25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

ಮಚ್ಚಿನ: ಇಲ್ಲಿಯ ಸರ್ಕಾರಿ ಪ್ರೌಢಶಾಲೆಯಲ್ಲಿ 77ನೇ ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಎಸ್ ಡಿ ಎಮ್ ಸಿ ಕಾರ್ಯಾಧ್ಯಕ್ಷ ರುಕ್ಮಯ ಬಾಳಿಂಜರವರು ಧ್ವಜಾರೋಹಣ ನೆರವೇರಿಸಿದರು. ವಿದ್ಯಾರ್ಥಿಗಳು ಚಿತ್ರಿಸಿರುವ ಪ್ರಜಾಪ್ರಭುತ್ವದ ದೇಗುಲ ಸಂಸತ್ ಭವನದ ಮುಂದೆ ಕನ್ನಡ ಮತ್ತು ಆಂಗ್ಲ ಭಾಷೆ ಎರಡರಲ್ಲೂ ಕಂಠಪಾಠವಾಗಿರುವ ಸಂವಿಧಾನದ ಪೀಠಿಕೆಯನ್ನು ಸಾಮೂಹಿಕವಾಗಿ ಓದಿದರು.

ಈ ಸಂಸತ್ತು ಭವನವನ್ನು ಶಿಕ್ಷಕರ ಮಾರ್ಗದರ್ಶನದೊಂದಿಗೆ 9ನೇ ತರಗತಿಯ ವಿದ್ಯಾರ್ಥಿಗಳು ಸಗಣಿ, ಸುಣ್ಣ, ಜಂಬಿಟ್ಟಿಗೆ ಮಣ್ಣಿನ ಪುಡಿ, ಕೆಂಪು ಮಣ್ಣು, ಮರಳು, ಸಣ್ಣ ಕಲ್ಲು, ರಂಗೋಲಿ ಪುಡಿ ಬಳಸಿ ಚಿತ್ರಿಸಿದರು. ಸಭಾ ಕಾರ್ಯಕ್ರಮದಲ್ಲಿ 2024-25 ನೇ ಸಾಲಿನಲ್ಲಿ ಅತ್ಯುನ್ನತ ಶ್ರೇಣಿ ಪಡೆದ ಮಕ್ಕಳಿಗೆ ದಾನಿ ಶ್ರೀಧರ ಭಟ್ ರವರು ನಗದು ನೀಡಿ ಪ್ರೋತ್ಸಾಹಿಸಿದರು. ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳನ್ನು ವಿಷಯ ಶಿಕ್ಷಕರು ಸನ್ಮಾನಿಸಿದರು. ಅದೇ ರೀತಿ ಕ್ರೀಡೆ, ಹಾಜರಾತಿ, ಕಲಿಕೆ, ಕ್ರಿಯಾಶೀಲತೆ ಇತ್ಯಾದಿ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಶಿಕ್ಷಕರಾದ ಸುಭಾಶ್ಚಂದ್ರ ಪೂಜಾರಿ, ಲೀನಾಸೆರಾವೋ, ದುರ್ಗಾಪ್ರಸಾದ್, ಚಂದಪ್ಪ ಪೂಜಾರಿ, ಅವಿನಾಶ, ಕಚೇರಿ ಸಿಬ್ಬಂದಿ ತೇಜಸ್ವಿ ಮತ್ತು ಎಸ್.ಡಿ,ಎಮ್.ಸಿ ಸದಸ್ಯರು, ಪೋಷಕರು, ಹಿರಿಯ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಸಮಾಜ ವಿಜ್ಞಾನ ಶಿಕ್ಷಕರಾದ ವೆಂಕಪ್ಪ ಬಿ ಕಾರ್ಯಕ್ರಮ ನಿರೂಪಿಸಿದರು . ಅಧ್ಯಕ್ಷೀಯ ಭಾಷಣದ ಬಳಿಕ ಗಣಿತ ಶಿಕ್ಷಕ ಸುರೇಶ ವಂದಿಸಿದರು.

Related posts

ಕಳೆಂಜ ಸಂತ ಸೆಬಾಸ್ಟಿಯನ್ ದೇವಾಲಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರಕ್ಕೆ ಚಾಲನೆ

Suddi Udaya

ಬೆಳ್ತಂಗಡಿ ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ಚರ್ಚ್ ವತಿಯಿಂದ ವಿದ್ಯಾನಿಧಿ ಯೋಜನೆಗೆ ಕೊಡುಗೆ

Suddi Udaya

ಮದರಂಗಿ ಶಾಸ್ತ್ರದ ನಡುವೆ ಮತಚಲಾಯಿಸಿದ ಮದುಮಗಳು: ಮಲವಂತಿಗೆ ಗ್ರಾಮದ ಮೋಹಿನಿಯವರು ಮತಚಲಾಯಿಸಿ ಎಲ್ಲರ ಗಮನ ಸೆಳೆದರು

Suddi Udaya

ಪ್ರಧಾನಿ ನರೇಂದ್ರ ಮೋದಿ ಯವರ ವಿರುದ್ದ ಪ್ರಚೋದನಕಾರಿ ಹೇಳಿಕೆ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವಿರುದ್ಧ ಬೆಳ್ತಂಗಡಿ ಬಿಜೆಪಿ ಯುವಮೋರ್ಚಾದಿಂದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು

Suddi Udaya

ಧರ್ಮಸ್ಥಳ :ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ

Suddi Udaya

ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ಒತ್ತಡ ನಿರ್ವಹಣಾ ಮಾರ್ಗದರ್ಶನ

Suddi Udaya
error: Content is protected !!