23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಧ.ಮಂ.ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ಜೂನಿಯರ್ ರೆಡ್ ಕ್ರಾಸ್ ವತಿಯಿಂದ ವಿನೂತನ ಕಾರ್ಯಕ್ರಮ ತುಡಿತ ಭಾಗ 4

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೂನಿಯರ್ ರೆಡ್ ಕ್ರಾಸ್ ವತಿಯಿಂದ ತನು ಸ್ಪಂದಿಸದವರ ಮನಸ್ ಸ್ಪಂದಿಸುವ ಕಾರ್ಯಕ್ರಮ ತುಡಿತ ಭಾಗ-4 ಇದಕ್ಕೆ ಇಂದು ಚಾಲನೆ ನೀಡಲಾಯಿತು.

ಮುಖ್ಯ ಅತಿಥಿಗಳಾಗಿ ಇದೇ ಶಾಲೆಯ ಹಳೆಯ ವಿದ್ಯಾರ್ಥಿ ಹಾಗೂ ಪ್ರಸ್ತುತ ಬೆಂಗಳೂರಿನ ಐಬಿಎಂನಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತಿರುವ ದರ್ಶನ್ ಆಗಮಿಸಿದ್ದರು. ಇವರು ತುಡಿತಕ್ಕೆ ಸಂಬಂಧಿಸಿದ ಕಿಟ್ ಅನ್ನು ಮುಖ್ಯೋಪಾಧ್ಯಾಯಿನಿಯವರಿಗೆ ಹಸ್ತಾಂತರಿಸುವ ಮೂಲಕ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ವಿಧ್ಯಾರ್ಥಿಗಳಿಗೆ ಸಮಾಜ ಸೇವೆಗೆ ಇದು ಒಂದು ಉತ್ತಮ. ವಿದ್ಯಾರ್ಥಿಗಳಲ್ಲಿ ಸಮಾಜ ಸೇವೆಯನ್ನೂ ಮಾಡಲು ಅನುವು ಮಾಡಿಕೊಟ್ಟಾಗ ಸಮಾಜ ಮುಖಿ ಕೆಲಸಗಳು ಆಗಿ ಸಮಾಜದ ಅಭಿವೃದ್ಧಿ ಆಗುತ್ತದೆ.ಇಂದಿನ ಯುವಜನರು ಇಂತಹ ಸಮಾಜ ಸೇವೆ ಮಾಡಲು ಮುಂದಾಗ ಬೇಕು.ಎಂಬಿತ್ಯಾದಿ ವಿಚಾರಗಳನ್ನು ತಿಳಿಯಪಡಿಸಿದರು.

ಈ ಸಂದರ್ಭದಲ್ಲಿ ತನು ಸ್ಪಂದಿಸದವರ ಮನಸ್ ಸ್ಪಂದಿಸುವ ಹಾಸಿಗೆ ಬಿಟ್ಟು ಮೇಲೆ ಏಳಲೂ ಆಗದಂತಹ 11 ವ್ಯಕ್ತಿಗಳ ಮನೆಗೆ ಭೇಟಿ ನೀಡಿ ಹಣ್ಣು ಹಂಪಲು ಹಾಗೂ ಅವರಿಗೆ ಅವಶ್ಯಕತೆ ಇರುವ ಸಣ್ಣ ಪುಟ್ಟ ಕೈಲಾದ ಸಹಾಯವನ್ನು ಮಾಡಿ ಅವರಿಗೆ ಹಾಡು ಹರಟೆ ನೃತ್ಯಗಳಿಂದ ರಂಜಿಸಿ ಅವರಲ್ಲಿ ಜೀವನ ಚೈತನ್ಯ ತುಂಬಲಾಯಿತು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ.ವಿ ಇವರ ಅತ್ಯಂತ ಮುತುವರ್ಜಿಯಿಂದ ಆರಂಭಗೊಂಡ ಈ ವಿಶೇಷ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಅತ್ಯಂತ ಆಸಕ್ತಿಯಿಂದ ಪಾಲ್ಗೊಂಡರು.

Related posts

ಸೆ.22 -ಅ.2 : ಮಲೆಬೆಟ್ಟು ಶ್ರೀ ವನದುರ್ಗಾ ದೇವಾಲಯದಲ್ಲಿ ನವರಾತ್ರಿ ಪೂಜಾ ಮಹೋತ್ಸವ

Suddi Udaya

ಶ್ರೀ ಕೃಷ್ಣ ಆಸ್ಪತ್ರೆ,ಕಕ್ಕಿಂಜೆ ಸಹಸಂಸ್ಥೆ ಹೊಯ್ಸಳ ಹೆಲ್ತ್ ಕೇರ್, ಮೂಡಿಗೆರೆ ಹಾಗೂ ರೋಟರಿ ಕ್ಲಬ್, ಮೂಡಿಗೆರೆ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬಳಂಜದಲ್ಲಿ ನಾವರ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಹಾ ಯೋಜನೆ: ಬೆಳ್ತಂಗಡಿ ಪಟ್ಟಣ ಪಂಚಾಯತನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಯೋಜನೆಯ ನಿಯಮಗಳನ್ನು ಅನ್ವಯಿಸದಂತೆ ಕ್ರಮ ತೆಗೆದುಕೊಳ್ಳಲು ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಆಗ್ರಹ: ನಗರಾಭಿವೃದ್ದಿ ಸಚಿವರಿಂದ ಸಕಾರಾತ್ಮಕವಾಗಿ ಸ್ಪಂದನೆ ಸಮಸ್ಯೆ ಪರಿಹರಿಸುವ ಭರವಸೆ

Suddi Udaya

ನ.22: ಗೆಜ್ಜೆಗಿರಿಯಲ್ಲಿ ಮೂರನೇ ವರ್ಷದ ಗೆಜ್ಜೆನಾದದ ವೈಭವ

Suddi Udaya

ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರಾಣಿಜನ್ಯ ರೋಗಗಳ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!