25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ: ಸಿಸಿ ಕ್ಯಾಮರದಲ್ಲಿ ದೃಶ್ಯ ಸೆರೆ

ಬೆಳ್ತಂಗಡಿ : ಕಾಡಿನಿಂದ ನಾಡಿಗೆ ಬಂದು ನಡ ಪರಿಸರದ ಸಾರ್ವಜನಿಕರಿಗೆ ಭಯ ಪಡಿಸುತ್ತಿದ್ದ ಚಿರತೆಯನ್ನು ಬೆಳ್ತಂಗಡಿ ಅರಣ್ಯ ಇಲಾಖೆ ಬೋನಿಗೆ ಬೀಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಳ್ತಂಗಡಿ ತಾಲೂಕಿನ ಕನ್ಯಾಡಿ -1 ಗ್ರಾಮದಲ್ಲಿ ಹಲವು ದಿನಗಳಿಂದ ಸಾರ್ವಜನಿಕರಿಗೆ ಭೀತಿ ಹುಟ್ಟಿಸುತ್ತಿದ್ದ ಚಿರತೆಗಳಲ್ಲಿ ಒಂದು ಚಿರತೆಯನ್ನು ಜ.26 ರಂದು ಬೆಳಗ್ಗಿನ ಜಾವ 1:20 ರ ಸುಮಾರಿಗೆ ಬೋನು ಇಟ್ಟು ಸೆರೆ ಹಿಡಿಯುವಲ್ಲಿ ಬೆಳ್ತಂಗಡಿ ವಲಯ ಅರಣ್ಯ ಇಲಾಖೆ ಯಶಸ್ವಿಯಾಗಿದೆ.

ಕನ್ಯಾಡಿಯ ಮಂಜಪ್ಪ ನಾಯ್ಕ ಎಂಬವರಿಗೆ ಜ.16 ರಂದು ಬೆಳಗ್ಗೆ ಚಿರತೆ ದಾಳಿ ಮಾಡಿ ಕಾಲಿಗೆ ಗಾಯಗೊಳಿಸಿತ್ತು. ಬಳಿಕ ಚಿರತೆ ಬೇಟೆಗಾಗಿ ಅರಣ್ಯ ಇಲಾಖೆ ಬೇರೆ ಬೇರೆ ಸಾರ್ವಜನಿಕರ ಮನವಿಯ ಮೇರೆಗೆ ಇಡಲಾಗಿತ್ತು. ಜ‌.25 ರಂದು ಕನ್ಯಾಡಿಯ ಮಂಜಪ್ಪ ನಾಯ್ಕ ಎಂಬವರ ಮನೆಯ ಪಕ್ಕದಲ್ಲಿ ಬೋನು ಇಟ್ಟು ಅದರೊಳಗೆ ಕೋಳಿಯನ್ನು ಕಟ್ಟಿ ಹಾಕಲಾಗಿತ್ತು. ಈ ಚಿರತೆ ಬೋನಿನ ಒಳಗಡೆ ಹೋಗಿ ವಾಪಸ್ ತಿರುಗುವ ವೇಳೆ ಲಾಕ್ ಅಗಿದೆ. ಚಿರತೆ ಬೋನಿನ ಒಳಗಡೆ ಕೋಳಿಯನ್ನು ಹಿಡಿಯಲು ಹೋಗಿ ಸಿಕ್ಕಿಬಿದ್ದು ಹೊರ ಬರಲು ಒದ್ದಾಡುವ ದೃಶ್ಯ ಅರಣ್ಯ ಇಲಾಖೆ ಇಟ್ಟ ಸಿಸಿಕ್ಯಾಮರದಲ್ಲಿ ಸೆರೆಯಾಗಿದೆ.

ಬೋನಿಗೆ ಬಿದ್ದ ಚಿರತೆಯನ್ನು ಬೆಳ್ತಂಗಡಿ ಅರಣ್ಯಾಧಿಕಾರಿ ತ್ಯಾಗರಾಜ್ ನೇತೃತ್ವದ ತಂಡದ ಸಿಬ್ಬಂದಿ ಸುರಕ್ಷಿತವಾಗಿ ಯಾವುದೇ ತೊಂದರೆಯಾಗದಂತೆ ಕಾಡಿಗೆ ತೆಗೆದುಕೊಂಡು ಹೋಗಿ ಬಿಡಲಾಗುತ್ತದೆ ಎಂದು ಅರಣ್ಯ ಇಲಾಖೆಯವರು ತಿಳಿಸಿದ್ದಾರೆ‌.

Related posts

ಧರ್ಮಸ್ಥಳ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸಲು ಸಾರಿಗೆ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಲ್ಯಾಬ್ ಪರೀಕ್ಷೆಯಲ್ಲಿ ನಿಖರ ವರದಿ ನೀಡಬಲ್ಲ ಅತ್ಯಾಧುನಿಕ ಸಿಎಲ್‌ಐಎ ಮೆಶಿನ್ ಅಳವಡಿಕೆ

Suddi Udaya

ರೂ. 1.50 ಕೋಟಿ ವೆಚ್ಚದಲ್ಲಿ ನಿಮಾ೯ಣವಾಗಲಿದೆ ಕನಸಿನ ಹೊಸ ʻಭವ್ಯ ಕುಲಾಲ ಸಮುದಾಯ ಭವನʼ:ಮಾ.19 ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ವೇಣೂರುನಲ್ಲಿ ಶ್ರೀ ಸಾಯಿ ಗಿಫ್ಟ್ &ಟಾಯ್ಸ್ ಸೆಂಟರ್ ಶುಭಾರಂಭ

Suddi Udaya

ಉಜಿರೆ-ಧರ್ಮಸ್ಥಳ ರಸ್ತೆಯ ನೀರಚಿಲುಮೆಯ ಬಳಿ ಮೀನು ಸಾಗಾಟದ ಲಾರಿ ಹಾಗೂ ಓಮ್ನಿ ಕಾರು ನಡುವೆ ಡಿಕ್ಕಿ

Suddi Udaya

ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಸಮಾರಂಭ

Suddi Udaya
error: Content is protected !!