September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಕ್ಸೆಲ್ ಪಿಯು ಕಾಲೇಜು ವಿದ್ಯಾರ್ಥಿಗಳಿಂದ ಅಂತರರಾಷ್ಟ್ರೀಯ ಗಣಿತ ಒಲಿಂಪಿಯಾಡ್‌ನಲ್ಲಿ ಮಹತ್ವದ ಸಾಧನೆ

ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಂತರರಾಷ್ಟ್ರೀಯ ಗಣಿತ ಒಲಿಂಪಿಯಾಡ್ (International Mathematics Olympiad – IMO) ಪರೀಕ್ಷೆಯಲ್ಲಿ ವಿಶಿಷ್ಟ ಸಾಧನೆ ಮಾಡುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ.

ಇತ್ತೀಚೆಗೆ ಪ್ರಕಟವಾದ IMO ಪರೀಕ್ಷೆಯ ಫಲಿತಾಂಶದಲ್ಲಿ ಎಕ್ಸೆಲ್ ಪಿಯು ಕಾಲೇಜಿನ ಐದು ವಿದ್ಯಾರ್ಥಿಗಳಾದ ಕೈಲಾಶ್ ಎನ್.ಎಸ್, ವರ್ಷಿಣಿ ಟಿ, ವಿಜಯಲಕ್ಷ್ಮೀ ಎಸ್ ಮಡಿವಾಳ, ಸ್ನೇಹ ಮಹತೇಂಶ್, ನಿಶ್ಚಯ್ ಗೌಡ ಎರಡನೇ ಹಂತದ (Level–2) ಪರೀಕ್ಷೆಗೆ ಅರ್ಹತೆ ಪಡೆದುಕೊಂಡಿದ್ದಾರೆ. ಜೊತೆಗೆ 235 ವಿದ್ಯಾರ್ಥಿಗಳು ‘ಗೋಲ್ಡ್ ಮೆಡಲ್ ಆಫ್ ಎಕ್ಸಲೆನ್ಸ್’ ಪ್ರಶಸ್ತಿಯನ್ನು ಪಡೆದು ತಮ್ಮ ಪ್ರತಿಭೆಯನ್ನು ರಾಷ್ಟ್ರಮಟ್ಟದಲ್ಲಿ ಮೆರೆದಿದ್ದಾರೆ.

ಗಣಿತ ವಿಷಯದ ಮೇಲೆ ವಿದ್ಯಾರ್ಥಿಗಳ ವಿಶೇಷ ಆಸಕ್ತಿ, ನಿಯಮಿತ ಅಭ್ಯಾಸ ಹಾಗೂ ಉಪನ್ಯಾಸಕರ ಸಮರ್ಪಿತ ಮಾರ್ಗದರ್ಶನ ಈ ಯಶಸ್ಸಿಗೆ ಪ್ರಮುಖ ಕಾರಣವಾಗಿದೆ. ಅಂತರರಾಷ್ಟ್ರೀಯ ಮಟ್ಟದ ಈ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ತೋರಿದ ಸಾಧನೆ ಶಿಕ್ಷಣ ಕ್ಷೇತ್ರದಲ್ಲಿ ಪ್ರಶಂಸೆಗೆ ಪಾತ್ರವಾಗಿದೆ.

ಈ ಸಾಧನೆ ಕುರಿತು ಎಕ್ಸೆಲ್ ಪಿಯು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಬಿ ಮಾತನಾಡಿ ವಿದ್ಯಾರ್ಥಿಗಳ ಪರಿಶ್ರಮ ಮತ್ತು ಉಪನ್ಯಾಸಕರ ನಿಸ್ವಾರ್ಥ ಬೆಂಬಲದಿಂದ ಈ ಸಾಧನೆ ಸಾಧ್ಯವಾಗಿದೆ. ಮುಂದಿನ ಹಂತದಲ್ಲಿಯೂ ವಿದ್ಯಾರ್ಥಿಗಳು ಇನ್ನಷ್ಟು ಉನ್ನತ ಸಾಧನೆ ಮಾಡುವ ವಿಶ್ವಾಸವಿದೆ. ಈ ಯಶಸ್ಸಿಗೆ ಕಾರಣರಾದ ಎಲ್ಲರಿಗೂ ಅಭಿನಂದನೆಗಳು ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲರು ತಮ್ಮ ಪ್ರತಿಕ್ರಿಯೆಯಲ್ಲಿ ವಿದ್ಯಾರ್ಥಿಗಳು ಪಠ್ಯಕ್ರಮದ ಜೊತೆಗೆ ಇಂತಹ ಅಂತರರಾಷ್ಟ್ರೀಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಿ ಸಾಧನೆ ಮಾಡುತ್ತಿರುವುದು ಅತ್ಯಂತ ಹೆಮ್ಮೆಯ ವಿಷಯ. ನಿರಂತರ ತರಬೇತಿ, ಶಿಸ್ತುಬದ್ಧ ಅಧ್ಯಯನ ಮತ್ತು ಉಪನ್ಯಾಸಕರ ಮಾರ್ಗದರ್ಶನವೇ ಈ ಫಲಿತಾಂಶಕ್ಕೆ ಕಾರಣವಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ವಿದ್ಯಾರ್ಥಿಗಳು ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಲಿ ಎಂದು ಶುಭ ಹಾರೈಸಿದರು.

Related posts

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ಹಾಗೂ ಜೆಸಿಐ ಮಂಜುಶ್ರೀ ಬೆಳ್ತಂಗಡಿ ಇವರ ಸಹಭಾಗಿತ್ವದಲ್ಲಿ ದೇಶಭಕ್ತಿ ಗೀತ ಗಾಯನ ಸ್ಪರ್ಧೆ

Suddi Udaya

ಯಕ್ಷಗಾನ ಕಲಾವಿದರ ಬಗ್ಗೆ ಅವಹೇಳನಕಾರಿ ಹೇಳಿಕೆ: ಮಹೇಶ್ ಶೆಟ್ಟಿ ತಿಮರೋಡಿ ಸೇರಿ ನಾಲ್ಕು ಮಂದಿಯ ವಿರುದ್ಧ ಪ್ರಕರಣ ದಾಖಲು

Suddi Udaya

ಚಿನ್ನಾಭರಣ ಪರೀಕ್ಷಕನ ವಜಾ ಪ್ರಕರಣ; ಪ್ರಕರಣದ ನಿಗೂಢತೆಯ ಬಯಲಿಗೆ ಆಗ್ರಹ; ಮಾ.18ರಂದು ಕೊಕ್ಕಡದಲ್ಲಿ ಪ್ರತಿಭಟನೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ : ರಾತ್ರಿ ಮೂಡಪ್ಪ ಸೇವೆ: ವಿಶೇಷ ಹೂವುಗಳಿಂದ ಅಲಂಕೃತಗೊಂಡ ಸೌತಡ್ಕ ಕ್ಷೇತ್ರ

Suddi Udaya

ಉಜಿರೆ ಎಸ್.ಡಿ.ಯಂ.ಐ.ಟಿಯ ಡಾ.ಸುಬ್ರಹ್ಮಣ್ಯ ಭಟ್ಟರಿಗೆ ಪೇಜಾವರ ಶ್ರೀಗಳಿಂದ ಸನ್ಮಾನ

Suddi Udaya

ಮಲವಂತಿಗೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya
error: Content is protected !!