ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮ ಹಾಗೂ ದೇಶಭಕ್ತಿಯಿಂದ ಆಚರಿಸಲಾಯಿತು.
ಚರ್ಚ್ನ ಪಾಲನ ಮಂಡಳಿಯ ಉಪಾಧ್ಯಕ್ಷ ಪ್ರವೀಣ್ ವಿಜಯ್ ಡಿಸೋಜಾ ರಾಷ್ಟ್ರಧ್ವಜವನ್ನು ಹಾರಿಸಿ ಗೌರವ ವಂದನೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ದೇಶಭಕ್ತಿಗೀತೆಗಳು, ಭಾಷಣ, ನೃತ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಿ ಎಲ್ಲರ ಮನಸೆಳೆದರು.
ಮುಖ್ಯ ಅತಿಥಿಗಳು ತಮ್ಮ ಭಾಷಣದಲ್ಲಿ ಭಾರತೀಯ ಸಂವಿಧಾನದ ಮಹತ್ವ ಮತ್ತು ದೇಶದ ಏಕತೆ–ಅಖಂಡತೆಯ ಕುರಿತು ಮಕ್ಕಳಿಗೆ ಸಂದೇಶ ನೀಡಿದರು. ಕಾರ್ಯಕ್ರಮದ ವೇದಿಕೆಯಲ್ಲಿ ಶಾಲಾ ಪ್ರಾಂಶುಪಾಲರಾದ ವಂ| ಫಾ ವಿಜಯ್ ಲೋಬೊ, ಚರ್ಚ್ ಪಾಲನ ಮಂಡಳಿಯ ಕಾರ್ಯದರ್ಶಿ ಮರ್ಲಿನ್ ಡಿಸೋಜ ಹಾಗೂ ಸ್ಥಳೀಯ ಪಂಚಾಯಿತಿ ಸದಸ್ಯರಾದ ಅನಿಲ್ ಡಿಸೋಜ ಹಾಗೂ ಜಾನೆಟ್ ರೋಡ್ರಿಗಸ್ ಉಪಸ್ಥಿತರಿದ್ದರು.
ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪಾಲಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಕೈಜೋಡಿಸಿದರು. ಕಾರ್ಯಕ್ರಮವನ್ನು ಶ್ರೀಮತಿ ಜೆಸಿಂತಾ ಸ್ವಾಗತಿಸಿ, ಶ್ರೀಮತಿ ನಳಿನಿ ಹಾಗೂ ಸಿಸ್ಟರ್ ಸಿರಿಶಾ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.











