23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಎಸ್‌ಡಿಪಿಐ ವತಿಯಿಂದ 77 ನೇ ಗಣರಾಜ್ಯೋತ್ಸವ ದಿನಾಚರಣೆ

ಬೆಳ್ತಂಗಡಿ : 77 ನೇ ಗಣರಾಜ್ಯೋತ್ಸವ ದಿನಾಚರಣೆಯ ಪ್ರಯುಕ್ತ “ಸಂವಿಧಾನ ಮೌಲ್ಯಗಳ ರಕ್ಷಣೆ – ಗಣರಾಜ್ಯ ಸಂಭ್ರಮ” ಎಂಬ ಘೋಷ ವಾಕ್ಯದೊಂದಿಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಸಮಿತಿ ವತಿಯಿಂದ ಧ್ವಜಾರೋಹಣ ಹಾಗೂ ಸಭಾ ಕಾರ್ಯಕ್ರಮವು ಕ್ಷೇತ್ರಾಧ್ಯಕ್ಷ ಅಕ್ಬರ್ ಬೆಳ್ತಂಗಡಿ ಅವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿಯಲ್ಲಿ ನಡೆಯಿತು.

ಎಸ್‌ಡಿಪಿಐ ಕರ್ನಾಟಕ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ರವರು ಧ್ವಜಾರೋಹಣ ನೆರವೇರಿಸಿ ಮಾತಾಡಿ, ಗಣರಾಜ್ಯೋತ್ಸವ ದಿನಾಚರಣೆಯ ಭಾಗವಾಗಿ ದೇಶ ಹಾಗೂ ದೇಶದ ಬಡಜನತೆ, ಶೋಷಿತರು ಉಳಿಯಬೇಕಾದರೆ, ಸಂವಿಧಾನವನ್ನು ಉಳಿಸಬೇಕು. ಸಂವಿಧಾನ ಪೂರ್ವದಲ್ಲಿ ಇಲ್ಲದ ಹಕ್ಕುಗಳು ಸಂವಿಧಾನ ಜಾರಿಯ ನಂತರ ಹಲವಾರು ಹಕ್ಕುಗಳು ಸಿಕ್ಕಿದೆ. ಸಂವಿಧಾನವನ್ನು ಉಳಿಸಲು ನಾವೆಲ್ಲರೂ ತಯಾರಾಗಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಎಸ್‌ಡಿಪಿಐ ನೂತನ ರಾಷ್ಟ್ರೀಯ ಕಾರ್ಯದರ್ಶಿ ಅಲ್ಫೋನ್ಸ್ ಫ್ರಾಂಕೋ ಹಾಗೂ ರಾಜ್ಯ ಕಾರ್ಯದರ್ಶಿ ರಿಯಾಜ್ ಕಡಂಬು ಕಾರ್ಯಕ್ರಮನ್ನು ಉದ್ದೇಶಿಸಿ ಅತಿಥಿ ಮಾತುಗಳನ್ನಾಡಿದರು.

2026-28ರ ಅವಧಿಗೆ ಎಸ್‌ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿಯಾಗಿ ನೂತನವಾಗಿ ಆಯ್ಕೆಯಾದ ಅಲ್ಫೋನ್ಸ್ ಫ್ರಾಂಕೋ ರವರಿಗೆ ಕಾರ್ಯಕ್ರಮದಲ್ಲಿ ಸನ್ಮಾನ ಮಾಡಲಾಯಿತು.

ಕಾರ್ಯಕ್ರಮದ ವೇದಿಕೆಯಲ್ಲಿ ಮಂಗಳೂರು ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷರು ಇನಾಸ್ ರೋಡ್ರಿಗಾಸ್, ಮಂಗಳೂರು ಗ್ರಾಮಾಂತರ ಜಿಲ್ಲಾ ಪ್ರ. ಕಾರ್ಯದರ್ಶಿ ಸಿದ್ದೀಕ್ ಪುತ್ತೂರು, ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ನವಾಝ್ ಕಟ್ಟೆ, ಜಿಲ್ಲಾ ಸಮಿತಿ ಸದಸ್ಯರು ಹನೀಫ್ ಪುಂಜಾಲಕಟ್ಟೆ, ಕ್ಷೇತ್ರ ಹಾಗೂ ಬ್ಲಾಕ್ ನಾಯಕರು, ಕಾರ್ಯಕರ್ತರು ಇತರರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಅಶ್ಫಾಕ್ ಪುಂಜಾಲಕಟ್ಟೆ ನಿರೂಪಿಸಿ ಧನ್ಯವಾದ ಮಾಡಿದರು.

Related posts

ಮಡಂತ್ಯಾರು: ಬಂಗೇರಕಟ್ಟ ಅಕ್ಷರ ಕರಾವಳಿ ಅಂಗನವಾಡಿ ಕೇಂದ್ರದ ಮಕ್ಕಳ ಬಾಲ ಮೇಳ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ ಇದರ 2023-24ನೇ ಸಾಲಿನ ವಾರ್ಷಿಕ ಮಹಾಸಭೆ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ನೇತೃತ್ವದಲ್ಲಿ ಕ್ಯಾನ್ಸರ್ ಜನಜಾಗೃತಿ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya

ಗುರುವಾಯನಕೆರೆ ಕುಂಬಾರರ ಗುಡಿ ಕೈಗಾರಿಕ ಸಹಕಾರ ಸಂಘದ ಮುಂಗಾರು ಹಂಗಾಮ ಠೇವಣಿ ಯೋಜನೆಗಳ ಕರಪತ್ರ ಬಿಡುಗಡೆ

Suddi Udaya

ಕುತ್ಲೂರು ಉ. ಹಿ.ಪ್ರಾ. ಶಾಲೆಯ ಮಕ್ಕಳಿಗೆ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ: ತಾಲೂಕು ಮಹಿಳಾ ವೇದಿಕೆ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya
error: Content is protected !!