22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ

ಧರ್ಮಸ್ಥಳ ಅರಿವು ಕೇಂದ್ರ ಗ್ರಾಮ ಪಂಚಾಯತ್ ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಓದುವ ಬೆಳಕು ಕಾರ್ಯಕ್ರಮದಡಿ ” ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ”ಯನ್ನು ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿಮಲಾ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.

ಹೆಣ್ಣು ಮಕ್ಕಳ ಶುಚಿತ್ವ, ಆರೋಗ್ಯ ಇಲಾಖೆಯ ಸೌಲಭ್ಯಗಳು, ಹೆಣ್ಣು ಮಕ್ಕಳಲ್ಲಿನ ಆರೋಗ್ಯ ಸಮಸ್ಯೆ ಹಾಗೂ ಪರಿಹಾರದ ಬಗ್ಗೆ ಆರೋಗ್ಯ ಇಲಾಖೆಯ ಹಿರಿಯ ಸಹಾಯಕಿ ಶ್ರೀಮತಿ ವಿಜಯಲಕ್ಷ್ಮೀ ಇವರು ಸವಿವರವಾದ ಮಾಹಿತಿಯನ್ನು ನೀಡಿದರು. ಪೊಲೀಸ್ ಇಲಾಖೆಯಿಂದ ಪ್ರಮೋದಿನಿಯವರು, ಮಕ್ಕಳ ಹಕ್ಕುಗಳ ಬಗ್ಗೆ ಸಹಾಯವಾಣಿ ಹಾಗೂ ಪೋಕ್ಸೋ ಕಾಯ್ದೆ ಹೆಣ್ಣು ಮಕ್ಕಳಿಗಾಗುವ ಸಮಸ್ಯೆಗಳ ಬಗ್ಗೆ ತಿಳಿಸಿದರು.

ಕು. ದೀಪ ಜೊತೆಗಿದ್ದು ಸಹಕರಿಸಿದರು. ಗ್ರಂಥಾಲಯ ಮೇಲ್ವಿಚಾರಕಿ ಮಂಜುಳಾ ಸ್ವಾಗತಿಸಿದರೆ, ಶಿಕ್ಷಕಿ ಶ್ರೀಮತಿ ತ್ರಿವೇಣಿ ಧನ್ಯವಾದವಿತ್ತರು. ಕಾರ್ಯಕ್ರಮದಲ್ಲಿ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯ 76 ವಿದ್ಯಾರ್ಥಿನಿಯರು ಹಾಗೂ ಶಿಕ್ಷಕಿಯರಾದ ಶ್ರೀಮತಿ ತ್ರಿವೇಣಿ , ಕು.ಶ್ವೇತಾ ಶ್ರೀಮತಿ ವಿಶಾಲಾಕ್ಷಿಯವರು ಪಾಲ್ಗೊಂಡು ಸಂತಸ ವ್ಯಕ್ತಪಡಿಸಿದರು.

Related posts

ಹೈಕೋರ್ಟ್ ವಕೀಲ ನಾರಾಯಣ ಸ್ವಾಮಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಭೇಟಿ

Suddi Udaya

ಸಿರಿ ಸಂಸ್ಥೆಯ 2024ನೇ ವ‍‍‍‍‍‍‍‍‍‍‍‍‍‍‍‍‍‍ರ್ಷದ ಕ್ಯಾಲೆಂಡರ್ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಜನಸ್ಪಂದನ ಸಭೆಯ ಫಲಶ್ರುತಿ 108 ಹಕ್ಕು ಪತ್ರ, 54 ಮಂದಿಗೆ ನಡಾವಳಿ ವಿತರಣೆ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಶ್ರೀ ಕೃಷ್ಣ ಜಯಂತಿ ಆಚರಣೆ

Suddi Udaya

ಧರ್ಮಸ್ಥಳದಲ್ಲಿ25ನೇ ವರ್ಷದ ಭಜನಾ ತರಬೇತಿ ಕಮ್ಮಟ: ಮಂಡ್ಯ ಜಿಲ್ಲೆಯ ಆರತಿಪುರದ ಸಿದ್ಧಾಂತಕೀರ್ತಿ ಸ್ವಾಮೀಜಿಯವರಿಂದ ಉದ್ಘಾಟನೆ: ಧಮ೯ಸ್ಥಳದ ಧಮಾ೯ಧಿಕಾರಿ ಡಾ.ಹೆಗ್ಗಡೆ, ಮಣಿಲಶ್ರೀ ಉಪಸ್ಥಿತಿ: 115 ಭಜನಾ ಮಂಡಳಿಗಳ 202 ಮಂದಿ ಶಿಬಿರಾಥಿ೯ಗಳು ಭಾಗಿ

Suddi Udaya

ದೇವನಗುಲ್‌ ಚಾರ್ಮಾಡಿ ಅಡ್ಡ ರಸ್ತೆಗೆ ಗೇಟ್‌ – ಅಕ್ರಮ ಚಟುವಟಿಕೆಗಳಿಗೆ ಕಡಿವಾಣ

Suddi Udaya
error: Content is protected !!