September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ: ಸಿಸಿ ಕ್ಯಾಮರದಲ್ಲಿ ದೃಶ್ಯ ಸೆರೆ

ಬೆಳ್ತಂಗಡಿ : ಕಾಡಿನಿಂದ ನಾಡಿಗೆ ಬಂದು ನಡ ಪರಿಸರದ ಸಾರ್ವಜನಿಕರಿಗೆ ಭಯ ಪಡಿಸುತ್ತಿದ್ದ ಚಿರತೆಯನ್ನು ಬೆಳ್ತಂಗಡಿ ಅರಣ್ಯ ಇಲಾಖೆ ಬೋನಿಗೆ ಬೀಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಳ್ತಂಗಡಿ ತಾಲೂಕಿನ ಕನ್ಯಾಡಿ -1 ಗ್ರಾಮದಲ್ಲಿ ಹಲವು ದಿನಗಳಿಂದ ಸಾರ್ವಜನಿಕರಿಗೆ ಭೀತಿ ಹುಟ್ಟಿಸುತ್ತಿದ್ದ ಚಿರತೆಗಳಲ್ಲಿ ಒಂದು ಚಿರತೆಯನ್ನು ಜ.26 ರಂದು ಬೆಳಗ್ಗಿನ ಜಾವ 1:20 ರ ಸುಮಾರಿಗೆ ಬೋನು ಇಟ್ಟು ಸೆರೆ ಹಿಡಿಯುವಲ್ಲಿ ಬೆಳ್ತಂಗಡಿ ವಲಯ ಅರಣ್ಯ ಇಲಾಖೆ ಯಶಸ್ವಿಯಾಗಿದೆ.

ಕನ್ಯಾಡಿಯ ಮಂಜಪ್ಪ ನಾಯ್ಕ ಎಂಬವರಿಗೆ ಜ.16 ರಂದು ಬೆಳಗ್ಗೆ ಚಿರತೆ ದಾಳಿ ಮಾಡಿ ಕಾಲಿಗೆ ಗಾಯಗೊಳಿಸಿತ್ತು. ಬಳಿಕ ಚಿರತೆ ಬೇಟೆಗಾಗಿ ಅರಣ್ಯ ಇಲಾಖೆ ಬೇರೆ ಬೇರೆ ಸಾರ್ವಜನಿಕರ ಮನವಿಯ ಮೇರೆಗೆ ಇಡಲಾಗಿತ್ತು. ಜ‌.25 ರಂದು ಕನ್ಯಾಡಿಯ ಮಂಜಪ್ಪ ನಾಯ್ಕ ಎಂಬವರ ಮನೆಯ ಪಕ್ಕದಲ್ಲಿ ಬೋನು ಇಟ್ಟು ಅದರೊಳಗೆ ಕೋಳಿಯನ್ನು ಕಟ್ಟಿ ಹಾಕಲಾಗಿತ್ತು. ಈ ಚಿರತೆ ಬೋನಿನ ಒಳಗಡೆ ಹೋಗಿ ವಾಪಸ್ ತಿರುಗುವ ವೇಳೆ ಲಾಕ್ ಅಗಿದೆ. ಚಿರತೆ ಬೋನಿನ ಒಳಗಡೆ ಕೋಳಿಯನ್ನು ಹಿಡಿಯಲು ಹೋಗಿ ಸಿಕ್ಕಿಬಿದ್ದು ಹೊರ ಬರಲು ಒದ್ದಾಡುವ ದೃಶ್ಯ ಅರಣ್ಯ ಇಲಾಖೆ ಇಟ್ಟ ಸಿಸಿಕ್ಯಾಮರದಲ್ಲಿ ಸೆರೆಯಾಗಿದೆ.

ಬೋನಿಗೆ ಬಿದ್ದ ಚಿರತೆಯನ್ನು ಬೆಳ್ತಂಗಡಿ ಅರಣ್ಯಾಧಿಕಾರಿ ತ್ಯಾಗರಾಜ್ ನೇತೃತ್ವದ ತಂಡದ ಸಿಬ್ಬಂದಿ ಸುರಕ್ಷಿತವಾಗಿ ಯಾವುದೇ ತೊಂದರೆಯಾಗದಂತೆ ಕಾಡಿಗೆ ತೆಗೆದುಕೊಂಡು ಹೋಗಿ ಬಿಡಲಾಗುತ್ತದೆ ಎಂದು ಅರಣ್ಯ ಇಲಾಖೆಯವರು ತಿಳಿಸಿದ್ದಾರೆ‌.

Related posts

ಅ.3-12 : ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ನವರಾತ್ರಿ ವಿಶೇಷ ಪೂಜೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದಿಂದ ಡಾ| ಡಿ ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕದ ವರ್ಧಂತ್ಯುತ್ಸವ ಪ್ರಯುಕ್ತ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ವಲಯದ ಭಜನಾ ಮಂಡಳಿಗಳ ವಲಯ ಸಭೆ

Suddi Udaya

ಕಾಯರ್ತಡ್ಕ ಸರಕಾರಿ ಪ್ರೌಢಶಾಲೆಗೆ ಕ್ಯಾನ್ ಫಿನ್ ಹೋಂಮ್ಸ್ ವತಿಯಿಂದ ಕೊಡುಗೆ

Suddi Udaya

ಯಕ್ಷಗಾನ ಕಲಾವಿದ ರಮೇಶ್ ಶೆಟ್ಟಿ ಪೆರಿಂಜೆ ಅವರಿಗೆ ಸಿದ್ದಕಟ್ಟೆ ಯಕ್ಷ ಮಿತ್ರ ಪ್ರಶಸ್ತಿ ಪ್ರದಾನ

Suddi Udaya

ಉಜಿರೆ: ರೋವರ್ಸ್‌ ಮತ್ತು ರೇಂಜರ್ಸ್‌ ದಳದಿಂದ ಒಂದು ದಿನದ ಪುನಃಶ್ಚೇತನ ತರಬೇತಿ ಶಿಬಿರ

Suddi Udaya
error: Content is protected !!