ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಸಪಟ್ಣ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ವೇಣೂರು: ಹೊಸಪಟ್ಣ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.

ಮಾಜಿ ಯೋಧರಾದ ಮೋಹನ್ ಜಿ.ಮೂಲ್ಯರವರು ಧ್ವಜಾರೋಹಣ ನೆರವೇರಿಸಿ ಮಾತನಾಡಿ ಶಾಲಾ ಪರಿಸರದ ಬಗ್ಗೆ ಖುಷಿ ವ್ಯಕ್ತಪಡಿಸಿದರು. 90ರ ದಶಕದಲ್ಲಿ ಹತ್ತು ವರ್ಷಗಳ ಕಾಲ ಪ್ರಧಾನಮಂತ್ರಿ ಅವರ ಅಂಗರಕ್ಷಕರಾಗಿದ್ದ ಬಗ್ಗೆ ತನ್ನ ಅನುಭವಗಳನ್ನು ತೆರೆದಿಟ್ಟರು. ಮಕ್ಕಳು ದೇಶ ಸೇವೆಯ ಕಾಯಕದಲ್ಲಿ ತೊಡಗಲು ಪ್ರೇರೇಪಿಸಿದರು. ಮಕ್ಕಳೊಂದಿಗೆ ತನ್ನ ವೃತ್ತಿ ಜೀವನದ ಬಗ್ಗೆ ಅನುಭವಗಳನ್ನು ಹಂಚಿಕೊಂಡರು.

ಸಂವಿಧಾನದ ಪೀಠಿಕೆಯನ್ನು ತುಳು ಭಾಷೆಯಲ್ಲಿ ಹೇಳುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು


ಶಾಲಾ ಮುಖ್ಯ ಶಿಕ್ಷಕಿ ಸ್ವಾಗತಿಸಿದರು. ಶಾಲಾ ಅತಿಥಿ ಶಿಕ್ಷಕಿ ಭವ್ಯ ಧನ್ಯವಾದವನ್ನು ಸಲ್ಲಿಸಿದರು. ಬಂಟ್ವಾಳ ತಾಲೂಕಿನ ನಯನಾಡು ಎಂಬಲ್ಲಿ ನಯನ್ ಬೇಕರಿ ಮಾಲಕರಾದ ಮೆಲ್ವಿಸ್ಟರ್ ಮಕ್ಕಳಿಗೆ ಸಿಹಿ ತಿಂಡಿಯನ್ನು ನೀಡಿದರು.

Related posts

ಉಜಿರೆ ಶ್ರೀ ಜನಾರ್ದನಸ್ವಾಮಿ ಯಕ್ಷಗಾನ ಚಿಕ್ಕಮೇಳ ತಿರುಗಾಟ ಆರಂಭ

Suddi Udaya

ನಾರಾವಿ ಸಂತ ಅಂತೋನಿ ಕಾಲೇಜಿನಲ್ಲಿ ಸಂಭ್ರಮ 2025

Suddi Udaya

ಗುರುವಾಯನಕೆರೆಯಲ್ಲಿ ಸಂಭ್ರಮದ ಬಂಟೋತ್ಸವ

Suddi Udaya

ಉಜಿರೆ ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ಕೊಕ್ಕಡ ಶಾಖೆಯು ಸ್ಥಳಾಂತರಗೊಂಡು ಉದ್ಘಾಟನೆ

Suddi Udaya

ಮೊರಾರ್ಜಿ ದೇಸಾಯಿ/ಇಂದಿರಾಗಾಂಧಿ/ ಡಾ. ಬಿಆರ್ ಅಂಬೇಡ್ಕರ್/ನಾರಾಯಣ ಗುರು ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

Suddi Udaya

ಬೆಳಾಲು ಗ್ರಾ. ಪಂ. ನಲ್ಲಿ ಮೀನು ಕೃಷಿ ಮತ್ತು ಸಿಹಿ ನೀರಿನ ಮುತ್ತು ಕೃಷಿ ಕಾರ್ಯಾಗಾರ

Suddi Udaya
error: Content is protected !!