22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

ಮಚ್ಚಿನ: ಇಲ್ಲಿಯ ಸರ್ಕಾರಿ ಪ್ರೌಢಶಾಲೆಯಲ್ಲಿ 77ನೇ ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಎಸ್ ಡಿ ಎಮ್ ಸಿ ಕಾರ್ಯಾಧ್ಯಕ್ಷ ರುಕ್ಮಯ ಬಾಳಿಂಜರವರು ಧ್ವಜಾರೋಹಣ ನೆರವೇರಿಸಿದರು. ವಿದ್ಯಾರ್ಥಿಗಳು ಚಿತ್ರಿಸಿರುವ ಪ್ರಜಾಪ್ರಭುತ್ವದ ದೇಗುಲ ಸಂಸತ್ ಭವನದ ಮುಂದೆ ಕನ್ನಡ ಮತ್ತು ಆಂಗ್ಲ ಭಾಷೆ ಎರಡರಲ್ಲೂ ಕಂಠಪಾಠವಾಗಿರುವ ಸಂವಿಧಾನದ ಪೀಠಿಕೆಯನ್ನು ಸಾಮೂಹಿಕವಾಗಿ ಓದಿದರು.

ಈ ಸಂಸತ್ತು ಭವನವನ್ನು ಶಿಕ್ಷಕರ ಮಾರ್ಗದರ್ಶನದೊಂದಿಗೆ 9ನೇ ತರಗತಿಯ ವಿದ್ಯಾರ್ಥಿಗಳು ಸಗಣಿ, ಸುಣ್ಣ, ಜಂಬಿಟ್ಟಿಗೆ ಮಣ್ಣಿನ ಪುಡಿ, ಕೆಂಪು ಮಣ್ಣು, ಮರಳು, ಸಣ್ಣ ಕಲ್ಲು, ರಂಗೋಲಿ ಪುಡಿ ಬಳಸಿ ಚಿತ್ರಿಸಿದರು. ಸಭಾ ಕಾರ್ಯಕ್ರಮದಲ್ಲಿ 2024-25 ನೇ ಸಾಲಿನಲ್ಲಿ ಅತ್ಯುನ್ನತ ಶ್ರೇಣಿ ಪಡೆದ ಮಕ್ಕಳಿಗೆ ದಾನಿ ಶ್ರೀಧರ ಭಟ್ ರವರು ನಗದು ನೀಡಿ ಪ್ರೋತ್ಸಾಹಿಸಿದರು. ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳನ್ನು ವಿಷಯ ಶಿಕ್ಷಕರು ಸನ್ಮಾನಿಸಿದರು. ಅದೇ ರೀತಿ ಕ್ರೀಡೆ, ಹಾಜರಾತಿ, ಕಲಿಕೆ, ಕ್ರಿಯಾಶೀಲತೆ ಇತ್ಯಾದಿ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಶಿಕ್ಷಕರಾದ ಸುಭಾಶ್ಚಂದ್ರ ಪೂಜಾರಿ, ಲೀನಾಸೆರಾವೋ, ದುರ್ಗಾಪ್ರಸಾದ್, ಚಂದಪ್ಪ ಪೂಜಾರಿ, ಅವಿನಾಶ, ಕಚೇರಿ ಸಿಬ್ಬಂದಿ ತೇಜಸ್ವಿ ಮತ್ತು ಎಸ್.ಡಿ,ಎಮ್.ಸಿ ಸದಸ್ಯರು, ಪೋಷಕರು, ಹಿರಿಯ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಸಮಾಜ ವಿಜ್ಞಾನ ಶಿಕ್ಷಕರಾದ ವೆಂಕಪ್ಪ ಬಿ ಕಾರ್ಯಕ್ರಮ ನಿರೂಪಿಸಿದರು . ಅಧ್ಯಕ್ಷೀಯ ಭಾಷಣದ ಬಳಿಕ ಗಣಿತ ಶಿಕ್ಷಕ ಸುರೇಶ ವಂದಿಸಿದರು.

Related posts

ಡಾ. ಪ್ರದೀಪ್ ಆಟಿಕುಕ್ಕೆ ನಾವೂರು ರವರ ಧಾರ್ಮಿಕ ಸೇವೆಗೆ “ಧರ್ಮ ಸಾರಥಿ” ಬಿರುದು

Suddi Udaya

ಅಂಗಳದಲ್ಲಿದ್ದ ಅಡಿಕೆಯನ್ನು ತಾರಸಿಯ ಮೇಲೆ ಹಾಕಿ ಬರುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಉಜಿರೆ ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಕೈತೋಟ ನಿರ್ವಹಣೆ ಮತ್ತು ಸಹಜ ಕೃಷಿ ಹಾಗೂ ಓರಿಗಾಮಿ ತರಬೇತಿ

Suddi Udaya

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ.ಯೋಜನೆ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಘಟಕ ಪುದುವೆಟ್ಟು ವತಿಯಿಂದ ಗಿಡನಾಟಿ ಕಾರ್ಯಕ್ರಮ

Suddi Udaya

ಪಟ್ರಮೆಯ ಕೂಟೇಲು – ಸಂಕೇಶ – ಮಣಿಯೇರು ಪಂಚಾಯತ್ ರಸ್ತೆಯ ಕಿರು ಸೇತುವೆ ಕುಸಿತ

Suddi Udaya

ಅಕ್ರಮ ಮದ್ಯ ಮಾರಾಟ: ವೇಣೂರು ಪೊಲೀಸರಿಂದ ದಾಳಿ

Suddi Udaya
error: Content is protected !!