ವೇಣೂರು: ಹೊಸಪಟ್ಣ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.

ಮಾಜಿ ಯೋಧರಾದ ಮೋಹನ್ ಜಿ.ಮೂಲ್ಯರವರು ಧ್ವಜಾರೋಹಣ ನೆರವೇರಿಸಿ ಮಾತನಾಡಿ ಶಾಲಾ ಪರಿಸರದ ಬಗ್ಗೆ ಖುಷಿ ವ್ಯಕ್ತಪಡಿಸಿದರು. 90ರ ದಶಕದಲ್ಲಿ ಹತ್ತು ವರ್ಷಗಳ ಕಾಲ ಪ್ರಧಾನಮಂತ್ರಿ ಅವರ ಅಂಗರಕ್ಷಕರಾಗಿದ್ದ ಬಗ್ಗೆ ತನ್ನ ಅನುಭವಗಳನ್ನು ತೆರೆದಿಟ್ಟರು. ಮಕ್ಕಳು ದೇಶ ಸೇವೆಯ ಕಾಯಕದಲ್ಲಿ ತೊಡಗಲು ಪ್ರೇರೇಪಿಸಿದರು. ಮಕ್ಕಳೊಂದಿಗೆ ತನ್ನ ವೃತ್ತಿ ಜೀವನದ ಬಗ್ಗೆ ಅನುಭವಗಳನ್ನು ಹಂಚಿಕೊಂಡರು.

ಸಂವಿಧಾನದ ಪೀಠಿಕೆಯನ್ನು ತುಳು ಭಾಷೆಯಲ್ಲಿ ಹೇಳುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು
ಶಾಲಾ ಮುಖ್ಯ ಶಿಕ್ಷಕಿ ಸ್ವಾಗತಿಸಿದರು. ಶಾಲಾ ಅತಿಥಿ ಶಿಕ್ಷಕಿ ಭವ್ಯ ಧನ್ಯವಾದವನ್ನು ಸಲ್ಲಿಸಿದರು. ಬಂಟ್ವಾಳ ತಾಲೂಕಿನ ನಯನಾಡು ಎಂಬಲ್ಲಿ ನಯನ್ ಬೇಕರಿ ಮಾಲಕರಾದ ಮೆಲ್ವಿಸ್ಟರ್ ಮಕ್ಕಳಿಗೆ ಸಿಹಿ ತಿಂಡಿಯನ್ನು ನೀಡಿದರು.











