30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಡ ಮೂಡಾಯಿಬೆಟ್ಟು ಹಂದಿ ಸಾಕಾಣಾ ಕೇಂದ್ರದಿಂದ ಹಂದಿಯನ್ನು ಎಳೆದೊಯ್ದ ಚಿರತೆ

ನಡ: ಇಲ್ಲಿಯ ನಡ ಗ್ರಾಮದ ಮೂಡಾಯಿಬೆಟ್ಟು ಎಂಬಲ್ಲಿ ಹಂದಿ ಸಾಕುವ ಶೆಡ್‌ನಿಂದ ಹಂದಿಯೊಂದನ್ನು ಚಿರತೆ ಎಳೆದೊಯ್ದ ಘಟನೆ ನಿನ್ನೆ ರಾತ್ರಿ ನಡೆದಿದೆ ಎಂದು ಸ್ಥಳೀಯರಾದ ಶ್ಯಾಮಸುಂದರ್ ನಡ ಮಾಹಿತಿ ನೀಡಿದ್ದಾರೆ.

ನಡ ಗ್ರಾಮದ ಮೂಡಾಯಿಬೆಟ್ಟು ನಿವಾಸಿ ವಿನ್ಸೆಂಟ್ ಎಂಬವರು ಹಂದಿ ಸಾಕಾಣೆ ಮಾಡುತ್ತಿದ್ದು, ಇಂದು ಬೆಳಿಗ್ಗೆ ಹಂದಿ ಸಾಕಾಣೆ ಮಾಡುವ ಶೆಡ್‌ನ ಬಳಿ ರಕ್ತದ ಕಲೆಗಳು ಕಂಡು ಬಂದಿದ್ದು, ಇವರ ಸಾಕುತ್ತಿದ್ದ ಹಂದಿಗಳಲ್ಲಿ ಒಂದು ಹಂದಿ ನಾಪತ್ತೆಯಾಗಿರುವುದು ಕಂಡು ಬಂದಿದೆ. ಶೆಡ್‌ಗೆ ನುಗ್ಗಿದ ಚಿರತೆ ಹಂದಿಯನ್ನು ಕಾಡಿಗೆ ಎಳೆದೊಯ್ದಿರಬಹುದೆಂದು ಸಂಶಯಿಸಲಾಗಿದೆ. ಮೂಡಾಯಿಬೆಟ್ಟು ಪರಿಸರದ ಕಾಡಿನಲ್ಲಿ ಚಿರತೆ ಓಡಾಟವಿದೆ ಎಂದು ಸ್ಥಳೀಯರಾದ ಶ್ಯಾಮ್‌ಸುಂದರ್ ನಡ ತಿಳಿಸಿದ್ದಾರೆ. ಸಮೀಪದಲ್ಲೆ ಸರಕಾರಿ ಶಾಲೆಯೊಂದಿದ್ದು, ಸ್ಥಳೀಯರಲ್ಲಿ ಆಂತಕ ಎದುರಾಗಿದೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪತ್ತನಾಜೆ: ವಿಶೇಷ ಸೇವೆ, ಉತ್ಸವಗಳಿಗೆ ತೆರೆ 

Suddi Udaya

ಜ.27,30: ಕೊಕ್ಕಡ ಮಾಯಿಲಕೋಟೆ ಸೀಮೆ ಕ್ಷೇತ್ರದಲ್ಲಿ ನಾಗಪ್ರತಿಷ್ಠೆ ಮತ್ತು ವಾರ್ಷಿಕ ನೇಮೋತ್ಸವ

Suddi Udaya

ಶ್ರೀರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಆಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರತಿಷ್ಠಾ ಮಹೋತ್ಸವ ಆಮಂತ್ರಣ ಹಾಗೂ ಮನೆ ಮನೆಗೆ ಮಂತ್ರಾಕ್ಷತೆ

Suddi Udaya

ನಾರಾವಿ: ಶ್ರೀಮತಿ ಯಮುನಾ ಬಾಂದೋಟ್ಟು ನಿಧನ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಗುರುವಾಯನಕೆರೆ-ಉಜಿರೆ ನ್ಯೂ ಸಿಟಿ ಎಲೆಕ್ಟ್ರಾನಿಕ್ಸ್‌ನಲ್ಲಿ ದೀಪಾವಳಿ ಪ್ರಯುಕ್ತ ಶೇ.40 ರಷ್ಟು ಡಿಸ್ಕೌಂಟ್ ಸೇಲ್

Suddi Udaya
error: Content is protected !!