25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಡ ಮೂಡಾಯಿಬೆಟ್ಟು ಹಂದಿ ಸಾಕಾಣಾ ಕೇಂದ್ರದಿಂದ ಹಂದಿಯನ್ನು ಎಳೆದೊಯ್ದ ಚಿರತೆ

ನಡ: ಇಲ್ಲಿಯ ನಡ ಗ್ರಾಮದ ಮೂಡಾಯಿಬೆಟ್ಟು ಎಂಬಲ್ಲಿ ಹಂದಿ ಸಾಕುವ ಶೆಡ್‌ನಿಂದ ಹಂದಿಯೊಂದನ್ನು ಚಿರತೆ ಎಳೆದೊಯ್ದ ಘಟನೆ ನಿನ್ನೆ ರಾತ್ರಿ ನಡೆದಿದೆ ಎಂದು ಸ್ಥಳೀಯರಾದ ಶ್ಯಾಮಸುಂದರ್ ನಡ ಮಾಹಿತಿ ನೀಡಿದ್ದಾರೆ.

ನಡ ಗ್ರಾಮದ ಮೂಡಾಯಿಬೆಟ್ಟು ನಿವಾಸಿ ವಿನ್ಸೆಂಟ್ ಎಂಬವರು ಹಂದಿ ಸಾಕಾಣೆ ಮಾಡುತ್ತಿದ್ದು, ಇಂದು ಬೆಳಿಗ್ಗೆ ಹಂದಿ ಸಾಕಾಣೆ ಮಾಡುವ ಶೆಡ್‌ನ ಬಳಿ ರಕ್ತದ ಕಲೆಗಳು ಕಂಡು ಬಂದಿದ್ದು, ಇವರ ಸಾಕುತ್ತಿದ್ದ ಹಂದಿಗಳಲ್ಲಿ ಒಂದು ಹಂದಿ ನಾಪತ್ತೆಯಾಗಿರುವುದು ಕಂಡು ಬಂದಿದೆ. ಶೆಡ್‌ಗೆ ನುಗ್ಗಿದ ಚಿರತೆ ಹಂದಿಯನ್ನು ಕಾಡಿಗೆ ಎಳೆದೊಯ್ದಿರಬಹುದೆಂದು ಸಂಶಯಿಸಲಾಗಿದೆ. ಮೂಡಾಯಿಬೆಟ್ಟು ಪರಿಸರದ ಕಾಡಿನಲ್ಲಿ ಚಿರತೆ ಓಡಾಟವಿದೆ ಎಂದು ಸ್ಥಳೀಯರಾದ ಶ್ಯಾಮ್‌ಸುಂದರ್ ನಡ ತಿಳಿಸಿದ್ದಾರೆ. ಸಮೀಪದಲ್ಲೆ ಸರಕಾರಿ ಶಾಲೆಯೊಂದಿದ್ದು, ಸ್ಥಳೀಯರಲ್ಲಿ ಆಂತಕ ಎದುರಾಗಿದೆ.

Related posts

ಬಳಂಜ ಬಿವಿಎಲ್ ವಾಲಿವಾಲ್ ಪಂದ್ಯಾವಳಿ, ಕೋಟ್ಯಾನ್ ರಾಕರ್ಸ್ ಚಾಂಪಿಯನ್, ಇಕೋಪ್ರೇಶ್ ರನ್ನರ್

Suddi Udaya

ಕಾಶಿಬೆಟ್ಟುನಲ್ಲಿ ರಸ್ತೆ ಮಧ್ಯೆ ಕೈಕೊಟ್ಟ ಟ್ರಕ್: ತಾಸುಗಟ್ಟಲೆ ವಾಹನ ಬ್ಲಾಕ್

Suddi Udaya

ಅತ್ಯಮೂಲ್ಯ ಮತ ಚಲಾಯಿಸಿದ 106 ವರ್ಷದ ಅಜ್ಜಿ:

Suddi Udaya

ಇಂದು ಸಂಜೆ ಬಹುನಿರೀಕ್ಷಿತ ದಸ್ಕತ್ ತುಳು ಚಲನಚಿತ್ರದ ಟೀಸರ್ ಬಿಡುಗಡೆ

Suddi Udaya

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ಮೇಲೆ ಪೋಕ್ಸೋ ಪ್ರಕರಣ ದಾಖಲು

Suddi Udaya

ಬಳಂಜ: ತಾರಿದೊಟ್ಟುವಿನಲ್ಲಿ ಚಿಪ್ಪುಹಂದಿ ಪ್ರತ್ಯಕ್ಷ: ಸುರಕ್ಷಿತವಾಗಿ ಹಿಡಿದು ಅರಣ್ಯಕ್ಕೆ ಬಿಟ್ಟ ಅರಣ್ಯಾಧಿಕಾರಿಗಳು

Suddi Udaya
error: Content is protected !!