September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಣಿ ಶಿಕ್ಷಣ ಸಂಸ್ಥೆಗೆ ಅಮೇರಿಕದ ಡಾ. ರಾಮಯ್ಯ ಗೌಡ, ಶ್ರೀಮತಿ ಕೋನಿ ದಂಪತಿ ಭೇಟಿ

ಬೆಳ್ತಂಗಡಿ: ವಿದ್ಯಾರ್ಥಿಗಳು ತಮ್ಮ ಸ್ವ ಬುದ್ಧಿ ಶಕ್ತಿಯಿಂದ ಯೋಚನೆ, ಯೋಜನೆಯನ್ನು ಬೆಳೆಸಿಕೊಳ್ಳಬೇಕು. ಜ್ಞಾನವು ಸ್ವಂತ ಆಗಿರಬೇಕು ಹೊರತು ಕೃತಕವಾಗಿರಬಾರದು ಎಂದು ವಾಣಿ ಶಿಕ್ಷಣ ಸಂಸ್ಥೆಯ ಪೋಷಕರು ಹಾಗೂ ದಾನಿಗಳು ಅಮೇರಿಕದ ಕಾರ್ಡಿಯೋ ವಾಸ್ಕಿಲರ್ ಸರ್ಜನ್ ಡಾ. ರಾಮಯ್ಯ ಗೌಡ ಹೇಳಿದರು.

ಅಮೇರಿಕದಲ್ಲಿ ಸುಮಾರು 50 ವರ್ಷಗಳಿಂದ ನೆಲೆಸಿರುವ ಅವರು ವಾಣಿ ಶಿಕ್ಷಣ ಸಂಸ್ಥೆಗೆ ಭೇಟಿಕೊಟ್ಟು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುತ್ತಾ, ಆಧುನಿಕ ತಂತ್ರಜ್ಞಾನದ ಈ ಕಾಲದಲ್ಲಿ ಮೊಬೈಲ್ ಬಳಕೆ ಹೆಚ್ಚಾಗುತ್ತಿರುವುದು ವಿಪರ್ಯಾಸವಾಗಿದೆ. ಅದನ್ನು ನಮ್ಮ ಜ್ಞಾನಕ್ಕೆ ಅನುಸಾರವಾಗಿ ಮಿತವಾಗಿ ಬಳಸಬೇಕು ಎಂದರು.

ಡಾ ರಾಮಯ್ಯ ಗೌಡ ಅವರ ಪತ್ನಿ ಕೋನಿ ಕಾಲೇಜು ವಿದ್ಯಾರ್ಥಿಗಳೊಂದಿಗೆ ಮಾತನಾಡುತ್ತಾ, ಜೀವನಕ್ಕೆ ನಿಜವಾದ ಅಡಿಪಾಯ ಹಾಕುವವರು ಶಿಕ್ಷಕರು. ಇದರಿಂದ ವಿದ್ಯಾರ್ಥಿಗಳ ಭವಿಷ್ಯ ರೂಪುಗೊಳ್ಳುವುದು. ವಿದ್ಯಾರ್ಥಿಗಳು ತಮ್ಮ ಆಸಕ್ತಿಯ ಕ್ಷೇತ್ರದಲ್ಲಿ ಶಿಕ್ಷಣವನ್ನು ಮುಂದುವರಿಸಬೇಕು. ಇದರಿಂದ ನಿರುದ್ಯೋಗ ಮತ್ತು ಆರ್ಥಿಕ ಸಂಕಷ್ಟಗಳನ್ನು ನಿವಾರಿಸಿಕೊಳ್ಳಬಹುದು ಎಂದರು.

