September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

ಮಚ್ಚಿನ: ಇಲ್ಲಿಯ ಸರ್ಕಾರಿ ಪ್ರೌಢಶಾಲೆಯಲ್ಲಿ 77ನೇ ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಎಸ್ ಡಿ ಎಮ್ ಸಿ ಕಾರ್ಯಾಧ್ಯಕ್ಷ ರುಕ್ಮಯ ಬಾಳಿಂಜರವರು ಧ್ವಜಾರೋಹಣ ನೆರವೇರಿಸಿದರು. ವಿದ್ಯಾರ್ಥಿಗಳು ಚಿತ್ರಿಸಿರುವ ಪ್ರಜಾಪ್ರಭುತ್ವದ ದೇಗುಲ ಸಂಸತ್ ಭವನದ ಮುಂದೆ ಕನ್ನಡ ಮತ್ತು ಆಂಗ್ಲ ಭಾಷೆ ಎರಡರಲ್ಲೂ ಕಂಠಪಾಠವಾಗಿರುವ ಸಂವಿಧಾನದ ಪೀಠಿಕೆಯನ್ನು ಸಾಮೂಹಿಕವಾಗಿ ಓದಿದರು.

ಈ ಸಂಸತ್ತು ಭವನವನ್ನು ಶಿಕ್ಷಕರ ಮಾರ್ಗದರ್ಶನದೊಂದಿಗೆ 9ನೇ ತರಗತಿಯ ವಿದ್ಯಾರ್ಥಿಗಳು ಸಗಣಿ, ಸುಣ್ಣ, ಜಂಬಿಟ್ಟಿಗೆ ಮಣ್ಣಿನ ಪುಡಿ, ಕೆಂಪು ಮಣ್ಣು, ಮರಳು, ಸಣ್ಣ ಕಲ್ಲು, ರಂಗೋಲಿ ಪುಡಿ ಬಳಸಿ ಚಿತ್ರಿಸಿದರು. ಸಭಾ ಕಾರ್ಯಕ್ರಮದಲ್ಲಿ 2024-25 ನೇ ಸಾಲಿನಲ್ಲಿ ಅತ್ಯುನ್ನತ ಶ್ರೇಣಿ ಪಡೆದ ಮಕ್ಕಳಿಗೆ ದಾನಿ ಶ್ರೀಧರ ಭಟ್ ರವರು ನಗದು ನೀಡಿ ಪ್ರೋತ್ಸಾಹಿಸಿದರು. ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳನ್ನು ವಿಷಯ ಶಿಕ್ಷಕರು ಸನ್ಮಾನಿಸಿದರು. ಅದೇ ರೀತಿ ಕ್ರೀಡೆ, ಹಾಜರಾತಿ, ಕಲಿಕೆ, ಕ್ರಿಯಾಶೀಲತೆ ಇತ್ಯಾದಿ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಶಿಕ್ಷಕರಾದ ಸುಭಾಶ್ಚಂದ್ರ ಪೂಜಾರಿ, ಲೀನಾಸೆರಾವೋ, ದುರ್ಗಾಪ್ರಸಾದ್, ಚಂದಪ್ಪ ಪೂಜಾರಿ, ಅವಿನಾಶ, ಕಚೇರಿ ಸಿಬ್ಬಂದಿ ತೇಜಸ್ವಿ ಮತ್ತು ಎಸ್.ಡಿ,ಎಮ್.ಸಿ ಸದಸ್ಯರು, ಪೋಷಕರು, ಹಿರಿಯ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಸಮಾಜ ವಿಜ್ಞಾನ ಶಿಕ್ಷಕರಾದ ವೆಂಕಪ್ಪ ಬಿ ಕಾರ್ಯಕ್ರಮ ನಿರೂಪಿಸಿದರು . ಅಧ್ಯಕ್ಷೀಯ ಭಾಷಣದ ಬಳಿಕ ಗಣಿತ ಶಿಕ್ಷಕ ಸುರೇಶ ವಂದಿಸಿದರು.

Related posts

ರಿಷಿಕಾ ಕುಂದೇಶ್ವರರಿಗೆ ಕುರಿಯ ವಿಠಲ ಶಾಸ್ತ್ರಿ ಪ್ರತಿಭಾ ಪುರಸ್ಕಾರ

Suddi Udaya

ನೆರಿಯ ವಲಯದ ಭಜನಾ ಪರಿಷತ್ತಿನ ಸಭೆ

Suddi Udaya

ನಾವೂರು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಧರ್ಮಸ್ಥಳ: ಮಹಿಳಾ ಆರೋಗ್ಯ ಮತ್ತು ನ್ಯಾಚುರೋಪತಿ ಉದ್ಘಾಟನೆ

Suddi Udaya

ಜೂ5: ಸಿರಿಕನ್ನಡ ವಾಹಿನಿಯಲ್ಲಿ ‘ಸಖತ್ ಜೋಡಿ’ ರಿಯಾಲಿಟಿ ಶೋ ನಿರೂಪಕನಾಗಿ ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ

Suddi Udaya

ರೆಖ್ಯ: ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಕಾರು ನಡುವೆ ಅಪಘಾತ

Suddi Udaya
error: Content is protected !!