಜಿ ಸೈನಿಕ ತಂಗಚ್ಚನ್ ಅವಿರೋಧ ಆಯ್ಕೆ

Suddi Udaya

ಗುರುವಾಯನಕೆರೆ: ಲುಕ್ಕು ಫೋಟೋ ಫ್ರೇಮ್ ನೂತನ ಶಾಖೆ ಶುಭಾರಂಭ

Suddi Udaya

ಗೇರುಕಟ್ಟೆಯಲ್ಲಿ ವಿಶ್ವ ಅಗ್ನಿಹೋತ್ರ ದಿನದ ಆಚರಣೆ

Suddi Udaya

ನಿಡ್ಲೆ : ಮರ ಕಡಿಯುವ ವೇಳೆ ಆಕಸ್ಮಿಕವಾಗಿ ಮರ ಬಿದ್ದು ವ್ಯಕ್ತಿ ಸಾವು

Suddi Udaya

ರೆಖ್ಯದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ: ವಾರಿಸುದಾರರ ಪತ್ತೆಗೆ ಧರ್ಮಸ್ಥಳ ಪೊಲೀಸರ ಪ್ರಕಟಣೆ

Suddi Udaya
error: Content is protected !!