38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಕ್ಸೆಲ್ ಪಿಯು ಕಾಲೇಜು ವಿದ್ಯಾರ್ಥಿಗಳಿಂದ ಅಂತರರಾಷ್ಟ್ರೀಯ ಗಣಿತ ಒಲಿಂಪಿಯಾಡ್‌ನಲ್ಲಿ ಮಹತ್ವದ ಸಾಧನೆ

ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಂತರರಾಷ್ಟ್ರೀಯ ಗಣಿತ ಒಲಿಂಪಿಯಾಡ್ (International Mathematics Olympiad – IMO) ಪರೀಕ್ಷೆಯಲ್ಲಿ ವಿಶಿಷ್ಟ ಸಾಧನೆ ಮಾಡುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ.

ಇತ್ತೀಚೆಗೆ ಪ್ರಕಟವಾದ IMO ಪರೀಕ್ಷೆಯ ಫಲಿತಾಂಶದಲ್ಲಿ ಎಕ್ಸೆಲ್ ಪಿಯು ಕಾಲೇಜಿನ ಐದು ವಿದ್ಯಾರ್ಥಿಗಳಾದ ಕೈಲಾಶ್ ಎನ್.ಎಸ್, ವರ್ಷಿಣಿ ಟಿ, ವಿಜಯಲಕ್ಷ್ಮೀ ಎಸ್ ಮಡಿವಾಳ, ಸ್ನೇಹ ಮಹತೇಂಶ್, ನಿಶ್ಚಯ್ ಗೌಡ ಎರಡನೇ ಹಂತದ (Level–2) ಪರೀಕ್ಷೆಗೆ ಅರ್ಹತೆ ಪಡೆದುಕೊಂಡಿದ್ದಾರೆ. ಜೊತೆಗೆ 235 ವಿದ್ಯಾರ್ಥಿಗಳು ‘ಗೋಲ್ಡ್ ಮೆಡಲ್ ಆಫ್ ಎಕ್ಸಲೆನ್ಸ್’ ಪ್ರಶಸ್ತಿಯನ್ನು ಪಡೆದು ತಮ್ಮ ಪ್ರತಿಭೆಯನ್ನು ರಾಷ್ಟ್ರಮಟ್ಟದಲ್ಲಿ ಮೆರೆದಿದ್ದಾರೆ.

ಗಣಿತ ವಿಷಯದ ಮೇಲೆ ವಿದ್ಯಾರ್ಥಿಗಳ ವಿಶೇಷ ಆಸಕ್ತಿ, ನಿಯಮಿತ ಅಭ್ಯಾಸ ಹಾಗೂ ಉಪನ್ಯಾಸಕರ ಸಮರ್ಪಿತ ಮಾರ್ಗದರ್ಶನ ಈ ಯಶಸ್ಸಿಗೆ ಪ್ರಮುಖ ಕಾರಣವಾಗಿದೆ. ಅಂತರರಾಷ್ಟ್ರೀಯ ಮಟ್ಟದ ಈ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ತೋರಿದ ಸಾಧನೆ ಶಿಕ್ಷಣ ಕ್ಷೇತ್ರದಲ್ಲಿ ಪ್ರಶಂಸೆಗೆ ಪಾತ್ರವಾಗಿದೆ.

ಈ ಸಾಧನೆ ಕುರಿತು ಎಕ್ಸೆಲ್ ಪಿಯು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಬಿ ಮಾತನಾಡಿ ವಿದ್ಯಾರ್ಥಿಗಳ ಪರಿಶ್ರಮ ಮತ್ತು ಉಪನ್ಯಾಸಕರ ನಿಸ್ವಾರ್ಥ ಬೆಂಬಲದಿಂದ ಈ ಸಾಧನೆ ಸಾಧ್ಯವಾಗಿದೆ. ಮುಂದಿನ ಹಂತದಲ್ಲಿಯೂ ವಿದ್ಯಾರ್ಥಿಗಳು ಇನ್ನಷ್ಟು ಉನ್ನತ ಸಾಧನೆ ಮಾಡುವ ವಿಶ್ವಾಸವಿದೆ. ಈ ಯಶಸ್ಸಿಗೆ ಕಾರಣರಾದ ಎಲ್ಲರಿಗೂ ಅಭಿನಂದನೆಗಳು ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲರು ತಮ್ಮ ಪ್ರತಿಕ್ರಿಯೆಯಲ್ಲಿ ವಿದ್ಯಾರ್ಥಿಗಳು ಪಠ್ಯಕ್ರಮದ ಜೊತೆಗೆ ಇಂತಹ ಅಂತರರಾಷ್ಟ್ರೀಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಿ ಸಾಧನೆ ಮಾಡುತ್ತಿರುವುದು ಅತ್ಯಂತ ಹೆಮ್ಮೆಯ ವಿಷಯ. ನಿರಂತರ ತರಬೇತಿ, ಶಿಸ್ತುಬದ್ಧ ಅಧ್ಯಯನ ಮತ್ತು ಉಪನ್ಯಾಸಕರ ಮಾರ್ಗದರ್ಶನವೇ ಈ ಫಲಿತಾಂಶಕ್ಕೆ ಕಾರಣವಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ವಿದ್ಯಾರ್ಥಿಗಳು ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಲಿ ಎಂದು ಶುಭ ಹಾರೈಸಿದರು.

Related posts

ಬಂದಾರು: ಶಿವ ಫ್ರೆಂಡ್ಸ್ ಕುರಾಯ ಖಂಡಿಗ ಆಶ್ರಯದಲ್ಲಿ ವಲಯ ಮಟ್ಟದ ಲೀಗ್ ಮಾದರಿಯ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ, ವಿವಿಧ ಸಾಧಕರಿಗೆ ಸನ್ಮಾನ

Suddi Udaya

ಗುರುವಾಯನಕೆರೆ ಅರಣ್ಯ ವೀಕ್ಷಕ ಗಫೂರ್ ಹೃದಯಾಘಾತದಿಂದ ನಿಧನ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಅನ್ವಿತ್ ತೃತೀಯ ಸ್ಥಾನ

Suddi Udaya

ಪಶುಸಂಗೋಪನೆ ಇಲಾಖೆಯ ನಿವೃತ್ತ ನೌಕರನಿಗೆ ವೈದ್ಯಕೀಯ ಚಿಕಿತ್ಸೆಗೆ ನೆರವು

Suddi Udaya

ವೇಣೂರು ಯುವವಾಹಿನಿ ಘಟಕದಿಂದ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ಹಣ ದ್ವಿಗುಣ ಮಾಡುವುದಾಗಿ ಮೋಸ ಮಾಡಿದ ಪ್ರಕರಣ: ನೊಂದ ಮಹಿಳೆ ವೀಟಾ ಮರೀನಾ ಡಿಸೋಜ ನದಿಗೆ ಹಾರಿ ಆತ್ಮಹತ್ಯೆ

Suddi Udaya
error: Content is protected !!