25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹಿಂದೂ ಸಂಗಮ ಆಯೋಜನಾ ಸಮಿತಿ ಬಳಂಜ ಮಂಡಲದಿಂದ “ಹಿಂದೂ ಸಂಗಮ” ಕಾರ್ಯಕ್ರಮ

ಕಾಪಿನಡ್ಕ: ಹಿಂದೂ ಸಂಗಮ ಆಯೋಜನಾ ಸಮಿತಿ ವೇಣೂರು ತಾಲೂಕು ಬಳಂಜ ಮಂಡಲದಿಂದ ಹಿಂದೂ ಸಂಗಮ ಕಾರ್ಯಕ್ರಮವು ತೆಂಕಕಾರಂದೂರು ವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ ಜ 25ರಂದು ನಡೆಯಿತು.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪುತ್ತೂರು ಜಿಲ್ಲಾ ಪ್ರಚಾರಕ ಸುಧೀಶ್ ದಿಕ್ಸೂಚಿ ಭಾಷಣ ಮಾಡಿದರು.

ಹಿಂದೂ ಸಂಗಮದ ಅಧ್ಯಕ್ಷತೆಯನ್ನು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಅನುವಂಶಿಕ ಮೊಕ್ತೇಸರಾದ ಕೆ.ಕೃಷ್ಣ ಸಂಪಿಗೆತ್ತಾಯ ವಹಿಸಿದ್ದರು.

ವೇದಿಕೆಯಲ್ಲಿ ಹಿಂದೂ ಸಂಗಮ ಸಮಿತಿ ಉಪಾಧ್ಯಕ್ಷರಾದ ಪಿ.ಎನ್ ಪುರುಷೋತ್ತಮ, ಹಿಂದೂ ಸಂಗಮ ತಾಲೂಕು ಪ್ರಧಾನ ಕಾರ್ಯದರ್ಶಿ ವಿಜಯ ಗೌಡ,ಹಿಂದೂ ಸಂಗಮ ಆಯೋಜನ ಸಮಿತಿ ಬಳಂಜ ಮಂಡಲದ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ ಉಪಸ್ಥಿತರಿದ್ದರು.

ಗುಂಡೇರಿಯಿಂದ ಸಾವಿರಾರು ಹಿಂದೂ ಬಂಧುಗಳು ಬ್ರಹತ್ ಮೆರವಣಿಗೆಯ ಮೂಲಕ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಸಾಗಿ ಬಂದು ದೇವರಿಗೆ ಪೂಜೆ ಸಲ್ಲಿಸಿದರು. ಶೋಭಾಯಾತ್ರೆಯಲ್ಲಿ ಕುಣಿತಾ ಭಜನೆ, ರಾಮ- ಸೀತೆ, ಭಾರತ ಮಾತೆ ಚಿತ್ರಗಳು ಎಲ್ಲರ ಗಮನ ಸೆಳೆಯಿತು. ಯುವಕರು,ಮಹಿಳೆಯರು,ಮಕ್ಕಳು ಅತ್ಯಂತ ಖುಷಿಯಿಂದ ಪಾಲ್ಗೊಂಡರು. ಬಳಿಕ ಗೋ ಪೂಜೆ ನೇರವೇರಿಸಲಾಯಿತು. ಸಣ್ಣ ಸಣ್ಣ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಪ್ರಮುಖರಾದ ಸಂತೋಷ್ ಕುಮಾರ್ ಕಾಪಿನಡ್ಕ,ಸದಾನಂದ ಪೂಜಾರಿ ಉಂಗಿಲಬೈಲು, ಸಂತೋಷ್ ಹೆಗ್ಡೆ, ಅನಿಲ್ ಕುಮಾರ್ ಮಾಳಿಗೆ ಮನೆ,ಪ್ರಕಾಶ್ ಪುರೂಹಿತ್, ಪ್ರತೀಶ್ ಪೆರಿಂಜೆ, ಸುಧೀರ್ ಆರ್ ಸುವರ್ಣ, ಶ್ರೀನಿವಾಸ್ ರೈ ಕಾರಂದೂರು ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯರು ಭಾಗಿಯಾಗಿದ್ದರು.

ಹಿಂದೂ ಸಂಗಮ ಆಯೋಜನ ಸಮಿತಿ ಬಳಂಜ ಮಂಡಲದ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ ಸ್ವಾಗತಿಸಿದರು. ಆರ್ಯನ್ ಇವರಿಂದ ಅಮೃತ ವಚನ, ನಾರಾಯಣ್ ಕಲಿಕ ಕಾರ್ಯಕ್ರಮ ನಿರೂಪಿಸಿದರು. ವೈಷ್ಣವಿ ಕಲಿಕ ವೈಯಕ್ತಿಕ ಗೀತೆ ಹಾಡಿದರು. ಎಂ.ಪಿ ಶೇಖರ್ ವಂದಿಸಿದರು.

Related posts

ನಿಡ್ಲೆಯಲ್ಲಿ ವರ್ಧಮಾನ ಗ್ಯಾಂಡ್ ಇನ್ ವಸತಿ ಗೃಹ ಶುಭಾರಂಭ

Suddi Udaya

ಎಕ್ಸೆಲ್ ಶೈಕ್ಷಣಿಕ ಸಾಧಕರಿಗೆ ಸನ್ಮಾನ ಮತ್ತು ಪ್ರತಿಭೆಗಳಿಗೆ ಬೆಳಕು ನೀಡುವ ವಿದ್ಯಾರ್ಥಿವೇತನ ವಿತರಣೆ

Suddi Udaya

ವಿಶೇಷ ಸಾಮರ್ಥ್ಯವುಳ್ಳ ಮಕ್ಕಳ ಕ್ರೀಡಾಕೂಟ: ನಾವೂರು ಶಾಲೆ ವಿದ್ಯಾರ್ಥಿ ಜೀವಿತ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಕಾಂಗ್ರೆಸ್‌ ಕಾರ್ಯಕರ್ತರಾದ ಜೋಜಿ ಕಳೆಂಜ ಹಾಗೂ ಗಂಡಿಬಾಗಿಲಿನ ಅಜಿತ್ ಪಿ.ಎಮ್ ರವರು ಬಿಜೆಪಿ ಸೇರ್ಪಡೆ

Suddi Udaya

ಶಾಸಕ ಹರೀಶ್ ಪೂಂಜರಿಂದ ಮ್ಯಾರಥನ್ ಜನಸ್ಪಂದನ ಸಭೆ

Suddi Udaya

ಡಿ.4-5: ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ನೂತನ ಶಿಲಾಮಯ ಧ್ವಜಸ್ತಂಭ ಸ್ಥಾಪನೆ ಮತ್ತು ಶೋಭಾಯಾತ್ರೆ

Suddi Udaya
error: Content is protected !!