25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ: ಸಿಸಿ ಕ್ಯಾಮರದಲ್ಲಿ ದೃಶ್ಯ ಸೆರೆ

ಬೆಳ್ತಂಗಡಿ : ಕಾಡಿನಿಂದ ನಾಡಿಗೆ ಬಂದು ನಡ ಪರಿಸರದ ಸಾರ್ವಜನಿಕರಿಗೆ ಭಯ ಪಡಿಸುತ್ತಿದ್ದ ಚಿರತೆಯನ್ನು ಬೆಳ್ತಂಗಡಿ ಅರಣ್ಯ ಇಲಾಖೆ ಬೋನಿಗೆ ಬೀಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಳ್ತಂಗಡಿ ತಾಲೂಕಿನ ಕನ್ಯಾಡಿ -1 ಗ್ರಾಮದಲ್ಲಿ ಹಲವು ದಿನಗಳಿಂದ ಸಾರ್ವಜನಿಕರಿಗೆ ಭೀತಿ ಹುಟ್ಟಿಸುತ್ತಿದ್ದ ಚಿರತೆಗಳಲ್ಲಿ ಒಂದು ಚಿರತೆಯನ್ನು ಜ.26 ರಂದು ಬೆಳಗ್ಗಿನ ಜಾವ 1:20 ರ ಸುಮಾರಿಗೆ ಬೋನು ಇಟ್ಟು ಸೆರೆ ಹಿಡಿಯುವಲ್ಲಿ ಬೆಳ್ತಂಗಡಿ ವಲಯ ಅರಣ್ಯ ಇಲಾಖೆ ಯಶಸ್ವಿಯಾಗಿದೆ.

ಕನ್ಯಾಡಿಯ ಮಂಜಪ್ಪ ನಾಯ್ಕ ಎಂಬವರಿಗೆ ಜ.16 ರಂದು ಬೆಳಗ್ಗೆ ಚಿರತೆ ದಾಳಿ ಮಾಡಿ ಕಾಲಿಗೆ ಗಾಯಗೊಳಿಸಿತ್ತು. ಬಳಿಕ ಚಿರತೆ ಬೇಟೆಗಾಗಿ ಅರಣ್ಯ ಇಲಾಖೆ ಬೇರೆ ಬೇರೆ ಸಾರ್ವಜನಿಕರ ಮನವಿಯ ಮೇರೆಗೆ ಇಡಲಾಗಿತ್ತು. ಜ‌.25 ರಂದು ಕನ್ಯಾಡಿಯ ಮಂಜಪ್ಪ ನಾಯ್ಕ ಎಂಬವರ ಮನೆಯ ಪಕ್ಕದಲ್ಲಿ ಬೋನು ಇಟ್ಟು ಅದರೊಳಗೆ ಕೋಳಿಯನ್ನು ಕಟ್ಟಿ ಹಾಕಲಾಗಿತ್ತು. ಈ ಚಿರತೆ ಬೋನಿನ ಒಳಗಡೆ ಹೋಗಿ ವಾಪಸ್ ತಿರುಗುವ ವೇಳೆ ಲಾಕ್ ಅಗಿದೆ. ಚಿರತೆ ಬೋನಿನ ಒಳಗಡೆ ಕೋಳಿಯನ್ನು ಹಿಡಿಯಲು ಹೋಗಿ ಸಿಕ್ಕಿಬಿದ್ದು ಹೊರ ಬರಲು ಒದ್ದಾಡುವ ದೃಶ್ಯ ಅರಣ್ಯ ಇಲಾಖೆ ಇಟ್ಟ ಸಿಸಿಕ್ಯಾಮರದಲ್ಲಿ ಸೆರೆಯಾಗಿದೆ.

ಬೋನಿಗೆ ಬಿದ್ದ ಚಿರತೆಯನ್ನು ಬೆಳ್ತಂಗಡಿ ಅರಣ್ಯಾಧಿಕಾರಿ ತ್ಯಾಗರಾಜ್ ನೇತೃತ್ವದ ತಂಡದ ಸಿಬ್ಬಂದಿ ಸುರಕ್ಷಿತವಾಗಿ ಯಾವುದೇ ತೊಂದರೆಯಾಗದಂತೆ ಕಾಡಿಗೆ ತೆಗೆದುಕೊಂಡು ಹೋಗಿ ಬಿಡಲಾಗುತ್ತದೆ ಎಂದು ಅರಣ್ಯ ಇಲಾಖೆಯವರು ತಿಳಿಸಿದ್ದಾರೆ‌.

Related posts

ಶಿಶಿಲ: ದೇನೋಡಿ ನಿವಾಸಿ ನಾಣ್ಯಪ್ಪ ಪೂಜಾರಿ ನಿಧನ

Suddi Udaya

ಮೇಲಂತಬೆಟ್ಟು: ಕೃಷಿಕ ಯುವಕ ಮಂಡಲದ ಆಶ್ರಯದಲ್ಲಿ ಕೇಸರ್ ದ ಕಂಡಡ್ ಒಂಜಿ ದಿನ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೀರೆ ವಿತರಣೆ

Suddi Udaya

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ. ಅ. ಪ್ರೌಢಶಾಲೆಯ ವಿದ್ಯಾರ್ಥಿ ಜಾಹ್ನವಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಉಜಿರೆ: ತಾಲೂಕು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಾಮೂಹಿಕ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!