July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ: ಸಿಸಿ ಕ್ಯಾಮರದಲ್ಲಿ ದೃಶ್ಯ ಸೆರೆ

ಬೆಳ್ತಂಗಡಿ : ಕಾಡಿನಿಂದ ನಾಡಿಗೆ ಬಂದು ನಡ ಪರಿಸರದ ಸಾರ್ವಜನಿಕರಿಗೆ ಭಯ ಪಡಿಸುತ್ತಿದ್ದ ಚಿರತೆಯನ್ನು ಬೆಳ್ತಂಗಡಿ ಅರಣ್ಯ ಇಲಾಖೆ ಬೋನಿಗೆ ಬೀಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಳ್ತಂಗಡಿ ತಾಲೂಕಿನ ಕನ್ಯಾಡಿ -1 ಗ್ರಾಮದಲ್ಲಿ ಹಲವು ದಿನಗಳಿಂದ ಸಾರ್ವಜನಿಕರಿಗೆ ಭೀತಿ ಹುಟ್ಟಿಸುತ್ತಿದ್ದ ಚಿರತೆಗಳಲ್ಲಿ ಒಂದು ಚಿರತೆಯನ್ನು ಜ.26 ರಂದು ಬೆಳಗ್ಗಿನ ಜಾವ 1:20 ರ ಸುಮಾರಿಗೆ ಬೋನು ಇಟ್ಟು ಸೆರೆ ಹಿಡಿಯುವಲ್ಲಿ ಬೆಳ್ತಂಗಡಿ ವಲಯ ಅರಣ್ಯ ಇಲಾಖೆ ಯಶಸ್ವಿಯಾಗಿದೆ.

ಕನ್ಯಾಡಿಯ ಮಂಜಪ್ಪ ನಾಯ್ಕ ಎಂಬವರಿಗೆ ಜ.16 ರಂದು ಬೆಳಗ್ಗೆ ಚಿರತೆ ದಾಳಿ ಮಾಡಿ ಕಾಲಿಗೆ ಗಾಯಗೊಳಿಸಿತ್ತು. ಬಳಿಕ ಚಿರತೆ ಬೇಟೆಗಾಗಿ ಅರಣ್ಯ ಇಲಾಖೆ ಬೇರೆ ಬೇರೆ ಸಾರ್ವಜನಿಕರ ಮನವಿಯ ಮೇರೆಗೆ ಇಡಲಾಗಿತ್ತು. ಜ‌.25 ರಂದು ಕನ್ಯಾಡಿಯ ಮಂಜಪ್ಪ ನಾಯ್ಕ ಎಂಬವರ ಮನೆಯ ಪಕ್ಕದಲ್ಲಿ ಬೋನು ಇಟ್ಟು ಅದರೊಳಗೆ ಕೋಳಿಯನ್ನು ಕಟ್ಟಿ ಹಾಕಲಾಗಿತ್ತು. ಈ ಚಿರತೆ ಬೋನಿನ ಒಳಗಡೆ ಹೋಗಿ ವಾಪಸ್ ತಿರುಗುವ ವೇಳೆ ಲಾಕ್ ಅಗಿದೆ. ಚಿರತೆ ಬೋನಿನ ಒಳಗಡೆ ಕೋಳಿಯನ್ನು ಹಿಡಿಯಲು ಹೋಗಿ ಸಿಕ್ಕಿಬಿದ್ದು ಹೊರ ಬರಲು ಒದ್ದಾಡುವ ದೃಶ್ಯ ಅರಣ್ಯ ಇಲಾಖೆ ಇಟ್ಟ ಸಿಸಿಕ್ಯಾಮರದಲ್ಲಿ ಸೆರೆಯಾಗಿದೆ.

ಬೋನಿಗೆ ಬಿದ್ದ ಚಿರತೆಯನ್ನು ಬೆಳ್ತಂಗಡಿ ಅರಣ್ಯಾಧಿಕಾರಿ ತ್ಯಾಗರಾಜ್ ನೇತೃತ್ವದ ತಂಡದ ಸಿಬ್ಬಂದಿ ಸುರಕ್ಷಿತವಾಗಿ ಯಾವುದೇ ತೊಂದರೆಯಾಗದಂತೆ ಕಾಡಿಗೆ ತೆಗೆದುಕೊಂಡು ಹೋಗಿ ಬಿಡಲಾಗುತ್ತದೆ ಎಂದು ಅರಣ್ಯ ಇಲಾಖೆಯವರು ತಿಳಿಸಿದ್ದಾರೆ‌.

Related posts

ಬೆಳ್ತಂಗಡಿ ತಾಲೂಕು ಕಚೇರಿಗೆ ಶಾಸಕ ಹರೀಶ್ ಪೂಂಜ ದಿಢೀರ್ ಭೇಟಿ

Suddi Udaya

ಬೆಳ್ತಂಗಡಿ ಧರ್ಮಾಧ್ಯಕ್ಷ ಲಾರೆನ್ಸ್ ಮುಕ್ಕುಝೀ ಯವರನ್ನು ಮಾಜಿ ಸಚಿವ ಮತ್ತು ಕೆಪಿಸಿಸಿ ಉಪಾಧ್ಯಕ್ಷರು ಗಂಗಾಧರ ಗೌಡ ಭೇಟಿ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವ: ಬೆಳ್ತಂಗಡಿಯಲ್ಲಿ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಡಾ. ರವಿ ಕಕ್ಕೆಪದವು ಅವರಿಗೆ ಸೀನಿಯರ್ ಚೇಂಬರ್ ನಿಕಟ ಪೂರ್ವ ರಾಷ್ಟ್ರ ಅಧ್ಯಕ್ಷರ ಎಕ್ಸಲೆನ್ಸ್ ಅವಾರ್ಡ್

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ವಿಜೃಂಭಣೆಯ ಸ್ವಾತ್ರಂತ್ರ್ಯೋತ್ಸವ ಆಚರಣೆ

Suddi Udaya

ಶ್ರೀ ರಾಮ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ರವರ 17ನೇ ವಷ೯ದ ಪಟ್ಟಾಭಿಷೇಕ ವರ್ಧಂತಿ

Suddi Udaya
error: Content is protected !!