ಉಜಿರೆ: ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ 77 ನೇ ಗಣರಾಜ್ಯೋತ್ಸವವನ್ನು ಜ.26ರಂದು ಸಂಭ್ರಮದಿಂದ ಆಚರಿಸಲಾಯಿತು.
ಶಾಲಾ ಮುಖ್ಯೋಪಾಧ್ಯಾಯರಾದ ವಿದ್ಯಾ ಟಿ ಧ್ವಜಾರೋಹಣ ನೆರವೇರಿಸಿ ಸಂವಿಧಾನದ ಮಹತ್ವ, ವಿಶೇಷತೆಯ ಬಗ್ಗೆ ತಿಳಿಸಿದರು. ಎನ್.ಸಿ.ಸಿ ಅಧಿಕಾರಿಗಳಾದ ಸದಾನಂದ ಮತ್ತು ವಿವೇಕ್ ಜೈನ್ , ಎನ್.ಸಿ.ಸಿ ಆರ್ಮಿ ಮತ್ತು ನೇವಲ್ ಕೆಡೆಟ್ ಗಳು ಹಾಜರಿದ್ದು ರತ್ನವರ್ಮ ಕ್ರೀಡಾಂಗಣದಲ್ಲಿ ಜರಗಿದ ಪಥಸಂಚಲನದಲ್ಲಿ ಭಾಗವಹಿಸಿದರು.
ಶಿಕ್ಷಕ ಚಂದ್ರಶೇಖರ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕ ಪರಮೇಶ್ವರ್ ಧನ್ಯವಾದ ನೀಡಿದರು. ವಿದ್ಯಾರ್ಥಿಗಳು ಶಿಕ್ಷಕವೃಂದ, ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು











