July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಕ್ಕಡ ಮಂಡಲ ವತಿಯಿಂದ ಹಿಂದೂ ಸಂಗಮ

ಕೊಕ್ಕಡ: ಹಿಂದೂ ಸಂಗಮ ಆಯೋಜನಾ ಕೊಕ್ಕಡ ಮಂಡಲ ವತಿಯಿಂದ ಹಿಂದೂ ಸಂಗಮ ಜ.25 ರಂದು ಕೊಕ್ಕಡದ ಸಂಕ್ರಾಂತಿ ಮೈದಾನದಲ್ಲಿ ನಡೆಯಿತು.

ಕೊಕ್ಕಡ ಮತ್ತು ಪಟ್ರಮೆ ಮಂಡಲ ವತಿಯಿಂದ ನಡೆದ ಹಿಂದೂ ಸಂಗಮ ಕಾರ್ಯಕ್ರಮವು ಕೊಕ್ಕಡದ ಜಂಕ್ಷನ್ ನಿಂದ ಪುಟಾಣಿ ಮಕ್ಕಳ ವಿವಿಧ ವೇಷ ಗಳೊಂದಿಗೆ ಸ್ಥಳೀಯ ಭಜನಾ ತಂಡದಿಂದ ಕುಣಿತಾ ಭಜನೆ ಹಾಗೂ ಮಹಿಳೆಯರಿಂದ ಪೂರ್ಣ ಕುಂಭದೊಂದಿಗೆ ಭವ್ಯ ಶೋಭಾ ಯಾತ್ರೆಯು ನಡೆಯಿತು.

ಕರಿಂಜೆ ಮಠದ ಶ್ರೀ ಮುಕ್ತಾನಂದ ಸ್ವಾಮೀಜಿ ರವರು ಗೋ ಪೂಜೆ ನೆರವೇರಿಸಿ ದೀಪಪ್ರಜ್ವಲಿಸುವ ಮೂಲಕ ಕಾರ್ಯ ಕ್ರಮಕ್ಕೆ ಚಾಲನೆ ನೀಡಿ ಹಿಂದೂ ಸಮಾಜವನ್ನು ಉದ್ದೇಶಿಸಿ ಮಾತನಾಡಿದರು. ಮುಖ್ಯ ವಕ್ತಾರರಾದ ಅಚ್ಚುತ ನಾಯಕ್ ಪುತ್ತೂರು ಮಾತನಾಡಿ ಹಿಂದುತ್ವ ಎಂದರೇನು? ಹಿಂದೂ ಹೇಗಿರಬೇಕು , ಜಾತಿ ಬೇಧ ಮರೆತು ಒಂದಾದಲ್ಲಿ ಮಾತ್ರ ಹಿಂದುತ್ವ ಉಳಿಯಲು ಸಾಧ್ಯ ಎಂದರು. ಸಭಾ ಅಧ್ಯಕ್ಷತೆಯನ್ನು ವಹಿಸಿದ ಡಾ. ತಾರಾಗಣೇಶ್ ಮಾತನಾಡಿದರು.

ವೇದಿಕೆಯಲ್ಲಿ ಉದ್ಯಮಿ ಬಾಲಕೃಷ್ಣ ನೈಮಿಷ ಕೊಕ್ಕಡ , ರುಕ್ಮಯ ಮಡಿವಾಳ ಕೊಕ್ಕಡ ಉಪಸ್ಥಿತರಿದ್ದರು.

ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಹಲವು ಗಣ್ಯರನ್ನು ಸನ್ಮಾನಿಸಲಾಯಿತು. ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು,

ರುಕ್ಮಯ ಮಡಿವಾಳ ಸ್ವಾಗತಿಸಿ, ಅಶ್ವಿನಿ ಓಣಿತಾರು ಧನ್ಯವಾದವಿತ್ತರು.

Related posts

ಆರಂಬೋಡಿ ಸ.ಉ.ಪ್ರಾ. ಶಾಲೆಗೆ ಕೊಡುಗೆ ನೀಡಿದ ದಾನಿಗಳಿಗೆ ಅಭಿನಂದನೆ ಸಭೆ

Suddi Udaya

ಮೈರೋಳ್ತಡ್ಕ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮರದ ಕೊಂಬೆ ತೆರವು ಹಾಗೂ ಗಿಡ ಗಂಟಿಗಳ ತೆರವು ಕಾರ್ಯ

Suddi Udaya

ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನ : ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಹೆಗ್ಗಡೆಯವರಿಂದ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆ: ಸಂಪ್ರಿತ ಜೈನ್ ಅಂಡಿಂಜೆ ಅತ್ಯುನ್ನತ್ತ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಸವಣಾಲು: ಪದ್ಮನಾಭ ಶೆಟ್ಟಿ ನಿಧನ

Suddi Udaya

ಕೊಕ್ಕಡ ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.66 ಫಲಿತಾಂಶ

Suddi Udaya
error: Content is protected !!