ಡಾ ರಾಮಯ್ಯಗೌಡ ದಂಪತಿಗಳು ವಾಣಿ ಶಿಕ್ಷಣ ಸಂಸ್ಥೆಯ ಎಲ್ ಕೆ ಜಿ ವಿದ್ಯಾರ್ಥಿಗಳೊಂದಿಗೂ ಸಂವಾದ ನಡೆಸಿದರು.
ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪಿ ಕುಶಾಲಪ್ಪ ಗೌಡ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ನಾರಾಯಣ ಗೌಡ ದೇವಸ್ಯ, ಕಾರ್ಯದರ್ಶಿ ಗಣೇಶ್ ಗೌಡ, ಜೊತೆ ಕಾರ್ಯದರ್ಶಿ ಶ್ರೀನಾಥ್ ಎಂಕೆ, ಸಂಘಟನಾ ಕಾರ್ಯದರ್ಶಿ ಕೃಷ್ಣಪ್ಪ ಗೌಡ ಸವಣಾಲು, ನಿರ್ದೇಶಕರಾದ ಉಷಾ ವೆಂಕಟರಮಣ ಗೌಡ, ಜಯಾನಂದ ಗೌಡ ಪ್ರಜ್ವಲ್, ದಿನೇಶ್ ಗೌಡ ಕೊಯ್ಯೂರು, ಡಾ. ರಾಮಯ್ಯ ಗೌಡರ ಸಹೋದರ ಗೋಪಾಲ ಗೌಡ ರೂಪ ದಂಪತಿಗಳು, ತಾಲೂಕು ಮಹಿಳಾ ಪ್ರತಿನಿಧಿ ಶೋಭ ನಾರಾಯಣಗೌಡ, ವಾಣಿ ಸಂಸ್ಥೆಯ ಆಡಳಿತಾಧಿಕಾರಿ ಪ್ರಸಾದ್ ಕುಮಾರ್, ವಾಣಿ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯನಿ ಸುಹಾಸಿನಿ, ಉಪಸಿತರಿದ್ದರು.

ವಾಣಿ ಶಿಕ್ಷಣ ಸಂಸ್ಥೆಯ ಗೌರವಾಧ್ಯಕ್ಷ ಹೆಚ್ ಪದ್ಮಗೌಡ ಸ್ವಾಗತಿಸಿ, ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಲಕ್ಷ್ಮೀನಾರಾಯಣ ಕೆ ಧನ್ಯವಾದವಿತ್ತರು. ಕಾಲೇಜಿನ ಪ್ರಾಂಶುಪಾಲರು ವಿಷ್ಣು ಪ್ರಕಾಶ್ ಎಂ ಕಾರ್ಯಕ್ರಮ ನಿರೂಪಿಸಿದರು.

Related posts

ಕನ್ಯಾಡಿ : ಶ್ರೀ ರಾಮ ಕ್ಷೇತ್ರದ ಗುರುದೇವ ಮಠದಲ್ಲಿ ಆಯುಧ ಪೂಜೆ

Suddi Udaya

ಭಾರೀ ಮಳೆ; ಮದ್ದಡ್ಕ ಹೋಟೆಲ್ ಗೆ ನುಗ್ಗಿದ ಮಳೆ ನೀರು

Suddi Udaya

ಶಿಶಿಲ ಸೀಮಾ ಚಿತ್ಪಾವನ ಬ್ರಾಹ್ಮಣ ಸಮಾಜದಿಂದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya

ಒಕ್ಕಲಿಗ ಮುಖಂಡರಿಂದ ಆದಿಚುಂಚನಗಿರಿ ಶ್ರೀಗಳ ಭೇಟಿ

Suddi Udaya

ಕುಂಭಶ್ರೀ ಆಂ.ಮಾ. ಶಾಲೆ ಪಿಯು ಕಾಲೇಜಿನಲ್ಲಿ “ಮಾದಕ ವಸ್ತುಗಳ ದುರುಪಯೋಗ ವಿರೋಧಿ ಜಾಗೃತಿ ಅಭಿಯಾನ”

Suddi Udaya

ಮಿತ್ತಬಾಗಿಲು ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ವಾಸುದೇವ ರಾವ್ ಕಕ್ಕೆನೇಜಿ

Suddi Udaya
error: Content is protected !!