23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

ಮಚ್ಚಿನ: ಇಲ್ಲಿಯ ಸರ್ಕಾರಿ ಪ್ರೌಢಶಾಲೆಯಲ್ಲಿ 77ನೇ ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಎಸ್ ಡಿ ಎಮ್ ಸಿ ಕಾರ್ಯಾಧ್ಯಕ್ಷ ರುಕ್ಮಯ ಬಾಳಿಂಜರವರು ಧ್ವಜಾರೋಹಣ ನೆರವೇರಿಸಿದರು. ವಿದ್ಯಾರ್ಥಿಗಳು ಚಿತ್ರಿಸಿರುವ ಪ್ರಜಾಪ್ರಭುತ್ವದ ದೇಗುಲ ಸಂಸತ್ ಭವನದ ಮುಂದೆ ಕನ್ನಡ ಮತ್ತು ಆಂಗ್ಲ ಭಾಷೆ ಎರಡರಲ್ಲೂ ಕಂಠಪಾಠವಾಗಿರುವ ಸಂವಿಧಾನದ ಪೀಠಿಕೆಯನ್ನು ಸಾಮೂಹಿಕವಾಗಿ ಓದಿದರು.

ಈ ಸಂಸತ್ತು ಭವನವನ್ನು ಶಿಕ್ಷಕರ ಮಾರ್ಗದರ್ಶನದೊಂದಿಗೆ 9ನೇ ತರಗತಿಯ ವಿದ್ಯಾರ್ಥಿಗಳು ಸಗಣಿ, ಸುಣ್ಣ, ಜಂಬಿಟ್ಟಿಗೆ ಮಣ್ಣಿನ ಪುಡಿ, ಕೆಂಪು ಮಣ್ಣು, ಮರಳು, ಸಣ್ಣ ಕಲ್ಲು, ರಂಗೋಲಿ ಪುಡಿ ಬಳಸಿ ಚಿತ್ರಿಸಿದರು. ಸಭಾ ಕಾರ್ಯಕ್ರಮದಲ್ಲಿ 2024-25 ನೇ ಸಾಲಿನಲ್ಲಿ ಅತ್ಯುನ್ನತ ಶ್ರೇಣಿ ಪಡೆದ ಮಕ್ಕಳಿಗೆ ದಾನಿ ಶ್ರೀಧರ ಭಟ್ ರವರು ನಗದು ನೀಡಿ ಪ್ರೋತ್ಸಾಹಿಸಿದರು. ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳನ್ನು ವಿಷಯ ಶಿಕ್ಷಕರು ಸನ್ಮಾನಿಸಿದರು. ಅದೇ ರೀತಿ ಕ್ರೀಡೆ, ಹಾಜರಾತಿ, ಕಲಿಕೆ, ಕ್ರಿಯಾಶೀಲತೆ ಇತ್ಯಾದಿ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಶಿಕ್ಷಕರಾದ ಸುಭಾಶ್ಚಂದ್ರ ಪೂಜಾರಿ, ಲೀನಾಸೆರಾವೋ, ದುರ್ಗಾಪ್ರಸಾದ್, ಚಂದಪ್ಪ ಪೂಜಾರಿ, ಅವಿನಾಶ, ಕಚೇರಿ ಸಿಬ್ಬಂದಿ ತೇಜಸ್ವಿ ಮತ್ತು ಎಸ್.ಡಿ,ಎಮ್.ಸಿ ಸದಸ್ಯರು, ಪೋಷಕರು, ಹಿರಿಯ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಸಮಾಜ ವಿಜ್ಞಾನ ಶಿಕ್ಷಕರಾದ ವೆಂಕಪ್ಪ ಬಿ ಕಾರ್ಯಕ್ರಮ ನಿರೂಪಿಸಿದರು . ಅಧ್ಯಕ್ಷೀಯ ಭಾಷಣದ ಬಳಿಕ ಗಣಿತ ಶಿಕ್ಷಕ ಸುರೇಶ ವಂದಿಸಿದರು.

Related posts

ಕೊರಿಂಜ ಪಂಚಲಿಂಗೇಶ್ವರ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯಲ್ಲಿ ‘ಫೈರ್ ಸೇಫ್ಟಿ ಅಭಿಯಾನ್’ ಕಾರ್ಯಾಗಾರ

Suddi Udaya

ರಂಝಾನ್ ಪ್ರಯುಕ್ತ ಮದ್ದಡ್ಕದಲ್ಲಿ ವಿಶಿಷ್ಟ ಕಾರ್ಯಕ್ರಮ: 50 ಕುಟುಂಬಕ್ಕೆ ರಂಝಾನ್ ಕಿಟ್ , 25 ಕುಟುಂಬಕ್ಕೆ “ಝಕಾತ್ ದಾನ ನಿಧಿ”, ಶೈಕ್ಷಣಿಕ ನಿಧಿ‌ ಹಸ್ತಾಂತರ

Suddi Udaya

ಸಂಬೋಳ್ಯ ನಿವಾಸಿ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ: ಶೀಘ್ರ ತನಿಖೆಗಾಗಿ ಗೃಹ ಸಚಿವರಿಗೆ ಶಾಸಕ ಹರೀಶ್ ಪೂಂಜ ಮನವಿ

Suddi Udaya

ಬೆಳ್ತಂಗಡಿಯಲ್ಲಿ ಬಿ.ಎ ಮೊಬೈಲ್ ಮತ್ತು ವಾಚ್ ಮಳಿಗೆ ಶುಭಾರಂಭ

Suddi Udaya

ಬೆಳ್ತಂಗಡಿ ಸೌತ್ ಕೆನರಾ ಫೋಟೊಗ್ರಾಫರ್ಸ್ ಅಸೋಸಿಯೇಶನ್ ವತಿಯಿಂದ ಸಹಾಯಾರ್ಥ ನೀಡುವ ಮೂಲಕ ಗಾಂಧಿ ಜಯಂತಿ ಆಚರಣೆ

Suddi Udaya
error: Content is protected !!