23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಡ ಮೂಡಾಯಿಬೆಟ್ಟು ಹಂದಿ ಸಾಕಾಣಾ ಕೇಂದ್ರದಿಂದ ಹಂದಿಯನ್ನು ಎಳೆದೊಯ್ದ ಚಿರತೆ

ನಡ: ಇಲ್ಲಿಯ ನಡ ಗ್ರಾಮದ ಮೂಡಾಯಿಬೆಟ್ಟು ಎಂಬಲ್ಲಿ ಹಂದಿ ಸಾಕುವ ಶೆಡ್‌ನಿಂದ ಹಂದಿಯೊಂದನ್ನು ಚಿರತೆ ಎಳೆದೊಯ್ದ ಘಟನೆ ನಿನ್ನೆ ರಾತ್ರಿ ನಡೆದಿದೆ ಎಂದು ಸ್ಥಳೀಯರಾದ ಶ್ಯಾಮಸುಂದರ್ ನಡ ಮಾಹಿತಿ ನೀಡಿದ್ದಾರೆ.

ನಡ ಗ್ರಾಮದ ಮೂಡಾಯಿಬೆಟ್ಟು ನಿವಾಸಿ ವಿನ್ಸೆಂಟ್ ಎಂಬವರು ಹಂದಿ ಸಾಕಾಣೆ ಮಾಡುತ್ತಿದ್ದು, ಇಂದು ಬೆಳಿಗ್ಗೆ ಹಂದಿ ಸಾಕಾಣೆ ಮಾಡುವ ಶೆಡ್‌ನ ಬಳಿ ರಕ್ತದ ಕಲೆಗಳು ಕಂಡು ಬಂದಿದ್ದು, ಇವರ ಸಾಕುತ್ತಿದ್ದ ಹಂದಿಗಳಲ್ಲಿ ಒಂದು ಹಂದಿ ನಾಪತ್ತೆಯಾಗಿರುವುದು ಕಂಡು ಬಂದಿದೆ. ಶೆಡ್‌ಗೆ ನುಗ್ಗಿದ ಚಿರತೆ ಹಂದಿಯನ್ನು ಕಾಡಿಗೆ ಎಳೆದೊಯ್ದಿರಬಹುದೆಂದು ಸಂಶಯಿಸಲಾಗಿದೆ. ಮೂಡಾಯಿಬೆಟ್ಟು ಪರಿಸರದ ಕಾಡಿನಲ್ಲಿ ಚಿರತೆ ಓಡಾಟವಿದೆ ಎಂದು ಸ್ಥಳೀಯರಾದ ಶ್ಯಾಮ್‌ಸುಂದರ್ ನಡ ತಿಳಿಸಿದ್ದಾರೆ. ಸಮೀಪದಲ್ಲೆ ಸರಕಾರಿ ಶಾಲೆಯೊಂದಿದ್ದು, ಸ್ಥಳೀಯರಲ್ಲಿ ಆಂತಕ ಎದುರಾಗಿದೆ.

Related posts

ಮೊಗ್ರು: ಕಂಚಿನಡ್ಕ ದಲ್ಲಿ ಗುಡ್ಡ ಕುಸಿತ: ಬಿರುಕು ಬಿಟ್ಟ ಮನೆ: ಸಂಪೂರ್ಣ ಹಾನಿ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ಪದಗ್ರಹಣ

Suddi Udaya

ನೆರಿಯ : ಗ್ರಾಮ ಪಂಚಾಯತಿನ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಉಜಿರೆ ಶ್ರೀ. ಕ್ಷೇ. ಧ. ಗ್ರಾ. ಯೋಜನೆ ಒಕ್ಕೂಟ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಿಗೆ ಪ್ರಶಿಕ್ಷಣ ಕಾರ್ಯಾಗಾರ

Suddi Udaya
error: Content is protected !!