ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಕ್ಕಡ ಮಂಡಲ ವತಿಯಿಂದ ಹಿಂದೂ ಸಂಗಮ

ಕೊಕ್ಕಡ: ಹಿಂದೂ ಸಂಗಮ ಆಯೋಜನಾ ಕೊಕ್ಕಡ ಮಂಡಲ ವತಿಯಿಂದ ಹಿಂದೂ ಸಂಗಮ ಜ.25 ರಂದು ಕೊಕ್ಕಡದ ಸಂಕ್ರಾಂತಿ ಮೈದಾನದಲ್ಲಿ ನಡೆಯಿತು.

ಕೊಕ್ಕಡ ಮತ್ತು ಪಟ್ರಮೆ ಮಂಡಲ ವತಿಯಿಂದ ನಡೆದ ಹಿಂದೂ ಸಂಗಮ ಕಾರ್ಯಕ್ರಮವು ಕೊಕ್ಕಡದ ಜಂಕ್ಷನ್ ನಿಂದ ಪುಟಾಣಿ ಮಕ್ಕಳ ವಿವಿಧ ವೇಷ ಗಳೊಂದಿಗೆ ಸ್ಥಳೀಯ ಭಜನಾ ತಂಡದಿಂದ ಕುಣಿತಾ ಭಜನೆ ಹಾಗೂ ಮಹಿಳೆಯರಿಂದ ಪೂರ್ಣ ಕುಂಭದೊಂದಿಗೆ ಭವ್ಯ ಶೋಭಾ ಯಾತ್ರೆಯು ನಡೆಯಿತು.

ಕರಿಂಜೆ ಮಠದ ಶ್ರೀ ಮುಕ್ತಾನಂದ ಸ್ವಾಮೀಜಿ ರವರು ಗೋ ಪೂಜೆ ನೆರವೇರಿಸಿ ದೀಪಪ್ರಜ್ವಲಿಸುವ ಮೂಲಕ ಕಾರ್ಯ ಕ್ರಮಕ್ಕೆ ಚಾಲನೆ ನೀಡಿ ಹಿಂದೂ ಸಮಾಜವನ್ನು ಉದ್ದೇಶಿಸಿ ಮಾತನಾಡಿದರು. ಮುಖ್ಯ ವಕ್ತಾರರಾದ ಅಚ್ಚುತ ನಾಯಕ್ ಪುತ್ತೂರು ಮಾತನಾಡಿ ಹಿಂದುತ್ವ ಎಂದರೇನು? ಹಿಂದೂ ಹೇಗಿರಬೇಕು , ಜಾತಿ ಬೇಧ ಮರೆತು ಒಂದಾದಲ್ಲಿ ಮಾತ್ರ ಹಿಂದುತ್ವ ಉಳಿಯಲು ಸಾಧ್ಯ ಎಂದರು. ಸಭಾ ಅಧ್ಯಕ್ಷತೆಯನ್ನು ವಹಿಸಿದ ಡಾ. ತಾರಾಗಣೇಶ್ ಮಾತನಾಡಿದರು.

ವೇದಿಕೆಯಲ್ಲಿ ಉದ್ಯಮಿ ಬಾಲಕೃಷ್ಣ ನೈಮಿಷ ಕೊಕ್ಕಡ , ರುಕ್ಮಯ ಮಡಿವಾಳ ಕೊಕ್ಕಡ ಉಪಸ್ಥಿತರಿದ್ದರು.

ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಹಲವು ಗಣ್ಯರನ್ನು ಸನ್ಮಾನಿಸಲಾಯಿತು. ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು,

ರುಕ್ಮಯ ಮಡಿವಾಳ ಸ್ವಾಗತಿಸಿ, ಅಶ್ವಿನಿ ಓಣಿತಾರು ಧನ್ಯವಾದವಿತ್ತರು.

Related posts

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ಸಂಸ್ಥೆ ವತಿಯಿಂದ ಮುಂಡೂರು ಸ.ಕಿ.ಪ್ರಾ. ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಉತ್ಸವ ಹಾಗೂ ಜಾತ್ರಾ ಮಹೋತ್ಸವ ಸಂಪನ್ನ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಕೇಂದ್ರದ ವತಿಯಿಂದ “ಪೌಷ್ಟಿಕ ಆಹಾರ & ಆರೋಗ್ಯ ” ಕಾರ್ಯಕ್ರಮ

Suddi Udaya

ತೆಂಕಕಾರಾಂದೂರು ಗ್ರಾಮದಲ್ಲೊಂದು ಕೇಳುವವರಿಲ್ಲದ ಅಂಬೇಡ್ಕರ್ ಭವನ: ಗಾಳಿ ಮಳೆಗೆ ಮೇಲ್ಛಾವಣಿ ಕುಸಿದರು ಗಮನಿಸಿದ ಸಂಬಂಧಪಟ್ಟ ಇಲಾಖೆ: ನೂತನ ಅಂಬೇಡ್ಕರ್ ಭವನ ನಿರ್ಮಿಸಿ ಅಥವಾ ದುರಸ್ತಿಗೊಳಿಸುವಂತೆ ಅಶ್ರಫ್ ಕಟ್ಟೆಯವರಿಂದ ಮನವಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಚಂಡಿಕಾಯಾಗ-ಸತ್ಯದರ್ಶನ ಸಮಾವೇಶ: ಬೆಳ್ತಂಗಡಿ ತಾಲೂಕಿನಾದ್ಯಂತದಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಭಾಗಿ

Suddi Udaya

ಮರೋಡಿ: ಶಿವಪ್ಪ ಪೂಜಾರಿ ನಿಧನ

Suddi Udaya
error: Content is protected !!